Homeಮುಖಪುಟದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

ದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ದೇವಾಲಯಗಳಲ್ಲಿ ‘ಕೋಡಿಮಾರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ನಿರ್ದೇಶನ ನೀಡಿದ್ದು, ಹಿಂದೂಗಳಿಗೆ ಕೂಡ ಧರ್ಮವನ್ನು ಆಚರಿಸುವ ಮೂಲಭೂತ ಹಕ್ಕು ಇದೆ ಎಂದು ಹೇಳಿದೆ.

ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ. ಅರ್ಜಿದಾರರು ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಬೋರ್ಡ್‌ಗಳನ್ನು ಅಳವಡಿಸುವಂತೆ ಕೂಡ ಆಗ್ರಹಿಸಿದ್ದರು.

ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ಮುರುಗನ್ ದೇವಾಲಯವಿದೆ. ತಮಿಳುನಾಡು ಸರ್ಕಾರದ ಪರವಾಗಿ ಪ್ರಧಾನ ಕಾರ್ಯದರ್ಶಿ, ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಧಾರ್ಮಿಕ ದತ್ತಿ ಇಲಾಖೆ, ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಮತ್ತು ಪಳನಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರತಿವಾದಿಗಳಾಗಿದ್ದರು.

ಈ ಕುರಿತ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ದೇವಸ್ಥಾನದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಹಿಂದೂಯೇತರರಿಗೆ ಅವಕಾಶ ನೀಡದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಲಾಗಿದೆ. ಯಾವುದೇ ಹಿಂದೂ ಅಲ್ಲದವರು ದೇವಸ್ಥಾನಕ್ಕೆ ಭೇಟಿ ಮಾಡುವುದಾಗಿ ಹೇಳಿಕೊಂಡರೆ, ಅಂತಹ ವ್ಯಕ್ತಿಯಿಂದ ನನಗೆ ಹಿಂದೂ ಧರ್ಮದ ಪದ್ಧತಿ ಹಾಗೂ ಸಂಪ್ರದಾಯಗಳ ಬಗ್ಗೆ ನಂಬಿಕೆ ಇದೆ ಹಾಗೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಚ್ಚಳಿಕೆ ಬರೆಸಬೇಕು ಎಂದೂ ನ್ಯಾಯಾಲಯವು ಸೂಚಿಸಿದೆ. ಅಂತಹ ವ್ಯಕ್ತಿಯನ್ನು ಅನುಮತಿಸಿದಾಗ ಅದನ್ನು ದೇವಸ್ಥಾನವು ನಿರ್ವಹಿಸುವ ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಕೋರ್ಟ್‌ ಹೇಳಿದೆ.

ಪ್ರತಿವಾದಿಗಳು ಸಲ್ಲಿಸಿದ ರಿಟ್ ಅರ್ಜಿಯನ್ನು ಪಳನಿ ದೇವಸ್ಥಾನಕ್ಕೆ ಮಾತ್ರ ಸಲ್ಲಿಸಲಾಗಿದೆ ಮತ್ತು ಆದೇಶವನ್ನು ಅದಕ್ಕೆ ಸೀಮಿತಗೊಳಿಸಬೇಕು, ಆದರೆ ಎತ್ತಿರುವ ವಿಷಯವು ದೊಡ್ಡ ವಿಷಯವಾಗಿದೆ ಮತ್ತು ಅದೇ ಎಲ್ಲಾ ಹಿಂದೂ ದೇವಾಲಯಗಳಿಗೆ ಅನ್ವಯಿಸಬೇಕು, ಸೂಚಿಸಲಾಗಿರುವ ಈ ನಿರ್ಬಂಧಗಳು ಸಮಾಜದಲ್ಲಿನ ವಿವಿಧ ಧರ್ಮಗಳ ನಡುವಿನ ಕೋಮು ಸೌಹಾರ್ದತೆ ಹಾಗೂ ಶಾಂತಿ ಉಳಿಯುವುದನ್ನು ಖಾತರಿ ಪಡಿಸಲಿವೆ. ಹೀಗಾಗಿ ರಾಜ್ಯ ಸರ್ಕಾರ, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ, ಪ್ರತಿವಾದಿಗಳು ಹಾಗೂ ದೇವಾಲಯಗಳ ಆಡಳಿತದಲ್ಲಿ ಭಾಗಿಯಾಗಿರುವ ಎಲ್ಲರೂ ಈ ನಿರ್ದೇಶನವನ್ನು ಎಲ್ಲ ಹಿಂದೂ ದೇವಾಲಯಗಳಲ್ಲಿ ಪಾಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇತರ ಧರ್ಮಿಯರಿಗೆ ಸೇರಿದ ಜನರು ಅವರ ಧರ್ಮವನ್ನು ಆಚರಿಸಲು ಹಕ್ಕನ್ನು ಹೊಂದಿದ್ದಾರೆ.  ಅವರ ಧರ್ಮದ ಸಂಪ್ರದಾಯಗಳು ಮತ್ತು ಆಚರಣೆಗಳು ಮಧ್ಯಪ್ರವೇಶಿಸುವಂತಿಲ್ಲ ಮತ್ತು ಯಾವುದೇ ಹಸ್ತಕ್ಷೇಪವನ್ನು ಮಾಡುವಂತಿಲ್ಲ. ದೇವಾಲಯವು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಲ್ಲ. ತಂಜಾವೂರಿನ ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನಕ್ಕೆ ಇತರ ಧರ್ಮದ ಜನರು ದೇವಾಲಯದ ವಾಸ್ತುಶಿಲ್ಪಗಳನ್ನು ವೀಕ್ಷಿಸಲು ಬರುತ್ತಾರೆ. ವಾಸ್ತುಶಿಲ್ಪದ ಸ್ಮಾರಕಗಳನ್ನು ವೀಕ್ಷಿಸಲು ಬರುವ ಜನರು ಆವರಣವನ್ನು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಾಗಿ ಬಳಸುವಂತಿಲ್ಲ ಮತ್ತು ದೇವಾಲಯಗಳ ಆವರಣವನ್ನು ಗೌರವದಿಂದ ಕಾಣಬೇಕು ಎಂದು ಹೇಳಿದೆ.

ಹಿಂದೂಯೇತರರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ ಎಂದು ಹೇಳಲಾದ ಘಟನೆಯೊಂದನ್ನು ಹೈಕೋರ್ಟ್ ಉಲ್ಲೇಖಿಸಿದೆ. ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನದಲ್ಲಿ ಅನ್ಯ ಧರ್ಮದ ವ್ಯಕ್ತಿಗಳ ಗುಂಪೊಂದು ದೇವಸ್ಥಾನದ ಆವರಣವನ್ನು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸಿದೆ ಮತ್ತು ದೇವಾಲಯದ ಆವರಣದಲ್ಲಿ ಮಾಂಸಾಹಾರವನ್ನು ಸೇವಿಸಿದೆ ಎಂದು ಇತ್ತೀಚೆಗೆ ಪತ್ರಿಕೆಯೊಂದು ವರದಿ ಮಾಡಿದೆ. ಈ ಘಟನೆಗಳು ಸಂವಿಧಾನದ ಅಡಿಯಲ್ಲಿ ಹಿಂದೂಗಳಿಗೆ ಖಾತರಿಪಡಿಸಿದ ಮೂಲಭೂತ ಹಕ್ಕುಗಳಿಗೆ ಸಂಪೂರ್ಣವಾಗಿ ಅಡ್ಡಿಪಡಿಸುತ್ತಿವೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನು ಓದಿ: ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...