Homeಮುಖಪುಟಅಭ್ಯರ್ಥಿಗಳಿಗೆ ಆಮಿಷ ಆರೋಪ : ಕೇಜ್ರಿವಾಲ್‌ಗೆ ನೋಟಿಸ್‌ ನೀಡಿದ ಎಸಿಬಿ

ಅಭ್ಯರ್ಥಿಗಳಿಗೆ ಆಮಿಷ ಆರೋಪ : ಕೇಜ್ರಿವಾಲ್‌ಗೆ ನೋಟಿಸ್‌ ನೀಡಿದ ಎಸಿಬಿ

ಚುನಾವಣಾ ಫಲಿತಾಂಶಕ್ಕೂ ಮುನ್ನ ಕ್ಷಿಪ್ರ ರಾಜಕೀಯ ಬೆಳವಣಿಗೆ

- Advertisement -
- Advertisement -

ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ (ಫೆ.7) ನೋಟಿಸ್ ನೀಡಿದೆ.

ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುವ ಮುನ್ನ ಎಎಪಿಯ 16 ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಗುರುವಾರ (ಫೆ.6) ಆರೋಪಿಸಿದ್ದರು. ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಸಚಿವ ಸ್ಥಾನ ಮತ್ತು ಪಕ್ಷ ಬದಲಾಯಿಸಿದರೆ ತಲಾ 15 ಕೋಟಿ ರೂಪಾಯಿಗಳ ಭರವಸೆ ಸಿಕ್ಕಿದೆ ಎಂದು ಕೇಜ್ರಿವಾಲ್ ಹೇಳಿದ್ದರು.

ಈ ಕುರಿತು ತನಿಖೆ ನಡೆಸುವಂತೆ ದೆಹಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ವಿಷ್ಣು ಮಿತ್ತಲ್ ಅವರು ಲೆಫ್ಟಿನೆಂಟ್ ಗವರ್ನರ್‌ ವಿ.ಕೆ ಸಕ್ಸೇನಾ ಅವರಿಗೆ ದೂರು ಸಲ್ಲಿಸಿದ್ದರು. ಬಿಜೆಪಿ ನಾಯಕನ ದೂರು ಆಧರಿಸಿ ಎಸಿಬಿ ತನಿಖೆ ನಡೆಸುವಂತೆ ಗವರ್ನರ್ ಆದೇಶಿಸಿದ್ದರು. ಗವರ್ನರ್ ಆದೇಶ ಬಂದ ಬೆನ್ನಲ್ಲೇ ಶುಕ್ರವಾರ (ಫೆ.7) ಸಂಜೆ ಅರವಿಂದ್ ಕೇಜ್ರಿವಾಲ್ ಅವರ ಮನೆಗೆ ಎಸಿಬಿ ಅಧಿಕಾರಿಗಳ ತಂಡ ಆಗಮಿಸಿತ್ತು. ಈ ವೇಳೆ ಕೇಜ್ರಿವಾಲ್ ಮನೆ ಮುಂದೆ ಗೊಂದಲದ ಪರಿಸ್ಥಿತಿ ಉಂಟಾಗಿತ್ತು. “ಎಸಿಬಿ ಅಧಿಕಾರಿಗಳು ಯಾವುದೇ ಆದೇಶ ಪ್ರತಿ ಅಥವಾ ನೋಟಿಸ್ ಇಲ್ಲದೆ ಏಕಾಏಕಿ ಕೇಜ್ರಿವಾಲ್ ಮನೆಗೆ ನುಗ್ಗಿದ್ದಾರೆ” ಎಂದು ಎಎಪಿ ಕಾನೂನು ಘಟಕದ ವಕೀಲ ಸಂಜೀವ್ ನಾಸಿಯರ್ ಆರೋಪಿಸಿದ್ದರು.

ಬಿಜೆಪಿಯು 16 ಎಎಪಿ ಅಭ್ಯರ್ಥಿಗಳನ್ನು ಖರೀದಿಸಲು ತಲಾ 15 ಕೋಟಿ ರೂಪಾಯಿ ಹಣದ ಆಮಿಷವೊಡ್ಡಿದೆ ಎಂಬ ಆರೋಪದ ಕುರಿತು ತನಿಖೆಗೆ ಸಹಕರಿಸುವಂತೆ ಕೇಜ್ರಿವಾಲ್ ಅವರಿಗೆ ಎಸಿಬಿ ನೀಡಿದ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಹಣದ ಆಮಿಷವೊಡ್ಡಲು ಬಳಸಿದ ಫೋನ್ ಮತ್ತು ನಂಬರ್, ಬಿಜೆಪಿ ವಿರುದ್ದ ಆರೋಪ ಮಾಡಿ ಕೇಜ್ರಿವಾಲ್ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆಯೇ ಎಂಬುವುದರ ಕುರಿತು ಎಸಿಬಿ ಮಾಹಿತಿ ಕೇಳಿದೆ ಎಂದು ವರದಿ ಹೇಳಿದೆ.

ಕೇಜ್ರಿವಾಲ್ ಪರ ವಕೀಲ ರಿಷಿಕೇಶ್ ಕುಮಾರ್ ಅವರು ಎಸಿಬಿ ನೋಟಿಸ್ ಅಸ್ಪಷ್ಟವಾಗಿದೆ ಎಂದಿದ್ದು, ತಿರಸ್ಕರಿಸಿದ್ದಾರೆ. “ನಾವು ಅವರ (ಎಸಿಬಿ) ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತೇವೆ” ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಮನೆಗೆ ಎಸಿಬಿ ಅಧಿಕಾರಿಗಳು ಬಂದಾಗ, ಅವರ ಬಳಿ ಯಾವುದೇ ತನಿಖಾ ಆದೇಶ ಇಲ್ಲ ಎಂದು ಆರೋಪಿಸಿ ಮನೆಯೊಳಗೆ ಬಿಡಲು ನಿರಾಕರಿಸಲಾಗಿತ್ತು. ಸ್ವಲ್ಪ ಹೊತ್ತಿನ ಹೈಡ್ರಾಮದ ಬಳಿಕ, ಸಂಜೆ 4.15ರ ಸುಮಾರಿಗೆ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿ ಎಸಿಬಿ ತಂಡ ನಿರ್ಗಮಿಸಿದೆ.

ಎಸಿಬಿ ಅಧಿಕಾರಿಗಳು ಎಎಪಿ ಸಂಸದ ಸಂಜಯ್ ಸಿಂಗ್ ಮತ್ತು ಶಾಸಕ ಮುಖೇಶ್ ಅಹ್ಲಾವತ್ ಅವರ ಮನೆಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಜಯ್ ಸಿಂಗ್ ಅವರು ಹೇಳಿಕೆ ದಾಖಲಿಸಲು ಖುದ್ದಾಗಿ ಎಸಿಬಿ ಕಚೇರಿಗೆ ಹಾಜರಾಗಿದ್ದರು.

“ಎಸಿಬಿ ಹಠಾತ್ ಆಗಮನದ ಹಿಂದೆ ರಾಜಕೀಯ ಕುತಂತ್ರ ಅಲ್ಲದೆ ಇನ್ನೇನು ಇಲ್ಲ. ಬಿಜೆಪಿ ನಮ್ಮ ಅಭ್ಯರ್ಥಿಯೊಬ್ಬರಿಗೆ ಆಮಿಷವೊಡ್ಡಲು ಬಳಸಿದ ಫೋನ್ ನಂಬರ್ ಅನ್ನು ನಾವು ಬಹಿರಂಗಪಡಿಸಿದ್ದೇವೆ. ಎಸಿಬಿ ಇಲ್ಲಿ ಬಂದು ನಾಟಕ ಮಾಡಬಾರದು” ಎಂದು ಎಎಪಿ ನಾಯಕರು ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಆರೋಪ ಮಾಡಿದ ತಕ್ಷಣ ಬಿಜೆಪಿ ಕಾರ್ಯದರ್ಶಿ ಗವರ್ನರ್‌ಗೆ ದೂರು ನೀಡಿದ್ದು, ಅದನ್ನು ಆಧರಿಸಿ ಗವರ್ನರ್ ತಕ್ಷಣ ತನಿಖೆಗೆ ಆದೇಶಿಸಿರುವುದು ಮತ್ತು ಗವರ್ನರ್ ಆದೇಶದ ಬೆನ್ನಲ್ಲೇ ಎಸಿಬಿ ತಂಡ ಕೇಜ್ರಿವಾಲ್ ಮನೆಗೆ ಬಂದಿರುವುದು ಸೇರಿದಂತೆ ಚುನಾವಣಾ ಫಲಿತಾಂಶದ ಮುನ್ನಾದಿನ ದೆಹಲಿಯಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಗಳು ಎಲ್ಲರನ್ನು ಆಶ್ಚರ್ಯಗೊಳಿಸಿದೆ.

ಇಂದು (ಫೆ.8) ದೆಹಲಿಯ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ : ಮತ ಎಣಿಕೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...