Homeಮುಖಪುಟಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ:...

ಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ: ಒವೈಸಿ

ಕೊರೊನಾ ಕಾರಣ ನೀಡಿ ಪ್ರಧಾನಿಯವರು ಪ್ರಶ್ನೋತ್ತರ ವೇಳೆಯಲ್ಲಿ ಉತ್ತರ ನೀಡುವುದಿಲ್ಲ. ಆದರೆ ಜೆಇಇ ಮತ್ತು ನೀಟ್‌ನಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ವಿದ್ಯಾರ್ಥಿಗಳನ್ನು ಕೇಳುತ್ತಾರೆ ಇದು ಅವರ ಆಡಳಿತ ಎಂದು ಕಿಡಿ ಕಾರಿದ್ದಾರೆ.

- Advertisement -
- Advertisement -

ಸೆ.14 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿರುವ ಮಾನ್ಸೂನ್ ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ರದ್ದು ಮಾಡಿರುವುದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ  ವ್ಯಂಗ್ಯವಾಡಿದ್ದಾರೆ. ಕೊರೊನಾ ಕಾರಣಕ್ಕೆ ಪ್ರಶ್ನೋತ್ತರ ಅವಧಿ ರದ್ದು ಮತ್ತು ಶೂನ್ಯವೇಳೆಯ ಅವಧಿ ಕಡಿಮೆಗೊಳಿಸಿರುವ ಸರ್ಕಾರ, ಜೆಇಇ ಮತ್ತು ನೀಟ್ ಪರೀಕ್ಷೆಗಳಲ್ಲಿ ಉತ್ತರಗಳನ್ನು ನೀಡುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸುತ್ತಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಆರೋಪಿಸಿದ್ದಾರೆ.

ಕೊರೊನಾ ಕಾರಣ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು ಮತ್ತು ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ವಿದ್ಯಾರ್ಥಿಗಳು ಮತ್ತು ಆರು ರಾಜ್ಯಗಳ ಮುಖ್ಯಮಂತ್ರಿಗಳು ಸುಪ್ರೀಂಕೋರ್ಟ್‌‌ಗೆ 2 ಬಾರಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ 2 ಬಾರಿಯೂ ಅವರ ಮನವಿಯನ್ನು ತಿರಸ್ಕರಿಸಿತ್ತು. ಹಾಗಾಗಿ ಈಗ ಮಾತ್ರ ಕೊರೊನಾ ಭಯದ ಕಾರಣ ಹೇಳಿ ಸಂಸತ್‌ನಲ್ಲಿ ಪ್ರಶ್ನೋತ್ತರ ಅವಧಿಯನ್ನು ರದ್ದು ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಸಂಸತ್ ಅಧಿವೇಶನದ ಪ್ರಶ್ನೋತ್ತರ ಅವಧಿ ರದ್ದು ಖಂಡಿಸಿ ಪತ್ರ ಬರೆದ 800 ತಜ್ಞರು

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಒವೈಸಿ, ಕೊರೊನಾ ಕಾರಣ ನೀಡಿ ಪ್ರಧಾನಿಯವರು ಪ್ರಶ್ನೋತ್ತರ ವೇಳೆಯಲ್ಲಿ ಉತ್ತರ ನೀಡುವುದಿಲ್ಲ. ಆದರೆ ಜೆಇಇ ಮತ್ತು ನೀಟ್‌ನಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ವಿದ್ಯಾರ್ಥಿಗಳನ್ನು ಕೇಳುತ್ತಾರೆ ಇದು ಅವರ ಆಡಳಿತ ಎಂದು ಕಿಡಿಕಾರಿದ್ದಾರೆ.

ಈಗಾಗಲೇ ಜೆಇಇ ಪರೀಕ್ಷೆಗಳು ಆರಂಭವಾಗಿದ್ದು, ಸೆಪ್ಟಂಬರ್ 14 ರಂದು ನೀಟ್ ಪರೀಕ್ಷೆ ನಡೆಯಲಿದೆ.

ಪ್ರಶ್ನೋತ್ತರ ವೇಳೆಯನ್ನು ರದ್ದು ಮಾಡಿರುವುದರಿಂದ ನಾವು ಸಂಸತ್ತಿನಲ್ಲಿ ಕೋವಿಡ್ ಸಂಬಂಧದ ಪ್ರಶ್ನೆಗಳು ಮತ್ತು ಪೂರ್ವ ಲಡಾಖ್‌ನಲ್ಲಿ ಏನಾಗುತ್ತಿದೆ ಎಂಬುದರ ಕುರಿತು ಚರ್ಚೆ ನಡೆಸಬಹುದೇ ಎಂದು ತಿಳಿದಿಲ್ಲ. ಬಹುಮತ ಹೊಂದಿರುವ ಸರ್ಕಾರ ಸುಗ್ರೀವಾಜ್ಞೆಗಳನ್ನು ತಂದು ಕಾನೂನುಗಳನ್ನು ಮಾಡಬಹುದು ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಆಂಬುಲೆನ್ಸ್‌ನಲ್ಲಿ ಕೊರೊನಾ ರೋಗಿಯ ಮೇಲೆ ಅತ್ಯಾಚಾರ!: ಚಾಲಕನ ಬಂಧನ

ಮುಂದುವರಿದು, ಹಲವಾರು ದೇಶಗಳ ಪ್ರಧಾನ ಮಂತ್ರಿಗಳು ಕೊರೊನಾವೈರಸ್ ಸಂಬಂಧಿತ ವಿಷಯಗಳ ಬಗ್ಗೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಆದರೆ ನಮ್ಮ ಪ್ರಧಾನಿ ಮೋದಿ ಕೇವಲ ವೀಡಿಯೊ ಸಂದೇಶಗಳನ್ನು ಮಾತ್ರ ಹೊರಹಾಕುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಂಸತ್ತಿನ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿರುವುದನ್ನು ಮತ್ತು ಶೂನ್ಯ ವೇಳೆಯ ಅವಧಿಯನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಮತ್ತು ಅವುಗಳನ್ನು ಪೂರ್ಣಪ್ರಮಾಣದಲ್ಲಿ ನಡೆಸುವಂತೆ ಕೋರಿ, ದೇಶದಾದ್ಯಂತ 800 ಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು, ರಾಜಕಾರಣಿಗಳು ಹಾಗೂ ವಿದ್ಯಾರ್ಥಿಗಳು ಸೇರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್‌ ಹುತಾತ್ಮ ದಿನ: ದೇಶಾದ್ಯಂತ ನೆನಪಿನ‌ ಕಾರ್ಯಕ್ರಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...