Homeಕರ್ನಾಟಕಶಿಕ್ಷೆಗೊಳಗಾದ ಜನಪ್ರತಿನಿಧಿಗಳ ಸ್ಥಾನ ರದ್ದು: ಶಾಸಕ ನೆಹರು ಓಲೇಕಾರ್‌ಗೊಂದು ನ್ಯಾಯ, ರಾಹುಲ್‌ಗೊಂದು ನ್ಯಾಯವೇ?

ಶಿಕ್ಷೆಗೊಳಗಾದ ಜನಪ್ರತಿನಿಧಿಗಳ ಸ್ಥಾನ ರದ್ದು: ಶಾಸಕ ನೆಹರು ಓಲೇಕಾರ್‌ಗೊಂದು ನ್ಯಾಯ, ರಾಹುಲ್‌ಗೊಂದು ನ್ಯಾಯವೇ?

- Advertisement -
- Advertisement -

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ದಿನದಿಂದ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ ಎಂದು ಲೋಕಸಭಾ ಸೆಕ್ರೆಟರಿಯೇಟ್‌ ಪ್ರಕಟಣೆ ಹೊರಡಿಸಿದ್ದಾರೆ. ಆದರೆ ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣದಲ್ಲಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ಗೆ 2023ರ ಫೆಬ್ರುವರಿಯಲ್ಲಿ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆದರೂ ಈವರೆಗೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಿಲ್ಲ. ಇದು ನೆಹರುಗೆ ಒಂದು ನ್ಯಾಯ, ಗಾಂಧಿಗೊಂದು ನ್ಯಾಯವೇ ಎನ್ನುವ ಪ್ರಶ್ನೆ ಮೂಡಿಸಿದೆ.

ನ್ಯಾಯಾಲಯವು ಜನಪ್ರತಿನಿಧಿಗೆ ಆರೋಪಿತ ಎಂದು ಹೇಳಿದ ದಿನದಿಂದಲೇ ಅವರ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎನ್ನುವುದಾದರೆ, ಈಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದಂತೆ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಶಾಸಕ ಸ್ಥಾನವನ್ನೂ ರದ್ದುಗೊಳಿಸಬೇಕಿತ್ತು. ಆದರೆ ಇಲ್ಲಿ ಬಿಜೆಪಿ ಶಾಸಕನಿಗೆ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ, ಅದಕ್ಕೆ ತಡೆಯಾಜ್ಞೆ ತರಲು ಹೈಕೋರ್ಟಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕಾಂಗ್ರೆಸ್ ನಾಯಕನಿಗೆ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವೇ ಒಂದು ತಿಂಗಳ ಕಾಲಾವಕಾಶ ನೀಡಿರುವಾಗ, ಸಂಸತ್ತು ಅದಕ್ಕೆ ಅವಕಾಶ ನೀಡದೇ ತಕ್ಷಣವೇ ಅವರ ಸಂಸತ್ ಸ್ಥಾನವನ್ನು ರದ್ದುಗೊಳಿಸಿದೆ.

ರಾಹುಲ್‌ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ ಪ್ರಜಾಪ್ರಭುತ್ವದದ ಬಗೆಗಿನ ಟೀಕೆ ವಿಚಾರಕ್ಕೆ ಆಡಳಿತರೂಢ ಬಿಜೆಪಿ ಪಕ್ಷ ಕ್ಷಮೆ ಕೇಳುವಂತೆ ಪಟ್ಟುಹಿಡಿಯಿತು. ಆದರೆ ರಾಹುಲ್‌ ಗಾಂಧಿ ಅವರು, ಕ್ಷಮೆ ಕೇಳುವ ತಪ್ಪುನ್ನು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ, ನನಗೆ ಅದರ ಬಗ್ಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಿ ಎಂದು ಕೇಳಿದ್ದರು. ಆದರೆ ಬಿಜೆಪಿ ಅದಕ್ಕೆ ಅವಕಾಶ ನೀಡದೇ ರಾಹುಲ್ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಮುಂದಾಯಿತು.

ರಾಹುಲ್ ಅನರ್ಹತೆಗೆ ಕಾರಣ

ಚುನಾವಣಾ ಭಾಷಣಗಳಲ್ಲಿ ಆರೋಪ ಪ್ರತ್ಯಾರೋಪ ಮಾಡುವುದು ಸಾಮಾನ್ಯ, ಆದರೆ ರಾಹುಲ್ 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಮಾತನಾಡುವಾಗ, ”ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ” ಎಂದು ಪ್ರಶ್ನಿಸಿದ್ದರು.

ರಾಹುಲ್‌ ಅವರು ತಮ್ಮ ಹೇಳಿಕೆ ಮೂಲಕ ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಕಾಂಗ್ರೆಸ್‌ ಸಂಸದನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದೇ ವಿಚಾರವಾಗಿ ಇದೀಗ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ಸೂರತ್‌ ನ್ಯಾಯಾಲಯವು ತಪ್ಪಿತಸ್ತ ಎಂದು ಹೇಳಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡದೆ.

ನೆಹರು ಓಲೆಕಾರ್ ಅನರ್ಹತೆ ಯಾಕಿಲ್ಲ?

ನೆಹರು ಓಲೆಕಾರ್

ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್ ಹಾಗೂ ಅವರ ಇಬ್ಬರು ಪುತ್ರರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ 2023 ಫೆಬ್ರುವರಿಯಲ್ಲಿಯೇ ಎರಡು ವರ್ಷ ಜೈಲು ‌ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

50 ಲಕ್ಷ ರೂ. ಮೊತ್ತದ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಮತ್ತು ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲ ಕಾಮಗಾರಿಯಲ್ಲಿ ಶಾಸಕ ಓಲೆಕಾರ್‌ ಅವರು ಸ್ವಜನ ಪಕ್ಷಪಾತ ಮಾಡಿ, ಕಾಮಗಾರಿಯನ್ನು ಪುತ್ರರಿಗೇ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್, ಶಾಸಕ ನೆಹರು ಓಲೆಕಾರ್, ಇಬ್ಬರು ಪುತ್ರರಾದ ದೇವರಾಜ್ ಓಲೆಕಾರ್ ಹಾಗೂ ಮಂಜುನಾಥ್ ಓಲೆಕಾರ್ ಅವರಿಗೆ ಭ್ರಷ್ಟಾಚಾರ ತಡೆ ಕಾಯಿದೆ ಅಡಿ ಶಿಕ್ಷೆ ಪ್ರಕಟಿಸಲಾಗಿದೆ. ಶಾಸಕ ಹಾಗೂ ಅವರ ಪುತ್ರರಿಗೆ ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ಎರಡು ಸಾವಿರ ರೂಪಾಯಿ ದಂಡವನ್ನು ನ್ಯಾಯಾಲಯ ವಿಧಿಸಿದೆ.

ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆ ನೀಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಿಂದಲೇ‌ ಅವರಿಗೆ ಜಾಮೀನು ಮಂಜೂರು ಮಾಡಲಾಗುತ್ತದೆ.

ನೆಹರು ಓಲೆಕಾರ್‌ ಅವರಿಗೆ ಶಿಕ್ಷೆ ಪ್ರಕಟವಾಗಿ ಎರಡು ತಿಂಗಳ ಕಳೆಯುತ್ತಾ ಬಂದರೂ ಅವರ ಶಾಸಕ ಸ್ಥಾನ ರದ್ದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿಲ್ಲ.  ಅವರು ತಮ್ಮ ವಿರುದ್ಧದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ‘ಮೋದಿ ಎಂದರೆ ಭ್ರಷ್ಟಾಚಾರ’: ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...