Homeಮುಖಪುಟಒಬಿಸಿ ಪಟ್ಟಿಯಲ್ಲಿ ಮುಸ್ಲಿಮರ ಮೀಸಲಾತಿ ರದ್ದು; ಹೈಕೋರ್ಟ್‌ನಲ್ಲಿ ಪ್ರಶ್ನೆ

ಒಬಿಸಿ ಪಟ್ಟಿಯಲ್ಲಿ ಮುಸ್ಲಿಮರ ಮೀಸಲಾತಿ ರದ್ದು; ಹೈಕೋರ್ಟ್‌ನಲ್ಲಿ ಪ್ರಶ್ನೆ

- Advertisement -
- Advertisement -

ಒಬಿಸಿ ಪಟ್ಟಿಯೊಳಗಿನ 2 (ಬಿ) ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ನಿರ್ಧಾರವನ್ನು ರಾಜ್ಯ ಸರ್ಕಾರ ಘೋಷಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿದೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, 2(ಬಿ) ವರ್ಗವನ್ನು ರದ್ದುಗೊಳಿಸಿದೆ; ಈ ಹಿಂದೆ ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿಯನ್ನು ಈಗ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಸಮಾನವಾಗಿ ಹಂಚುವುದಾಗಿ ಹೇಳಿದೆ.

ಮುಸ್ಲಿಂ ಜನಾಂಗ ಜಾಗೃತ ವೇದಿಕೆಯು ಇದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಇದಕ್ಕೆ ಕೈಜೋಡಿಸಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಆಗುವ ಅನ್ಯಾಯವನ್ನು ಪ್ರಶ್ನಿಸಲು ಮತ್ತು ಸಮುದಾಯದ ಮೀಸಲಾತಿ ಹೆಚ್ಚಳಕ್ಕಾಗಿ ಹೋರಾಡಲು ಡಾ. ಗುಲ್ಶಾದ್ ಅಹ್ಮದ್ ಬಿ.ಝಡ್ ಅವರು ಈ ವೇದಿಕೆಯನ್ನು ಫೆಬ್ರುವರಿಯಲ್ಲಿ ಸ್ಥಾಪಿಸಿದ್ದಾರೆ.

ಒಬಿಸಿ ಕೋಟಾವನ್ನು ತೆರವು ಮಾಡಿರುವುದರಿಂದ ಮುಸ್ಲಿಮರು ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಬೊಮ್ಮಾಯಿ ಘೋಷಿಸಿದ್ದರು.

ಬಿಜೆಪಿ ಸರ್ಕಾರವು 3 (ಎ) ಮತ್ತು 3 (ಬಿ) ಒಬಿಸಿ ಉಪವರ್ಗಗಳನ್ನು 2 (ಸಿ) ಮತ್ತು 2 (ಡಿ) ನೊಂದಿಗೆ ಬದಲಾಯಿಸಿದೆ. ಕೊಡವರು ಮತ್ತು ಬಣಜಿಗರೊಂದಿಗೆ 3 (ಎ) ನಲ್ಲಿ ಒಕ್ಕಲಿಗರು ಇದ್ದರು. ಇತರ ಸಮುದಾಯಗಳೊಂದಿಗೆ ಹಲವಾರು ಲಿಂಗಾಯತ ಉಪಜಾತಿಗಳು 3(ಬಿ)ಯಲ್ಲಿ ಇದ್ದವು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಎಸ್.ದ್ವಾರಕಾನಾಥ್, “ಮುಸ್ಲಿಮರನ್ನು ಇಡಬ್ಲ್ಯೂಎಸ್‌ಗೆ ಸೇರಿಸಲು ಸಾಧ್ಯವಿಲ್ಲ. ಸಾಮಾಜಿಕವಾಗಿ ಬಲಿಷ್ಠವಾಗಿರುವ ಆದರೆ ಆರ್ಥಿಕವಾಗಿ ದುರ್ಬಲವಾಗಿರುವ ಸಮುದಾಯಗಳಿಗೆ ಮಾತ್ರ ಇಡಬ್ಲ್ಯುಎಸ್‌. ಮುಸ್ಲಿಮರು ಆರ್ಥಿಕವಾಗಿ ದುರ್ಬಲರು ಎಂದು ಇದುವರೆಗೆ ಯಾವುದೇ ಆಯೋಗ ಹೇಳಿಲ್ಲ. ಆದರೆ ಅನೇಕ ಅಧ್ಯಯನಗಳು ಮುಸ್ಲಿಮರು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ತೀರ್ಮಾನಿಸಿವೆ” ಎಂದಿದ್ದಾರೆ.

“ಒಬಿಸಿ ಪಟ್ಟಿಗೆ ಬದಲಾವಣೆಗಳನ್ನು ಮಾಡಲು ಈ ಅಧ್ಯಯನಗಳು ನಡೆದಿರಬೇಕು. ಮೇಲಾಗಿ, 3(ಎ), 3(ಬಿ) ವರ್ಗಗಳನ್ನು 2(ಸಿ) ಮತ್ತು 2(ಡಿ) ನೊಂದಿಗೆ ಬದಲಾಯಿಸುವ ಲಾಜಿಕ್ ಅರ್ಥವಾಗುತ್ತಿಲ್ಲ. ಹೆಸರು ಮಾತ್ರ ಬದಲಾಗಿದೆ, ಆದರೆ ಸಂಯೋಜನೆ ಬದಲಾಗಿಲ್ಲ. ವಾಸ್ತವವಾಗಿ, ಅಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರೊಂದಿಗೆ ಅನೇಕ ಸಮುದಾಯಗಳಿವೆ. 4% ಮೀಸಲಾತಿಯ ಪ್ರಯೋಜನಗಳನ್ನು ನೀವು ಇತರರಿಗೆ ಹೇಗೆ ನಿರಾಕರಿಸುತ್ತೀರಿ? ಈಗ ಹಂಚುವ ಮೀಸಲಾತಿಯು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮಾತ್ರ ಸಿಗುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ? ಈ ಬಗ್ಗೆ ಅವರು ಸ್ಪಷ್ಟನೆ ನೀಡುತ್ತಿಲ್ಲ. ಅಲ್ಪಾವಧಿಯ ರಾಜಕೀಯ ಲಾಭವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟೀಕಿಸಿದ್ದಾರೆ.

ಮುಸ್ಲಿಂ ಜನಾಂಗದ ಜಾಗೃತ ವೇದಿಕೆಯು ಪತ್ರಿಕಾ ಪ್ರಕಟಣೆ ನೀಡಿದೆ. “ಒಬಿಸಿ ಪಟ್ಟಿಯ ಪರಿಷ್ಕರಣೆ ಮತ್ತು ಮುಸ್ಲಿಮರಿಗೆ ಮೀಸಲಾತಿ ಸೌಲಭ್ಯಗಳನ್ನು ನಿರಾಕರಿಸುವುದು ಸಮಾಜವನ್ನು ಶೋಚನೀಯ ಸ್ಥಿತಿಯತ್ತ ಕೊಂಡೊಯ್ಯುವ ಪ್ರಯತ್ನವಾಗಿದೆ. ಮುಸ್ಲಿಂ ಸಮುದಾಯದ ಜನಸಂಖ್ಯೆ ಮತ್ತು ಪರಿಸ್ಥಿತಿಗಳನ್ನು ಪರಿಗಣಿಸಿ, ನಾವು ಮೀಸಲಾತಿಯನ್ನು ನಮ್ಮ ಸಾಂವಿಧಾನಿಕ ಹಕ್ಕು ಎಂದು ಪ್ರತಿಪಾದಿಸುತ್ತೇವೆ. ಅದನ್ನು ಮರುಸ್ಥಾಪಿಸಲು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಚಪ್ಪರ್‌ಬಂದ್‌ನಂತಹ ಸಮುದಾಯಗಳನ್ನು ಒಳಗೊಂಡಂತೆ ಕರ್ನಾಟಕ ಒಬಿಸಿ ಪಟ್ಟಿಯ ವರ್ಗ 1ರಲ್ಲಿ ಎಂಟು ಮುಸ್ಲಿಂ ಉಪಜಾತಿಗಳಿವೆ ಎಂಬುದನ್ನು ಗಮನಿಸಬಹುದು. ಈ ಸಮುದಾಯಗಳು ಇನ್ನೂ ಒಬಿಸಿ ಮೀಸಲಾತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...