Homeಮುಖಪುಟವಿಶ್ವವಿದ್ಯಾನಿಲಯಗಳ ಪರೀಕ್ಷೆ ರದ್ದತಿ; ಅಂತಿಮ ತೀರ್ಪು ನೀಡಿದ ಸುಪ್ರೀಂ ಕೋರ್ಟ್!

ವಿಶ್ವವಿದ್ಯಾನಿಲಯಗಳ ಪರೀಕ್ಷೆ ರದ್ದತಿ; ಅಂತಿಮ ತೀರ್ಪು ನೀಡಿದ ಸುಪ್ರೀಂ ಕೋರ್ಟ್!

ಪರೀಕ್ಷೆ ರದ್ದತಿ ಸಾಧ್ಯವಿಲ್ಲ. ಆದರೆ ಅಂತಿಮ ದಿನಾಂಕವನ್ನು ವಿಸ್ತರಿಸುವಂತೆ ಯುಜಿಸಿಯನ್ನು ಕೇಳುವುದಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದೆ ವಿದ್ಯಾರ್ಥಿಗಳಿಗೆ ಪದವಿ ನೀಡಲು ಸಾಧ್ಯವಿಲ್ಲ. ಆದರೆ ಅಂತಿಮ ದಿನಾಂಕವನ್ನು ವಿಸ್ತರಿಸುವಂತೆ ಯುಜಿಸಿಯನ್ನು ಕೇಳುವುದಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ.

ಸೆಪ್ಟೆಂಬರ್ 30 ರೊಳಗೆ ನಡೆಸಬೇಕಾಗಿರುವ ಅಂತಿಮ ವರ್ಷದ/ಮಧ್ಯಂತರ ಸೆಮಿಸ್ಟರ್ ನ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದರ ಕುರಿತಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ, ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ಅದರ ತೀರ್ಪನ್ನು ಪ್ರಕಟಿಸಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ಸಾಂಕ್ರಾಮಿಕ ರೋಗದ ನಡುವೆ ಪರೀಕ್ಷೆಗಳನ್ನು ರದ್ದುಗೊಳಿಸಲು ಮಹಾರಾಷ್ಟ್ರ ರಾಜ್ಯ ತೆಗೆದುಕೊಂಡ ನಿರ್ಧಾರವು ಮೇಲುಗೈ ಸಾಧಿಸುತ್ತದೆ ಎಂದು ನ್ಯಾಯಪೀಠ ಇಂದು ಅಭಿಪ್ರಾಯಪಟ್ಟಿದೆ. ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನವನ್ನು ಅನುಸರಿಸುವಾಗ, ಕೊರೊನಾ ಸಾಂಕ್ರಾಮಿಕದ ಮಧ್ಯೆ ಎಲ್ಲಾ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಬೇಕೆಂದು ಯುಜಿಸಿ ತನ್ನ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಆದೇಶಿಸಿದೆ.

ಇದನ್ನೂ ಓದಿ: ಸೆಪ್ಟಂಬರ್‌‌ನಲ್ಲಿ ಸ್ನಾತಕೋತ್ತರ ಹಾಗೂ ಪದವಿ ಪರೀಕ್ಷೆಗಳು: ಯುಜಿಸಿ

ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಯುಜಿಸಿ ಜುಲೈ 6 ರಂದು ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿತ್ತು. ಪರೀಕ್ಷೆಗಳು ನಡೆಯದಿದ್ದರೆ ವಿದ್ಯಾರ್ಥಿಗಳ ಭವಿಷ್ಯವು ಅಪಾಯಕ್ಕೆ ಸಿಲುಕುತ್ತದೆ ಎಂದು ಯುಜಿಸಿ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು.

ಅಭಿಷೇಕ್ ಮನು ಸಿಂಗ್ವಿ, ಶ್ಯಾಮ್ ದಿವಾನ್, ಮತ್ತು ಅರವಿಂದ ದತಾರ್ ಸೇರಿದಂತೆ ಹಿರಿಯ ವಕೀಲರು ವಿದ್ಯಾರ್ಥಿಗಳ ಹಿತಾಸಕ್ತಿ ಪರವಾಗಿ ವಾದಿಸಿದರು. ಹೆಚ್ಚುತ್ತಿರುವ ಕೊರೊನಾ ಅಂಕಿ ಅಂಶಗಳ ಕಾರಣದಿಂದಾಗಿ ಕೆಲವು ರಾಜ್ಯ ಸರ್ಕಾರಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧಾರ ತೆಗೆದುಕೊಂಡವು ಎಂದು ಹೇಳಿದರು.

ಕೊರೊನಾ ಸಾಂಕ್ರಾಮಿಕ ರೋಗವು ಇನ್ನೂ ಆರಂಭಿಕ ಹಂತದಲ್ಲಿದ್ದಾಗ ಏಪ್ರಿಲ್‌ನಲ್ಲಿ ಪರೀಕ್ಷೆಗಳನ್ನು ನಡೆಸಲು ನಿರಾಕರಿಸಿದ ಹಿಂದಿನ ಯುಜಿಸಿಯ ತಾರ್ಕಿಕತೆಯನ್ನು ಅವರು ಪ್ರಶ್ನಿಸಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಯುಜಿಸಿಯು ಪರೀಕ್ಷೆಗಳಿಲ್ಲದೆ ಪದವಿಗಳನ್ನು ನೀಡಲು ಸಿದ್ಧವಿಲ್ಲ. ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಾದಿಸಿದರು.

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಈ ವರ್ಷ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದಿರಲು ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳು ತೆಗೆದುಕೊಂಡ ನಿಲುವಿಗೆ ಯುಜಿಸಿ ವಿರೋಧ ವ್ಯಕ್ತಪಡಿಸಿತ್ತು.

ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲು, ಯುಜಿಸಿ ಹೊರಡಿಸಿರುವ ಸುತ್ತೋಲೆಯನ್ನು ರದ್ದುಗೊಳಿಸಲು ಭಾರತದಾದ್ಯಂತ ವಿವಿಧ ವಿಶ್ವವಿದ್ಯಾಲಯಗಳ ಒಟ್ಟು 31 ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಕೊರೊನಾ ರೋಗವನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್/ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸಿ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಹಿಂದಿನ ಸಾಧನೆ ಮತ್ತು ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಫಲಿತಾಂಶಗಳನ್ನು ಘೋಷಿಸಲು ಯುಜಿಸಿಗೆ ನಿರ್ದೇಶನ ನೀಡುವಂತೆ ಕೋರಿದ್ದರು.

ದೆಹಲಿ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶ ರಾಜ್ಯಗಳು ಅಂತಿಮ ವರ್ಷದ ಪರೀಕ್ಷೆಗಳು ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ್ದವು.

“ರಾಜ್ಯ ಸರ್ಕಾರಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಆ ಅಧಿಕಾರ ಯುಜಿಸಿಗೆ ಮಾತ್ರ ಇದೆ” ಎಂದು ಯುಜಿಸಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಗಸ್ಟ್ 8 ರಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದ್ದರು.


ಇದನ್ನೂ ಓದಿ: ಸೆಪ್ಟೆಂಬರ್‌ 1 ರಿಂದ ಹಲವು ಗೊಂದಲಗಳ ನಡುವೆ ನಡೆಯಲಿದೆ ಪದವಿ ಪರೀಕ್ಷೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...