Homeಮುಖಪುಟದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

ದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ದೇವಾಲಯಗಳಲ್ಲಿ ‘ಕೋಡಿಮಾರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ನಿರ್ದೇಶನ ನೀಡಿದ್ದು, ಹಿಂದೂಗಳಿಗೆ ಕೂಡ ಧರ್ಮವನ್ನು ಆಚರಿಸುವ ಮೂಲಭೂತ ಹಕ್ಕು ಇದೆ ಎಂದು ಹೇಳಿದೆ.

ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ. ಅರ್ಜಿದಾರರು ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಬೋರ್ಡ್‌ಗಳನ್ನು ಅಳವಡಿಸುವಂತೆ ಕೂಡ ಆಗ್ರಹಿಸಿದ್ದರು.

ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ಮುರುಗನ್ ದೇವಾಲಯವಿದೆ. ತಮಿಳುನಾಡು ಸರ್ಕಾರದ ಪರವಾಗಿ ಪ್ರಧಾನ ಕಾರ್ಯದರ್ಶಿ, ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಧಾರ್ಮಿಕ ದತ್ತಿ ಇಲಾಖೆ, ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಮತ್ತು ಪಳನಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರತಿವಾದಿಗಳಾಗಿದ್ದರು.

ಈ ಕುರಿತ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ದೇವಸ್ಥಾನದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಹಿಂದೂಯೇತರರಿಗೆ ಅವಕಾಶ ನೀಡದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಲಾಗಿದೆ. ಯಾವುದೇ ಹಿಂದೂ ಅಲ್ಲದವರು ದೇವಸ್ಥಾನಕ್ಕೆ ಭೇಟಿ ಮಾಡುವುದಾಗಿ ಹೇಳಿಕೊಂಡರೆ, ಅಂತಹ ವ್ಯಕ್ತಿಯಿಂದ ನನಗೆ ಹಿಂದೂ ಧರ್ಮದ ಪದ್ಧತಿ ಹಾಗೂ ಸಂಪ್ರದಾಯಗಳ ಬಗ್ಗೆ ನಂಬಿಕೆ ಇದೆ ಹಾಗೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಚ್ಚಳಿಕೆ ಬರೆಸಬೇಕು ಎಂದೂ ನ್ಯಾಯಾಲಯವು ಸೂಚಿಸಿದೆ. ಅಂತಹ ವ್ಯಕ್ತಿಯನ್ನು ಅನುಮತಿಸಿದಾಗ ಅದನ್ನು ದೇವಸ್ಥಾನವು ನಿರ್ವಹಿಸುವ ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಕೋರ್ಟ್‌ ಹೇಳಿದೆ.

ಪ್ರತಿವಾದಿಗಳು ಸಲ್ಲಿಸಿದ ರಿಟ್ ಅರ್ಜಿಯನ್ನು ಪಳನಿ ದೇವಸ್ಥಾನಕ್ಕೆ ಮಾತ್ರ ಸಲ್ಲಿಸಲಾಗಿದೆ ಮತ್ತು ಆದೇಶವನ್ನು ಅದಕ್ಕೆ ಸೀಮಿತಗೊಳಿಸಬೇಕು, ಆದರೆ ಎತ್ತಿರುವ ವಿಷಯವು ದೊಡ್ಡ ವಿಷಯವಾಗಿದೆ ಮತ್ತು ಅದೇ ಎಲ್ಲಾ ಹಿಂದೂ ದೇವಾಲಯಗಳಿಗೆ ಅನ್ವಯಿಸಬೇಕು, ಸೂಚಿಸಲಾಗಿರುವ ಈ ನಿರ್ಬಂಧಗಳು ಸಮಾಜದಲ್ಲಿನ ವಿವಿಧ ಧರ್ಮಗಳ ನಡುವಿನ ಕೋಮು ಸೌಹಾರ್ದತೆ ಹಾಗೂ ಶಾಂತಿ ಉಳಿಯುವುದನ್ನು ಖಾತರಿ ಪಡಿಸಲಿವೆ. ಹೀಗಾಗಿ ರಾಜ್ಯ ಸರ್ಕಾರ, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ, ಪ್ರತಿವಾದಿಗಳು ಹಾಗೂ ದೇವಾಲಯಗಳ ಆಡಳಿತದಲ್ಲಿ ಭಾಗಿಯಾಗಿರುವ ಎಲ್ಲರೂ ಈ ನಿರ್ದೇಶನವನ್ನು ಎಲ್ಲ ಹಿಂದೂ ದೇವಾಲಯಗಳಲ್ಲಿ ಪಾಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇತರ ಧರ್ಮಿಯರಿಗೆ ಸೇರಿದ ಜನರು ಅವರ ಧರ್ಮವನ್ನು ಆಚರಿಸಲು ಹಕ್ಕನ್ನು ಹೊಂದಿದ್ದಾರೆ.  ಅವರ ಧರ್ಮದ ಸಂಪ್ರದಾಯಗಳು ಮತ್ತು ಆಚರಣೆಗಳು ಮಧ್ಯಪ್ರವೇಶಿಸುವಂತಿಲ್ಲ ಮತ್ತು ಯಾವುದೇ ಹಸ್ತಕ್ಷೇಪವನ್ನು ಮಾಡುವಂತಿಲ್ಲ. ದೇವಾಲಯವು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಲ್ಲ. ತಂಜಾವೂರಿನ ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನಕ್ಕೆ ಇತರ ಧರ್ಮದ ಜನರು ದೇವಾಲಯದ ವಾಸ್ತುಶಿಲ್ಪಗಳನ್ನು ವೀಕ್ಷಿಸಲು ಬರುತ್ತಾರೆ. ವಾಸ್ತುಶಿಲ್ಪದ ಸ್ಮಾರಕಗಳನ್ನು ವೀಕ್ಷಿಸಲು ಬರುವ ಜನರು ಆವರಣವನ್ನು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಾಗಿ ಬಳಸುವಂತಿಲ್ಲ ಮತ್ತು ದೇವಾಲಯಗಳ ಆವರಣವನ್ನು ಗೌರವದಿಂದ ಕಾಣಬೇಕು ಎಂದು ಹೇಳಿದೆ.

ಹಿಂದೂಯೇತರರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ ಎಂದು ಹೇಳಲಾದ ಘಟನೆಯೊಂದನ್ನು ಹೈಕೋರ್ಟ್ ಉಲ್ಲೇಖಿಸಿದೆ. ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನದಲ್ಲಿ ಅನ್ಯ ಧರ್ಮದ ವ್ಯಕ್ತಿಗಳ ಗುಂಪೊಂದು ದೇವಸ್ಥಾನದ ಆವರಣವನ್ನು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸಿದೆ ಮತ್ತು ದೇವಾಲಯದ ಆವರಣದಲ್ಲಿ ಮಾಂಸಾಹಾರವನ್ನು ಸೇವಿಸಿದೆ ಎಂದು ಇತ್ತೀಚೆಗೆ ಪತ್ರಿಕೆಯೊಂದು ವರದಿ ಮಾಡಿದೆ. ಈ ಘಟನೆಗಳು ಸಂವಿಧಾನದ ಅಡಿಯಲ್ಲಿ ಹಿಂದೂಗಳಿಗೆ ಖಾತರಿಪಡಿಸಿದ ಮೂಲಭೂತ ಹಕ್ಕುಗಳಿಗೆ ಸಂಪೂರ್ಣವಾಗಿ ಅಡ್ಡಿಪಡಿಸುತ್ತಿವೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನು ಓದಿ: ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...