Homeಮುಖಪುಟಒಬಿಸಿ ಪಟ್ಟಿಯಲ್ಲಿ ಮುಸ್ಲಿಮರ ಮೀಸಲಾತಿ ರದ್ದು; ಹೈಕೋರ್ಟ್‌ನಲ್ಲಿ ಪ್ರಶ್ನೆ

ಒಬಿಸಿ ಪಟ್ಟಿಯಲ್ಲಿ ಮುಸ್ಲಿಮರ ಮೀಸಲಾತಿ ರದ್ದು; ಹೈಕೋರ್ಟ್‌ನಲ್ಲಿ ಪ್ರಶ್ನೆ

- Advertisement -
- Advertisement -

ಒಬಿಸಿ ಪಟ್ಟಿಯೊಳಗಿನ 2 (ಬಿ) ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ನಿರ್ಧಾರವನ್ನು ರಾಜ್ಯ ಸರ್ಕಾರ ಘೋಷಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿದೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, 2(ಬಿ) ವರ್ಗವನ್ನು ರದ್ದುಗೊಳಿಸಿದೆ; ಈ ಹಿಂದೆ ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿಯನ್ನು ಈಗ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಸಮಾನವಾಗಿ ಹಂಚುವುದಾಗಿ ಹೇಳಿದೆ.

ಮುಸ್ಲಿಂ ಜನಾಂಗ ಜಾಗೃತ ವೇದಿಕೆಯು ಇದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಇದಕ್ಕೆ ಕೈಜೋಡಿಸಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಆಗುವ ಅನ್ಯಾಯವನ್ನು ಪ್ರಶ್ನಿಸಲು ಮತ್ತು ಸಮುದಾಯದ ಮೀಸಲಾತಿ ಹೆಚ್ಚಳಕ್ಕಾಗಿ ಹೋರಾಡಲು ಡಾ. ಗುಲ್ಶಾದ್ ಅಹ್ಮದ್ ಬಿ.ಝಡ್ ಅವರು ಈ ವೇದಿಕೆಯನ್ನು ಫೆಬ್ರುವರಿಯಲ್ಲಿ ಸ್ಥಾಪಿಸಿದ್ದಾರೆ.

ಒಬಿಸಿ ಕೋಟಾವನ್ನು ತೆರವು ಮಾಡಿರುವುದರಿಂದ ಮುಸ್ಲಿಮರು ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಬೊಮ್ಮಾಯಿ ಘೋಷಿಸಿದ್ದರು.

ಬಿಜೆಪಿ ಸರ್ಕಾರವು 3 (ಎ) ಮತ್ತು 3 (ಬಿ) ಒಬಿಸಿ ಉಪವರ್ಗಗಳನ್ನು 2 (ಸಿ) ಮತ್ತು 2 (ಡಿ) ನೊಂದಿಗೆ ಬದಲಾಯಿಸಿದೆ. ಕೊಡವರು ಮತ್ತು ಬಣಜಿಗರೊಂದಿಗೆ 3 (ಎ) ನಲ್ಲಿ ಒಕ್ಕಲಿಗರು ಇದ್ದರು. ಇತರ ಸಮುದಾಯಗಳೊಂದಿಗೆ ಹಲವಾರು ಲಿಂಗಾಯತ ಉಪಜಾತಿಗಳು 3(ಬಿ)ಯಲ್ಲಿ ಇದ್ದವು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಎಸ್.ದ್ವಾರಕಾನಾಥ್, “ಮುಸ್ಲಿಮರನ್ನು ಇಡಬ್ಲ್ಯೂಎಸ್‌ಗೆ ಸೇರಿಸಲು ಸಾಧ್ಯವಿಲ್ಲ. ಸಾಮಾಜಿಕವಾಗಿ ಬಲಿಷ್ಠವಾಗಿರುವ ಆದರೆ ಆರ್ಥಿಕವಾಗಿ ದುರ್ಬಲವಾಗಿರುವ ಸಮುದಾಯಗಳಿಗೆ ಮಾತ್ರ ಇಡಬ್ಲ್ಯುಎಸ್‌. ಮುಸ್ಲಿಮರು ಆರ್ಥಿಕವಾಗಿ ದುರ್ಬಲರು ಎಂದು ಇದುವರೆಗೆ ಯಾವುದೇ ಆಯೋಗ ಹೇಳಿಲ್ಲ. ಆದರೆ ಅನೇಕ ಅಧ್ಯಯನಗಳು ಮುಸ್ಲಿಮರು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ತೀರ್ಮಾನಿಸಿವೆ” ಎಂದಿದ್ದಾರೆ.

“ಒಬಿಸಿ ಪಟ್ಟಿಗೆ ಬದಲಾವಣೆಗಳನ್ನು ಮಾಡಲು ಈ ಅಧ್ಯಯನಗಳು ನಡೆದಿರಬೇಕು. ಮೇಲಾಗಿ, 3(ಎ), 3(ಬಿ) ವರ್ಗಗಳನ್ನು 2(ಸಿ) ಮತ್ತು 2(ಡಿ) ನೊಂದಿಗೆ ಬದಲಾಯಿಸುವ ಲಾಜಿಕ್ ಅರ್ಥವಾಗುತ್ತಿಲ್ಲ. ಹೆಸರು ಮಾತ್ರ ಬದಲಾಗಿದೆ, ಆದರೆ ಸಂಯೋಜನೆ ಬದಲಾಗಿಲ್ಲ. ವಾಸ್ತವವಾಗಿ, ಅಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರೊಂದಿಗೆ ಅನೇಕ ಸಮುದಾಯಗಳಿವೆ. 4% ಮೀಸಲಾತಿಯ ಪ್ರಯೋಜನಗಳನ್ನು ನೀವು ಇತರರಿಗೆ ಹೇಗೆ ನಿರಾಕರಿಸುತ್ತೀರಿ? ಈಗ ಹಂಚುವ ಮೀಸಲಾತಿಯು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮಾತ್ರ ಸಿಗುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ? ಈ ಬಗ್ಗೆ ಅವರು ಸ್ಪಷ್ಟನೆ ನೀಡುತ್ತಿಲ್ಲ. ಅಲ್ಪಾವಧಿಯ ರಾಜಕೀಯ ಲಾಭವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟೀಕಿಸಿದ್ದಾರೆ.

ಮುಸ್ಲಿಂ ಜನಾಂಗದ ಜಾಗೃತ ವೇದಿಕೆಯು ಪತ್ರಿಕಾ ಪ್ರಕಟಣೆ ನೀಡಿದೆ. “ಒಬಿಸಿ ಪಟ್ಟಿಯ ಪರಿಷ್ಕರಣೆ ಮತ್ತು ಮುಸ್ಲಿಮರಿಗೆ ಮೀಸಲಾತಿ ಸೌಲಭ್ಯಗಳನ್ನು ನಿರಾಕರಿಸುವುದು ಸಮಾಜವನ್ನು ಶೋಚನೀಯ ಸ್ಥಿತಿಯತ್ತ ಕೊಂಡೊಯ್ಯುವ ಪ್ರಯತ್ನವಾಗಿದೆ. ಮುಸ್ಲಿಂ ಸಮುದಾಯದ ಜನಸಂಖ್ಯೆ ಮತ್ತು ಪರಿಸ್ಥಿತಿಗಳನ್ನು ಪರಿಗಣಿಸಿ, ನಾವು ಮೀಸಲಾತಿಯನ್ನು ನಮ್ಮ ಸಾಂವಿಧಾನಿಕ ಹಕ್ಕು ಎಂದು ಪ್ರತಿಪಾದಿಸುತ್ತೇವೆ. ಅದನ್ನು ಮರುಸ್ಥಾಪಿಸಲು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಚಪ್ಪರ್‌ಬಂದ್‌ನಂತಹ ಸಮುದಾಯಗಳನ್ನು ಒಳಗೊಂಡಂತೆ ಕರ್ನಾಟಕ ಒಬಿಸಿ ಪಟ್ಟಿಯ ವರ್ಗ 1ರಲ್ಲಿ ಎಂಟು ಮುಸ್ಲಿಂ ಉಪಜಾತಿಗಳಿವೆ ಎಂಬುದನ್ನು ಗಮನಿಸಬಹುದು. ಈ ಸಮುದಾಯಗಳು ಇನ್ನೂ ಒಬಿಸಿ ಮೀಸಲಾತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....