Homeಕರ್ನಾಟಕಶಿಕ್ಷೆಗೊಳಗಾದ ಜನಪ್ರತಿನಿಧಿಗಳ ಸ್ಥಾನ ರದ್ದು: ಶಾಸಕ ನೆಹರು ಓಲೇಕಾರ್‌ಗೊಂದು ನ್ಯಾಯ, ರಾಹುಲ್‌ಗೊಂದು ನ್ಯಾಯವೇ?

ಶಿಕ್ಷೆಗೊಳಗಾದ ಜನಪ್ರತಿನಿಧಿಗಳ ಸ್ಥಾನ ರದ್ದು: ಶಾಸಕ ನೆಹರು ಓಲೇಕಾರ್‌ಗೊಂದು ನ್ಯಾಯ, ರಾಹುಲ್‌ಗೊಂದು ನ್ಯಾಯವೇ?

- Advertisement -
- Advertisement -

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ದಿನದಿಂದ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ ಎಂದು ಲೋಕಸಭಾ ಸೆಕ್ರೆಟರಿಯೇಟ್‌ ಪ್ರಕಟಣೆ ಹೊರಡಿಸಿದ್ದಾರೆ. ಆದರೆ ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣದಲ್ಲಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ಗೆ 2023ರ ಫೆಬ್ರುವರಿಯಲ್ಲಿ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆದರೂ ಈವರೆಗೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಿಲ್ಲ. ಇದು ನೆಹರುಗೆ ಒಂದು ನ್ಯಾಯ, ಗಾಂಧಿಗೊಂದು ನ್ಯಾಯವೇ ಎನ್ನುವ ಪ್ರಶ್ನೆ ಮೂಡಿಸಿದೆ.

ನ್ಯಾಯಾಲಯವು ಜನಪ್ರತಿನಿಧಿಗೆ ಆರೋಪಿತ ಎಂದು ಹೇಳಿದ ದಿನದಿಂದಲೇ ಅವರ ಸ್ಥಾನವನ್ನು ಕಳೆದುಕೊಳ್ಳುತ್ತಾರೆ ಎನ್ನುವುದಾದರೆ, ಈಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದಂತೆ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಶಾಸಕ ಸ್ಥಾನವನ್ನೂ ರದ್ದುಗೊಳಿಸಬೇಕಿತ್ತು. ಆದರೆ ಇಲ್ಲಿ ಬಿಜೆಪಿ ಶಾಸಕನಿಗೆ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ, ಅದಕ್ಕೆ ತಡೆಯಾಜ್ಞೆ ತರಲು ಹೈಕೋರ್ಟಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕಾಂಗ್ರೆಸ್ ನಾಯಕನಿಗೆ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವೇ ಒಂದು ತಿಂಗಳ ಕಾಲಾವಕಾಶ ನೀಡಿರುವಾಗ, ಸಂಸತ್ತು ಅದಕ್ಕೆ ಅವಕಾಶ ನೀಡದೇ ತಕ್ಷಣವೇ ಅವರ ಸಂಸತ್ ಸ್ಥಾನವನ್ನು ರದ್ದುಗೊಳಿಸಿದೆ.

ರಾಹುಲ್‌ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ ಪ್ರಜಾಪ್ರಭುತ್ವದದ ಬಗೆಗಿನ ಟೀಕೆ ವಿಚಾರಕ್ಕೆ ಆಡಳಿತರೂಢ ಬಿಜೆಪಿ ಪಕ್ಷ ಕ್ಷಮೆ ಕೇಳುವಂತೆ ಪಟ್ಟುಹಿಡಿಯಿತು. ಆದರೆ ರಾಹುಲ್‌ ಗಾಂಧಿ ಅವರು, ಕ್ಷಮೆ ಕೇಳುವ ತಪ್ಪುನ್ನು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ, ನನಗೆ ಅದರ ಬಗ್ಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಿ ಎಂದು ಕೇಳಿದ್ದರು. ಆದರೆ ಬಿಜೆಪಿ ಅದಕ್ಕೆ ಅವಕಾಶ ನೀಡದೇ ರಾಹುಲ್ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಮುಂದಾಯಿತು.

ರಾಹುಲ್ ಅನರ್ಹತೆಗೆ ಕಾರಣ

ಚುನಾವಣಾ ಭಾಷಣಗಳಲ್ಲಿ ಆರೋಪ ಪ್ರತ್ಯಾರೋಪ ಮಾಡುವುದು ಸಾಮಾನ್ಯ, ಆದರೆ ರಾಹುಲ್ 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಮಾತನಾಡುವಾಗ, ”ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ” ಎಂದು ಪ್ರಶ್ನಿಸಿದ್ದರು.

ರಾಹುಲ್‌ ಅವರು ತಮ್ಮ ಹೇಳಿಕೆ ಮೂಲಕ ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಕಾಂಗ್ರೆಸ್‌ ಸಂಸದನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದೇ ವಿಚಾರವಾಗಿ ಇದೀಗ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ಸೂರತ್‌ ನ್ಯಾಯಾಲಯವು ತಪ್ಪಿತಸ್ತ ಎಂದು ಹೇಳಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡದೆ.

ನೆಹರು ಓಲೆಕಾರ್ ಅನರ್ಹತೆ ಯಾಕಿಲ್ಲ?

ನೆಹರು ಓಲೆಕಾರ್

ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್ ಹಾಗೂ ಅವರ ಇಬ್ಬರು ಪುತ್ರರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ 2023 ಫೆಬ್ರುವರಿಯಲ್ಲಿಯೇ ಎರಡು ವರ್ಷ ಜೈಲು ‌ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

50 ಲಕ್ಷ ರೂ. ಮೊತ್ತದ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಮತ್ತು ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲ ಕಾಮಗಾರಿಯಲ್ಲಿ ಶಾಸಕ ಓಲೆಕಾರ್‌ ಅವರು ಸ್ವಜನ ಪಕ್ಷಪಾತ ಮಾಡಿ, ಕಾಮಗಾರಿಯನ್ನು ಪುತ್ರರಿಗೇ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್, ಶಾಸಕ ನೆಹರು ಓಲೆಕಾರ್, ಇಬ್ಬರು ಪುತ್ರರಾದ ದೇವರಾಜ್ ಓಲೆಕಾರ್ ಹಾಗೂ ಮಂಜುನಾಥ್ ಓಲೆಕಾರ್ ಅವರಿಗೆ ಭ್ರಷ್ಟಾಚಾರ ತಡೆ ಕಾಯಿದೆ ಅಡಿ ಶಿಕ್ಷೆ ಪ್ರಕಟಿಸಲಾಗಿದೆ. ಶಾಸಕ ಹಾಗೂ ಅವರ ಪುತ್ರರಿಗೆ ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ಎರಡು ಸಾವಿರ ರೂಪಾಯಿ ದಂಡವನ್ನು ನ್ಯಾಯಾಲಯ ವಿಧಿಸಿದೆ.

ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆ ನೀಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಿಂದಲೇ‌ ಅವರಿಗೆ ಜಾಮೀನು ಮಂಜೂರು ಮಾಡಲಾಗುತ್ತದೆ.

ನೆಹರು ಓಲೆಕಾರ್‌ ಅವರಿಗೆ ಶಿಕ್ಷೆ ಪ್ರಕಟವಾಗಿ ಎರಡು ತಿಂಗಳ ಕಳೆಯುತ್ತಾ ಬಂದರೂ ಅವರ ಶಾಸಕ ಸ್ಥಾನ ರದ್ದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿಲ್ಲ.  ಅವರು ತಮ್ಮ ವಿರುದ್ಧದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ‘ಮೋದಿ ಎಂದರೆ ಭ್ರಷ್ಟಾಚಾರ’: ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...