Homeಮುಖಪುಟವಿಶ್ವವಿದ್ಯಾನಿಲಯಗಳ ಪರೀಕ್ಷೆ ರದ್ದತಿ; ಅಂತಿಮ ತೀರ್ಪು ನೀಡಿದ ಸುಪ್ರೀಂ ಕೋರ್ಟ್!

ವಿಶ್ವವಿದ್ಯಾನಿಲಯಗಳ ಪರೀಕ್ಷೆ ರದ್ದತಿ; ಅಂತಿಮ ತೀರ್ಪು ನೀಡಿದ ಸುಪ್ರೀಂ ಕೋರ್ಟ್!

ಪರೀಕ್ಷೆ ರದ್ದತಿ ಸಾಧ್ಯವಿಲ್ಲ. ಆದರೆ ಅಂತಿಮ ದಿನಾಂಕವನ್ನು ವಿಸ್ತರಿಸುವಂತೆ ಯುಜಿಸಿಯನ್ನು ಕೇಳುವುದಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದೆ ವಿದ್ಯಾರ್ಥಿಗಳಿಗೆ ಪದವಿ ನೀಡಲು ಸಾಧ್ಯವಿಲ್ಲ. ಆದರೆ ಅಂತಿಮ ದಿನಾಂಕವನ್ನು ವಿಸ್ತರಿಸುವಂತೆ ಯುಜಿಸಿಯನ್ನು ಕೇಳುವುದಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ.

ಸೆಪ್ಟೆಂಬರ್ 30 ರೊಳಗೆ ನಡೆಸಬೇಕಾಗಿರುವ ಅಂತಿಮ ವರ್ಷದ/ಮಧ್ಯಂತರ ಸೆಮಿಸ್ಟರ್ ನ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದರ ಕುರಿತಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ, ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ಅದರ ತೀರ್ಪನ್ನು ಪ್ರಕಟಿಸಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ಸಾಂಕ್ರಾಮಿಕ ರೋಗದ ನಡುವೆ ಪರೀಕ್ಷೆಗಳನ್ನು ರದ್ದುಗೊಳಿಸಲು ಮಹಾರಾಷ್ಟ್ರ ರಾಜ್ಯ ತೆಗೆದುಕೊಂಡ ನಿರ್ಧಾರವು ಮೇಲುಗೈ ಸಾಧಿಸುತ್ತದೆ ಎಂದು ನ್ಯಾಯಪೀಠ ಇಂದು ಅಭಿಪ್ರಾಯಪಟ್ಟಿದೆ. ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನವನ್ನು ಅನುಸರಿಸುವಾಗ, ಕೊರೊನಾ ಸಾಂಕ್ರಾಮಿಕದ ಮಧ್ಯೆ ಎಲ್ಲಾ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಬೇಕೆಂದು ಯುಜಿಸಿ ತನ್ನ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಆದೇಶಿಸಿದೆ.

ಇದನ್ನೂ ಓದಿ: ಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಯುಜಿಸಿ ಜುಲೈ 6 ರಂದು ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿತ್ತು. ಪರೀಕ್ಷೆಗಳು ನಡೆಯದಿದ್ದರೆ ವಿದ್ಯಾರ್ಥಿಗಳ ಭವಿಷ್ಯವು ಅಪಾಯಕ್ಕೆ ಸಿಲುಕುತ್ತದೆ ಎಂದು ಯುಜಿಸಿ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು.

ಅಭಿಷೇಕ್ ಮನು ಸಿಂಗ್ವಿ, ಶ್ಯಾಮ್ ದಿವಾನ್, ಮತ್ತು ಅರವಿಂದ ದತಾರ್ ಸೇರಿದಂತೆ ಹಿರಿಯ ವಕೀಲರು ವಿದ್ಯಾರ್ಥಿಗಳ ಹಿತಾಸಕ್ತಿ ಪರವಾಗಿ ವಾದಿಸಿದರು. ಹೆಚ್ಚುತ್ತಿರುವ ಕೊರೊನಾ ಅಂಕಿ ಅಂಶಗಳ ಕಾರಣದಿಂದಾಗಿ ಕೆಲವು ರಾಜ್ಯ ಸರ್ಕಾರಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧಾರ ತೆಗೆದುಕೊಂಡವು ಎಂದು ಹೇಳಿದರು.

ಕೊರೊನಾ ಸಾಂಕ್ರಾಮಿಕ ರೋಗವು ಇನ್ನೂ ಆರಂಭಿಕ ಹಂತದಲ್ಲಿದ್ದಾಗ ಏಪ್ರಿಲ್‌ನಲ್ಲಿ ಪರೀಕ್ಷೆಗಳನ್ನು ನಡೆಸಲು ನಿರಾಕರಿಸಿದ ಹಿಂದಿನ ಯುಜಿಸಿಯ ತಾರ್ಕಿಕತೆಯನ್ನು ಅವರು ಪ್ರಶ್ನಿಸಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಯುಜಿಸಿಯು ಪರೀಕ್ಷೆಗಳಿಲ್ಲದೆ ಪದವಿಗಳನ್ನು ನೀಡಲು ಸಿದ್ಧವಿಲ್ಲ. ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಾದಿಸಿದರು.

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಈ ವರ್ಷ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದಿರಲು ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳು ತೆಗೆದುಕೊಂಡ ನಿಲುವಿಗೆ ಯುಜಿಸಿ ವಿರೋಧ ವ್ಯಕ್ತಪಡಿಸಿತ್ತು.

ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲು, ಯುಜಿಸಿ ಹೊರಡಿಸಿರುವ ಸುತ್ತೋಲೆಯನ್ನು ರದ್ದುಗೊಳಿಸಲು ಭಾರತದಾದ್ಯಂತ ವಿವಿಧ ವಿಶ್ವವಿದ್ಯಾಲಯಗಳ ಒಟ್ಟು 31 ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಕೊರೊನಾ ರೋಗವನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್/ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸಿ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಹಿಂದಿನ ಸಾಧನೆ ಮತ್ತು ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಫಲಿತಾಂಶಗಳನ್ನು ಘೋಷಿಸಲು ಯುಜಿಸಿಗೆ ನಿರ್ದೇಶನ ನೀಡುವಂತೆ ಕೋರಿದ್ದರು.

ದೆಹಲಿ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶ ರಾಜ್ಯಗಳು ಅಂತಿಮ ವರ್ಷದ ಪರೀಕ್ಷೆಗಳು ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ್ದವು.

“ರಾಜ್ಯ ಸರ್ಕಾರಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಆ ಅಧಿಕಾರ ಯುಜಿಸಿಗೆ ಮಾತ್ರ ಇದೆ” ಎಂದು ಯುಜಿಸಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಗಸ್ಟ್ 8 ರಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದ್ದರು.


ಇದನ್ನೂ ಓದಿ: ಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...