Homeಕರ್ನಾಟಕರದ್ದಾದ ಬಿಪಿಎಲ್‌ ಕಾರ್ಡ್‌ ನವೆಂಬರ್ 28ರೊಳಗೆ ಮತ್ತೆ ಸಕ್ರಿಯ - ಸಚಿವ ಮುನಿಯಪ್ಪ ಭರವಸೆ

ರದ್ದಾದ ಬಿಪಿಎಲ್‌ ಕಾರ್ಡ್‌ ನವೆಂಬರ್ 28ರೊಳಗೆ ಮತ್ತೆ ಸಕ್ರಿಯ – ಸಚಿವ ಮುನಿಯಪ್ಪ ಭರವಸೆ

- Advertisement -
- Advertisement -

ಬಿಪಿಎಲ್‌ ಕಾರ್ಡ್‌ ಇರುವ ರಾಜ್ಯದ ಎಲ್ಲ ಅರ್ಹ ಪಡಿತರದಾರರಿಗೆ ನವೆಂಬರ್ 29 ರಿಂದ ಪಡಿತರ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ಸೋಮವಾರ ತಿಳಿಸಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ರದ್ದಾಗಿರುವ ಕಾರ್ಡ್‌ಗಳನ್ನು ಪುನಃ ಸಕ್ರಿಯಗೊಳಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ಅವರು ಮಾಧ್ಯಮದ ಜೊತೆಗೆ ಹೇಳಿದ್ದಾರೆ. ರದ್ದಾದ ಬಿಪಿಎಲ್‌ ಕಾರ್ಡ್‌

“ಒಂದೂವರೆ ತಿಂಗಳ ಹಿಂದೆ ರದ್ದುಪಡಿಸಿದ್ದ ಎಲ್ಲ ರೇಷನ್‌ ಕಾರ್ಡ್‌ಗಳನ್ನು ನವೆಂಬರ್ 28 ರೊಳಗೆ ಮರು ಸಕ್ರಿಯಗೊಳಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದು, ಆ ಕಾರ್ಯ ಭರದಿಂದ ನಡೆಯುತ್ತಿದೆ. ಬಿಪಿಎಲ್‌ ಕಾರ್ಡ್‌ದಾರರಿಗೆ ಯಾವುದೇ ಕಾರಣಕ್ಕೂ ಪಡಿತರ ತಪ್ಪಿಸುವುದಿಲ್ಲ. ರಾಜ್ಯ ಸರಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಕಾರ್ಡ್‌ ರದ್ದುಗೊಂಡಿದ್ದರಿಂದ ಕಳೆದ ಎರಡು ತಿಂಗಳಿಂದ ಸಿಗದೇ ಇರುವ ಎಲ್ಲ ಸೌಲಭ್ಯಗಳು ದೊರೆಯಲಿವೆ. ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ತಪ್ಪಿ ಹೋಗಬಾರದು. ಒಂದು ವೇಳೆ ತಪ್ಪಿ ಹೋಗಿದ್ದರೆ, ವಾಪಸ್‌ ಕೊಡಲಾಗುವುದು” ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ ಎಂದು ವಿಜಯ ಕರ್ನಾಟಕ ಪತ್ರಿಕೆ ವರದಿ ಮಾಡಿದೆ. ರದ್ದಾದ ಬಿಪಿಎಲ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೊತೆಗೆ, ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ. ಕಾರ್ಡ್‌ ರದ್ದಾದ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಫಲಾನುಭವಿಗಳಿಗೆ ಹೊಸ ಕಾರ್ಡ್‌ಗಳನ್ನು ವಿತರಿಸುವ ಬದಲಿಗೆ ಹಳೇ ಕಾರ್ಡ್‌ ನಂಬರ್‌ ನಮೂದಿಸಿ ಪಡಿತರ ಪಡೆಯಬಹುದಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಎಂದಿನಂತೆ ಬಿಪಿಎಲ್‌ ಕಾರ್ಡ್‌ ಹೊಂದಿದ ಪ್ರತಿಯೊಬ್ಬರಿಗೂ 5 ಕೆಜಿ ಅಕ್ಕಿ ಸೇರಿದಂತೆ ಇತರೆ ಎಲ್ಲ ಸೌಲಭ್ಯಗಳು ದೊರೆಯಲಿವೆ. ಸದ್ಯ, ಅಕ್ರಮವಾಗಿ ಕಾರ್ಡ್‌ಗಳನ್ನು ಹೊಂದಿದ ಸರಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿರ್ಧಾರ ಮಾಡಿಲ್ಲ. ಮೊದಲು ರದ್ದಾದ ಅರ್ಹರ ಪಡಿತರ ಕಾರ್ಡ್‌ಗಳನ್ನು ಮರು ಸಕ್ರಿಯಗೊಳಿಸುದೇ ಸರಕಾರದ ಗುರಿ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಈ ನಡುವೆ, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡ್‌ಗಳ ರದ್ದತಿಯ ಸುತ್ತ ನಡೆಯುತ್ತಿರುವ ಗೊಂದಲವನ್ನು ಪರಿಹರಿಸಲು ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಆದಾಯ ತೆರಿಗೆ ಪಾವತಿದಾರರು ಅಥವಾ ಸರ್ಕಾರಿ ನೌಕರರಾಗಿರುವ ವ್ಯಕ್ತಿಗಳ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದುಪಡಿಸುವುದನ್ನು ಖಾತ್ರಿಪಡಿಸಿಕೊಂಡು, ತಕ್ಷಣ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಆಹಾರ ಇಲಾಖೆಗೆ ಸೂಚನೆ ನೀಡಲಾಗಿದೆ.

ಇತರ ಎಲ್ಲ ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಗೊಳಿಸಬಾರದು ಎಂದು ಸರ್ಕಾರ ಒತ್ತಿ ಹೇಳಿದೆ. ಪ್ರಕ್ರಿಯೆಯಲ್ಲಿ ಯಾವುದೇ ತಪ್ಪುಗಳು ಕಂಡುಬಂದಲ್ಲಿ, ರದ್ದುಪಡಿಸಿದ ಕಾರ್ಡ್‌ಗಳನ್ನು ಮರು ವಿತರಿಸಲು ಆಹಾರ ಇಲಾಖೆಗೆ ಸೂಚಿಸಲಾಗಿದೆ. ಈ ಕ್ರಮಗಳನ್ನು ದಿನದ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಆದೇಶವು ಕಡ್ಡಾಯಗೊಳಿಸಿದ್ದು, ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವ ಬಗ್ಗೆ ಒತ್ತಿ ಹೇಳಿದೆ.

ಅರ್ಹರು ತಮ್ಮ ಕಾರ್ಡ್‌ಗಳನ್ನು ಕಳೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಮತ್ತೆ ಮತ್ತೆ ಭರವಸೆ ನೀಡಿದ್ದಾರೆ. “ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದುಗೊಳಿಸಿದರೆ, ಅವುಗಳನ್ನು ತಕ್ಷಣವೇ ಮರುಸ್ಥಾಪಿಸಬೇಕು” ಎಂದು ಮುಖ್ಯಮಂತ್ರಿಗಳ ಕಚೇರಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...