Homeಕರ್ನಾಟಕಧಾರವಾಡ ಅಭ್ಯರ್ಥಿಯಾದರೂ ಕ್ಷೇತ್ರಕ್ಕೆ ಪ್ರವೇಶಿಸುವಂತಿಲ್ಲ; ಹೈಕೋರ್ಟ್ ಆದೇಶದಿಂದ ಕುಲಕರ್ಣಿ ಕಂಗಾಲು

ಧಾರವಾಡ ಅಭ್ಯರ್ಥಿಯಾದರೂ ಕ್ಷೇತ್ರಕ್ಕೆ ಪ್ರವೇಶಿಸುವಂತಿಲ್ಲ; ಹೈಕೋರ್ಟ್ ಆದೇಶದಿಂದ ಕುಲಕರ್ಣಿ ಕಂಗಾಲು

- Advertisement -
- Advertisement -

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೊಲೆ ಪ್ರಕರಣದ ಆರೋಪಿಯಾಗಿರುವ ಅವರು, ಕ್ಷೇತ್ರಕ್ಕೆ ಪ್ರವೇಶಿಸದಂತೆ ಚುನಾವಣೆ ಎದುರಿಸಬೇಕಾಗಿದೆ.

ಹುಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿಯಾಗಿರುವ ಅವರು, ಕ್ಷೇತ್ರಕ್ಕೆ ಪ್ರವೇಶಿಸದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಕುಲಕರ್ಣಿಯವರ ಕೋರಿಕೆಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.

‘ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಿರುವ ಕಾರಣ ಪ್ರಚಾರದ ನಿಮಿತ್ತ 50 ದಿನಗಳ ಕಾಲ ಧಾರವಾಡದಲ್ಲೇ ನೆಲೆಸಲು ಅನುಮತಿ ನೀಡಬೇಕು’ ಎಂಬ ವಿ‌ನಯ ಕುಲಕರ್ಣಿ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 18ರಂದು ತಿರಸ್ಕರಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಕ್ರಿಮಿನಲ್ ಅರ್ಜಿಯನ್ನು, ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಶುಕ್ರವಾರ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅರ್ಜಿದಾರರ ಮನವಿಗೆ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.

‘ಧಾರವಾಡ ಪ್ರವೇಶಿಸಲು ಇರುವ ನಿರ್ಬಂಧ ಸಡಿಲಿಸಬೇಕೆಂಬ ಅರ್ಜಿದಾರರ ಕೋರಿಕೆಯನ್ನು ಸುಪ್ರೀಂಕೋರ್ಟ್ ಕಳೆದ ತಿಂಗಳ 29ರಂದು ತಿರಸ್ಕರಿಸಿದೆ. ಹೀಗಿರುವಾಗ, ಈ ಅರ್ಜಿಯನ್ನು ನ್ಯಾಯಪೀಠ ಮಾನ್ಯ ಮಾಡಬಾರದು’ ಎಂದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು.

ಇದನ್ನೂ ಓದಿರಿ: 13 ಷರತ್ತು ವಿಧಿಸಿ ಕಾಂಗ್ರೆಸ್‌ಗೆ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ಬೆಂಬಲ

ಬಿಜೆಪಿ ಮುಖಂಡ ಯೋಗೇಶ್ ಗೌಡ ಗೌಡರ್ ಅವರನ್ನು 2016ರ ಜೂನ್ 15ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದವು. ಹೀಗಾಗಿ, ಅವರು ಸುಪ್ರಿಂ ಕೋರ್ಟ್‌ ಮೊರೆ ಹೋಗಿದ್ದರು. 2021ರ ಆಗಸ್ಟ್‌ನಲ್ಲಿ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂ ಕೋರ್ಟ್, ‘ನ್ಯಾಯಾಲಯದ ಅನುಮತಿ ಪಡೆಯದೆ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ’ ಎಂಬುದೂ ಸೇರಿದಂತೆ ನಾಲ್ಕು ಷರತ್ತುಗಳನ್ನು ವಿಧಿಸಿತ್ತು.

ಈಗ ಚುನಾವಣಾ ಅಭ್ಯರ್ಥಿಯಾದರೂ ಕ್ಷೇತ್ರವನ್ನು ಪ್ರವೇಶಿಸದೆ ಚುನಾವಣೆಯನ್ನು ನಡೆಸಬೇಕಾದ ಸವಾಲು ವಿನಯ ಕುಲಕರ್ಣಿಯವರಿಗೆ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...