Homeಮುಖಪುಟವಿಶ್ವವಿದ್ಯಾನಿಲಯಗಳ ಪರೀಕ್ಷೆ ರದ್ದತಿ; ಅಂತಿಮ ತೀರ್ಪು ನೀಡಿದ ಸುಪ್ರೀಂ ಕೋರ್ಟ್!

ವಿಶ್ವವಿದ್ಯಾನಿಲಯಗಳ ಪರೀಕ್ಷೆ ರದ್ದತಿ; ಅಂತಿಮ ತೀರ್ಪು ನೀಡಿದ ಸುಪ್ರೀಂ ಕೋರ್ಟ್!

ಪರೀಕ್ಷೆ ರದ್ದತಿ ಸಾಧ್ಯವಿಲ್ಲ. ಆದರೆ ಅಂತಿಮ ದಿನಾಂಕವನ್ನು ವಿಸ್ತರಿಸುವಂತೆ ಯುಜಿಸಿಯನ್ನು ಕೇಳುವುದಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದೆ ವಿದ್ಯಾರ್ಥಿಗಳಿಗೆ ಪದವಿ ನೀಡಲು ಸಾಧ್ಯವಿಲ್ಲ. ಆದರೆ ಅಂತಿಮ ದಿನಾಂಕವನ್ನು ವಿಸ್ತರಿಸುವಂತೆ ಯುಜಿಸಿಯನ್ನು ಕೇಳುವುದಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ.

ಸೆಪ್ಟೆಂಬರ್ 30 ರೊಳಗೆ ನಡೆಸಬೇಕಾಗಿರುವ ಅಂತಿಮ ವರ್ಷದ/ಮಧ್ಯಂತರ ಸೆಮಿಸ್ಟರ್ ನ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದರ ಕುರಿತಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ, ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ಅದರ ತೀರ್ಪನ್ನು ಪ್ರಕಟಿಸಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ಸಾಂಕ್ರಾಮಿಕ ರೋಗದ ನಡುವೆ ಪರೀಕ್ಷೆಗಳನ್ನು ರದ್ದುಗೊಳಿಸಲು ಮಹಾರಾಷ್ಟ್ರ ರಾಜ್ಯ ತೆಗೆದುಕೊಂಡ ನಿರ್ಧಾರವು ಮೇಲುಗೈ ಸಾಧಿಸುತ್ತದೆ ಎಂದು ನ್ಯಾಯಪೀಠ ಇಂದು ಅಭಿಪ್ರಾಯಪಟ್ಟಿದೆ. ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನವನ್ನು ಅನುಸರಿಸುವಾಗ, ಕೊರೊನಾ ಸಾಂಕ್ರಾಮಿಕದ ಮಧ್ಯೆ ಎಲ್ಲಾ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಬೇಕೆಂದು ಯುಜಿಸಿ ತನ್ನ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಆದೇಶಿಸಿದೆ.

ಇದನ್ನೂ ಓದಿ: ಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಯುಜಿಸಿ ಜುಲೈ 6 ರಂದು ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿತ್ತು. ಪರೀಕ್ಷೆಗಳು ನಡೆಯದಿದ್ದರೆ ವಿದ್ಯಾರ್ಥಿಗಳ ಭವಿಷ್ಯವು ಅಪಾಯಕ್ಕೆ ಸಿಲುಕುತ್ತದೆ ಎಂದು ಯುಜಿಸಿ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು.

ಅಭಿಷೇಕ್ ಮನು ಸಿಂಗ್ವಿ, ಶ್ಯಾಮ್ ದಿವಾನ್, ಮತ್ತು ಅರವಿಂದ ದತಾರ್ ಸೇರಿದಂತೆ ಹಿರಿಯ ವಕೀಲರು ವಿದ್ಯಾರ್ಥಿಗಳ ಹಿತಾಸಕ್ತಿ ಪರವಾಗಿ ವಾದಿಸಿದರು. ಹೆಚ್ಚುತ್ತಿರುವ ಕೊರೊನಾ ಅಂಕಿ ಅಂಶಗಳ ಕಾರಣದಿಂದಾಗಿ ಕೆಲವು ರಾಜ್ಯ ಸರ್ಕಾರಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧಾರ ತೆಗೆದುಕೊಂಡವು ಎಂದು ಹೇಳಿದರು.

ಕೊರೊನಾ ಸಾಂಕ್ರಾಮಿಕ ರೋಗವು ಇನ್ನೂ ಆರಂಭಿಕ ಹಂತದಲ್ಲಿದ್ದಾಗ ಏಪ್ರಿಲ್‌ನಲ್ಲಿ ಪರೀಕ್ಷೆಗಳನ್ನು ನಡೆಸಲು ನಿರಾಕರಿಸಿದ ಹಿಂದಿನ ಯುಜಿಸಿಯ ತಾರ್ಕಿಕತೆಯನ್ನು ಅವರು ಪ್ರಶ್ನಿಸಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಯುಜಿಸಿಯು ಪರೀಕ್ಷೆಗಳಿಲ್ಲದೆ ಪದವಿಗಳನ್ನು ನೀಡಲು ಸಿದ್ಧವಿಲ್ಲ. ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಾದಿಸಿದರು.

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಈ ವರ್ಷ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದಿರಲು ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳು ತೆಗೆದುಕೊಂಡ ನಿಲುವಿಗೆ ಯುಜಿಸಿ ವಿರೋಧ ವ್ಯಕ್ತಪಡಿಸಿತ್ತು.

ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲು, ಯುಜಿಸಿ ಹೊರಡಿಸಿರುವ ಸುತ್ತೋಲೆಯನ್ನು ರದ್ದುಗೊಳಿಸಲು ಭಾರತದಾದ್ಯಂತ ವಿವಿಧ ವಿಶ್ವವಿದ್ಯಾಲಯಗಳ ಒಟ್ಟು 31 ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಕೊರೊನಾ ರೋಗವನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್/ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸಿ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಹಿಂದಿನ ಸಾಧನೆ ಮತ್ತು ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಫಲಿತಾಂಶಗಳನ್ನು ಘೋಷಿಸಲು ಯುಜಿಸಿಗೆ ನಿರ್ದೇಶನ ನೀಡುವಂತೆ ಕೋರಿದ್ದರು.

ದೆಹಲಿ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶ ರಾಜ್ಯಗಳು ಅಂತಿಮ ವರ್ಷದ ಪರೀಕ್ಷೆಗಳು ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ್ದವು.

“ರಾಜ್ಯ ಸರ್ಕಾರಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಆ ಅಧಿಕಾರ ಯುಜಿಸಿಗೆ ಮಾತ್ರ ಇದೆ” ಎಂದು ಯುಜಿಸಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಗಸ್ಟ್ 8 ರಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದ್ದರು.


ಇದನ್ನೂ ಓದಿ: ಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...