Homeಮುಖಪುಟದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

ದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ದೇವಾಲಯಗಳಲ್ಲಿ ‘ಕೋಡಿಮಾರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ನಿರ್ದೇಶನ ನೀಡಿದ್ದು, ಹಿಂದೂಗಳಿಗೆ ಕೂಡ ಧರ್ಮವನ್ನು ಆಚರಿಸುವ ಮೂಲಭೂತ ಹಕ್ಕು ಇದೆ ಎಂದು ಹೇಳಿದೆ.

ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ. ಅರ್ಜಿದಾರರು ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಬೋರ್ಡ್‌ಗಳನ್ನು ಅಳವಡಿಸುವಂತೆ ಕೂಡ ಆಗ್ರಹಿಸಿದ್ದರು.

ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ಮುರುಗನ್ ದೇವಾಲಯವಿದೆ. ತಮಿಳುನಾಡು ಸರ್ಕಾರದ ಪರವಾಗಿ ಪ್ರಧಾನ ಕಾರ್ಯದರ್ಶಿ, ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಧಾರ್ಮಿಕ ದತ್ತಿ ಇಲಾಖೆ, ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಮತ್ತು ಪಳನಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರತಿವಾದಿಗಳಾಗಿದ್ದರು.

ಈ ಕುರಿತ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ದೇವಸ್ಥಾನದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಹಿಂದೂಯೇತರರಿಗೆ ಅವಕಾಶ ನೀಡದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಲಾಗಿದೆ. ಯಾವುದೇ ಹಿಂದೂ ಅಲ್ಲದವರು ದೇವಸ್ಥಾನಕ್ಕೆ ಭೇಟಿ ಮಾಡುವುದಾಗಿ ಹೇಳಿಕೊಂಡರೆ, ಅಂತಹ ವ್ಯಕ್ತಿಯಿಂದ ನನಗೆ ಹಿಂದೂ ಧರ್ಮದ ಪದ್ಧತಿ ಹಾಗೂ ಸಂಪ್ರದಾಯಗಳ ಬಗ್ಗೆ ನಂಬಿಕೆ ಇದೆ ಹಾಗೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಚ್ಚಳಿಕೆ ಬರೆಸಬೇಕು ಎಂದೂ ನ್ಯಾಯಾಲಯವು ಸೂಚಿಸಿದೆ. ಅಂತಹ ವ್ಯಕ್ತಿಯನ್ನು ಅನುಮತಿಸಿದಾಗ ಅದನ್ನು ದೇವಸ್ಥಾನವು ನಿರ್ವಹಿಸುವ ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಕೋರ್ಟ್‌ ಹೇಳಿದೆ.

ಪ್ರತಿವಾದಿಗಳು ಸಲ್ಲಿಸಿದ ರಿಟ್ ಅರ್ಜಿಯನ್ನು ಪಳನಿ ದೇವಸ್ಥಾನಕ್ಕೆ ಮಾತ್ರ ಸಲ್ಲಿಸಲಾಗಿದೆ ಮತ್ತು ಆದೇಶವನ್ನು ಅದಕ್ಕೆ ಸೀಮಿತಗೊಳಿಸಬೇಕು, ಆದರೆ ಎತ್ತಿರುವ ವಿಷಯವು ದೊಡ್ಡ ವಿಷಯವಾಗಿದೆ ಮತ್ತು ಅದೇ ಎಲ್ಲಾ ಹಿಂದೂ ದೇವಾಲಯಗಳಿಗೆ ಅನ್ವಯಿಸಬೇಕು, ಸೂಚಿಸಲಾಗಿರುವ ಈ ನಿರ್ಬಂಧಗಳು ಸಮಾಜದಲ್ಲಿನ ವಿವಿಧ ಧರ್ಮಗಳ ನಡುವಿನ ಕೋಮು ಸೌಹಾರ್ದತೆ ಹಾಗೂ ಶಾಂತಿ ಉಳಿಯುವುದನ್ನು ಖಾತರಿ ಪಡಿಸಲಿವೆ. ಹೀಗಾಗಿ ರಾಜ್ಯ ಸರ್ಕಾರ, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ, ಪ್ರತಿವಾದಿಗಳು ಹಾಗೂ ದೇವಾಲಯಗಳ ಆಡಳಿತದಲ್ಲಿ ಭಾಗಿಯಾಗಿರುವ ಎಲ್ಲರೂ ಈ ನಿರ್ದೇಶನವನ್ನು ಎಲ್ಲ ಹಿಂದೂ ದೇವಾಲಯಗಳಲ್ಲಿ ಪಾಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇತರ ಧರ್ಮಿಯರಿಗೆ ಸೇರಿದ ಜನರು ಅವರ ಧರ್ಮವನ್ನು ಆಚರಿಸಲು ಹಕ್ಕನ್ನು ಹೊಂದಿದ್ದಾರೆ.  ಅವರ ಧರ್ಮದ ಸಂಪ್ರದಾಯಗಳು ಮತ್ತು ಆಚರಣೆಗಳು ಮಧ್ಯಪ್ರವೇಶಿಸುವಂತಿಲ್ಲ ಮತ್ತು ಯಾವುದೇ ಹಸ್ತಕ್ಷೇಪವನ್ನು ಮಾಡುವಂತಿಲ್ಲ. ದೇವಾಲಯವು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಲ್ಲ. ತಂಜಾವೂರಿನ ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನಕ್ಕೆ ಇತರ ಧರ್ಮದ ಜನರು ದೇವಾಲಯದ ವಾಸ್ತುಶಿಲ್ಪಗಳನ್ನು ವೀಕ್ಷಿಸಲು ಬರುತ್ತಾರೆ. ವಾಸ್ತುಶಿಲ್ಪದ ಸ್ಮಾರಕಗಳನ್ನು ವೀಕ್ಷಿಸಲು ಬರುವ ಜನರು ಆವರಣವನ್ನು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಾಗಿ ಬಳಸುವಂತಿಲ್ಲ ಮತ್ತು ದೇವಾಲಯಗಳ ಆವರಣವನ್ನು ಗೌರವದಿಂದ ಕಾಣಬೇಕು ಎಂದು ಹೇಳಿದೆ.

ಹಿಂದೂಯೇತರರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ ಎಂದು ಹೇಳಲಾದ ಘಟನೆಯೊಂದನ್ನು ಹೈಕೋರ್ಟ್ ಉಲ್ಲೇಖಿಸಿದೆ. ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನದಲ್ಲಿ ಅನ್ಯ ಧರ್ಮದ ವ್ಯಕ್ತಿಗಳ ಗುಂಪೊಂದು ದೇವಸ್ಥಾನದ ಆವರಣವನ್ನು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸಿದೆ ಮತ್ತು ದೇವಾಲಯದ ಆವರಣದಲ್ಲಿ ಮಾಂಸಾಹಾರವನ್ನು ಸೇವಿಸಿದೆ ಎಂದು ಇತ್ತೀಚೆಗೆ ಪತ್ರಿಕೆಯೊಂದು ವರದಿ ಮಾಡಿದೆ. ಈ ಘಟನೆಗಳು ಸಂವಿಧಾನದ ಅಡಿಯಲ್ಲಿ ಹಿಂದೂಗಳಿಗೆ ಖಾತರಿಪಡಿಸಿದ ಮೂಲಭೂತ ಹಕ್ಕುಗಳಿಗೆ ಸಂಪೂರ್ಣವಾಗಿ ಅಡ್ಡಿಪಡಿಸುತ್ತಿವೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನು ಓದಿ: ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...