Homeಮುಖಪುಟದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

ದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ದೇವಾಲಯಗಳಲ್ಲಿ ‘ಕೋಡಿಮಾರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ನಿರ್ದೇಶನ ನೀಡಿದ್ದು, ಹಿಂದೂಗಳಿಗೆ ಕೂಡ ಧರ್ಮವನ್ನು ಆಚರಿಸುವ ಮೂಲಭೂತ ಹಕ್ಕು ಇದೆ ಎಂದು ಹೇಳಿದೆ.

ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ. ಅರ್ಜಿದಾರರು ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಬೋರ್ಡ್‌ಗಳನ್ನು ಅಳವಡಿಸುವಂತೆ ಕೂಡ ಆಗ್ರಹಿಸಿದ್ದರು.

ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ಮುರುಗನ್ ದೇವಾಲಯವಿದೆ. ತಮಿಳುನಾಡು ಸರ್ಕಾರದ ಪರವಾಗಿ ಪ್ರಧಾನ ಕಾರ್ಯದರ್ಶಿ, ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಧಾರ್ಮಿಕ ದತ್ತಿ ಇಲಾಖೆ, ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಮತ್ತು ಪಳನಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರತಿವಾದಿಗಳಾಗಿದ್ದರು.

ಈ ಕುರಿತ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ದೇವಸ್ಥಾನದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಹಿಂದೂಯೇತರರಿಗೆ ಅವಕಾಶ ನೀಡದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಲಾಗಿದೆ. ಯಾವುದೇ ಹಿಂದೂ ಅಲ್ಲದವರು ದೇವಸ್ಥಾನಕ್ಕೆ ಭೇಟಿ ಮಾಡುವುದಾಗಿ ಹೇಳಿಕೊಂಡರೆ, ಅಂತಹ ವ್ಯಕ್ತಿಯಿಂದ ನನಗೆ ಹಿಂದೂ ಧರ್ಮದ ಪದ್ಧತಿ ಹಾಗೂ ಸಂಪ್ರದಾಯಗಳ ಬಗ್ಗೆ ನಂಬಿಕೆ ಇದೆ ಹಾಗೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಚ್ಚಳಿಕೆ ಬರೆಸಬೇಕು ಎಂದೂ ನ್ಯಾಯಾಲಯವು ಸೂಚಿಸಿದೆ. ಅಂತಹ ವ್ಯಕ್ತಿಯನ್ನು ಅನುಮತಿಸಿದಾಗ ಅದನ್ನು ದೇವಸ್ಥಾನವು ನಿರ್ವಹಿಸುವ ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಕೋರ್ಟ್‌ ಹೇಳಿದೆ.

ಪ್ರತಿವಾದಿಗಳು ಸಲ್ಲಿಸಿದ ರಿಟ್ ಅರ್ಜಿಯನ್ನು ಪಳನಿ ದೇವಸ್ಥಾನಕ್ಕೆ ಮಾತ್ರ ಸಲ್ಲಿಸಲಾಗಿದೆ ಮತ್ತು ಆದೇಶವನ್ನು ಅದಕ್ಕೆ ಸೀಮಿತಗೊಳಿಸಬೇಕು, ಆದರೆ ಎತ್ತಿರುವ ವಿಷಯವು ದೊಡ್ಡ ವಿಷಯವಾಗಿದೆ ಮತ್ತು ಅದೇ ಎಲ್ಲಾ ಹಿಂದೂ ದೇವಾಲಯಗಳಿಗೆ ಅನ್ವಯಿಸಬೇಕು, ಸೂಚಿಸಲಾಗಿರುವ ಈ ನಿರ್ಬಂಧಗಳು ಸಮಾಜದಲ್ಲಿನ ವಿವಿಧ ಧರ್ಮಗಳ ನಡುವಿನ ಕೋಮು ಸೌಹಾರ್ದತೆ ಹಾಗೂ ಶಾಂತಿ ಉಳಿಯುವುದನ್ನು ಖಾತರಿ ಪಡಿಸಲಿವೆ. ಹೀಗಾಗಿ ರಾಜ್ಯ ಸರ್ಕಾರ, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ, ಪ್ರತಿವಾದಿಗಳು ಹಾಗೂ ದೇವಾಲಯಗಳ ಆಡಳಿತದಲ್ಲಿ ಭಾಗಿಯಾಗಿರುವ ಎಲ್ಲರೂ ಈ ನಿರ್ದೇಶನವನ್ನು ಎಲ್ಲ ಹಿಂದೂ ದೇವಾಲಯಗಳಲ್ಲಿ ಪಾಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇತರ ಧರ್ಮಿಯರಿಗೆ ಸೇರಿದ ಜನರು ಅವರ ಧರ್ಮವನ್ನು ಆಚರಿಸಲು ಹಕ್ಕನ್ನು ಹೊಂದಿದ್ದಾರೆ.  ಅವರ ಧರ್ಮದ ಸಂಪ್ರದಾಯಗಳು ಮತ್ತು ಆಚರಣೆಗಳು ಮಧ್ಯಪ್ರವೇಶಿಸುವಂತಿಲ್ಲ ಮತ್ತು ಯಾವುದೇ ಹಸ್ತಕ್ಷೇಪವನ್ನು ಮಾಡುವಂತಿಲ್ಲ. ದೇವಾಲಯವು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಲ್ಲ. ತಂಜಾವೂರಿನ ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನಕ್ಕೆ ಇತರ ಧರ್ಮದ ಜನರು ದೇವಾಲಯದ ವಾಸ್ತುಶಿಲ್ಪಗಳನ್ನು ವೀಕ್ಷಿಸಲು ಬರುತ್ತಾರೆ. ವಾಸ್ತುಶಿಲ್ಪದ ಸ್ಮಾರಕಗಳನ್ನು ವೀಕ್ಷಿಸಲು ಬರುವ ಜನರು ಆವರಣವನ್ನು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಾಗಿ ಬಳಸುವಂತಿಲ್ಲ ಮತ್ತು ದೇವಾಲಯಗಳ ಆವರಣವನ್ನು ಗೌರವದಿಂದ ಕಾಣಬೇಕು ಎಂದು ಹೇಳಿದೆ.

ಹಿಂದೂಯೇತರರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ ಎಂದು ಹೇಳಲಾದ ಘಟನೆಯೊಂದನ್ನು ಹೈಕೋರ್ಟ್ ಉಲ್ಲೇಖಿಸಿದೆ. ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನದಲ್ಲಿ ಅನ್ಯ ಧರ್ಮದ ವ್ಯಕ್ತಿಗಳ ಗುಂಪೊಂದು ದೇವಸ್ಥಾನದ ಆವರಣವನ್ನು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸಿದೆ ಮತ್ತು ದೇವಾಲಯದ ಆವರಣದಲ್ಲಿ ಮಾಂಸಾಹಾರವನ್ನು ಸೇವಿಸಿದೆ ಎಂದು ಇತ್ತೀಚೆಗೆ ಪತ್ರಿಕೆಯೊಂದು ವರದಿ ಮಾಡಿದೆ. ಈ ಘಟನೆಗಳು ಸಂವಿಧಾನದ ಅಡಿಯಲ್ಲಿ ಹಿಂದೂಗಳಿಗೆ ಖಾತರಿಪಡಿಸಿದ ಮೂಲಭೂತ ಹಕ್ಕುಗಳಿಗೆ ಸಂಪೂರ್ಣವಾಗಿ ಅಡ್ಡಿಪಡಿಸುತ್ತಿವೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನು ಓದಿ: ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...