Homeಮುಖಪುಟದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

ದೇವಾಲಯಕ್ಕೆ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ದೇವಾಲಯಗಳಲ್ಲಿ ‘ಕೋಡಿಮಾರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ನಿರ್ದೇಶನ ನೀಡಿದ್ದು, ಹಿಂದೂಗಳಿಗೆ ಕೂಡ ಧರ್ಮವನ್ನು ಆಚರಿಸುವ ಮೂಲಭೂತ ಹಕ್ಕು ಇದೆ ಎಂದು ಹೇಳಿದೆ.

ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ. ಅರ್ಜಿದಾರರು ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಬೋರ್ಡ್‌ಗಳನ್ನು ಅಳವಡಿಸುವಂತೆ ಕೂಡ ಆಗ್ರಹಿಸಿದ್ದರು.

ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ಮುರುಗನ್ ದೇವಾಲಯವಿದೆ. ತಮಿಳುನಾಡು ಸರ್ಕಾರದ ಪರವಾಗಿ ಪ್ರಧಾನ ಕಾರ್ಯದರ್ಶಿ, ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಧಾರ್ಮಿಕ ದತ್ತಿ ಇಲಾಖೆ, ಆಯುಕ್ತರು, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಮತ್ತು ಪಳನಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರತಿವಾದಿಗಳಾಗಿದ್ದರು.

ಈ ಕುರಿತ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ದೇವಸ್ಥಾನದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಹಿಂದೂಯೇತರರಿಗೆ ಅವಕಾಶ ನೀಡದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಲಾಗಿದೆ. ಯಾವುದೇ ಹಿಂದೂ ಅಲ್ಲದವರು ದೇವಸ್ಥಾನಕ್ಕೆ ಭೇಟಿ ಮಾಡುವುದಾಗಿ ಹೇಳಿಕೊಂಡರೆ, ಅಂತಹ ವ್ಯಕ್ತಿಯಿಂದ ನನಗೆ ಹಿಂದೂ ಧರ್ಮದ ಪದ್ಧತಿ ಹಾಗೂ ಸಂಪ್ರದಾಯಗಳ ಬಗ್ಗೆ ನಂಬಿಕೆ ಇದೆ ಹಾಗೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಚ್ಚಳಿಕೆ ಬರೆಸಬೇಕು ಎಂದೂ ನ್ಯಾಯಾಲಯವು ಸೂಚಿಸಿದೆ. ಅಂತಹ ವ್ಯಕ್ತಿಯನ್ನು ಅನುಮತಿಸಿದಾಗ ಅದನ್ನು ದೇವಸ್ಥಾನವು ನಿರ್ವಹಿಸುವ ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಕೋರ್ಟ್‌ ಹೇಳಿದೆ.

ಪ್ರತಿವಾದಿಗಳು ಸಲ್ಲಿಸಿದ ರಿಟ್ ಅರ್ಜಿಯನ್ನು ಪಳನಿ ದೇವಸ್ಥಾನಕ್ಕೆ ಮಾತ್ರ ಸಲ್ಲಿಸಲಾಗಿದೆ ಮತ್ತು ಆದೇಶವನ್ನು ಅದಕ್ಕೆ ಸೀಮಿತಗೊಳಿಸಬೇಕು, ಆದರೆ ಎತ್ತಿರುವ ವಿಷಯವು ದೊಡ್ಡ ವಿಷಯವಾಗಿದೆ ಮತ್ತು ಅದೇ ಎಲ್ಲಾ ಹಿಂದೂ ದೇವಾಲಯಗಳಿಗೆ ಅನ್ವಯಿಸಬೇಕು, ಸೂಚಿಸಲಾಗಿರುವ ಈ ನಿರ್ಬಂಧಗಳು ಸಮಾಜದಲ್ಲಿನ ವಿವಿಧ ಧರ್ಮಗಳ ನಡುವಿನ ಕೋಮು ಸೌಹಾರ್ದತೆ ಹಾಗೂ ಶಾಂತಿ ಉಳಿಯುವುದನ್ನು ಖಾತರಿ ಪಡಿಸಲಿವೆ. ಹೀಗಾಗಿ ರಾಜ್ಯ ಸರ್ಕಾರ, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ, ಪ್ರತಿವಾದಿಗಳು ಹಾಗೂ ದೇವಾಲಯಗಳ ಆಡಳಿತದಲ್ಲಿ ಭಾಗಿಯಾಗಿರುವ ಎಲ್ಲರೂ ಈ ನಿರ್ದೇಶನವನ್ನು ಎಲ್ಲ ಹಿಂದೂ ದೇವಾಲಯಗಳಲ್ಲಿ ಪಾಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇತರ ಧರ್ಮಿಯರಿಗೆ ಸೇರಿದ ಜನರು ಅವರ ಧರ್ಮವನ್ನು ಆಚರಿಸಲು ಹಕ್ಕನ್ನು ಹೊಂದಿದ್ದಾರೆ.  ಅವರ ಧರ್ಮದ ಸಂಪ್ರದಾಯಗಳು ಮತ್ತು ಆಚರಣೆಗಳು ಮಧ್ಯಪ್ರವೇಶಿಸುವಂತಿಲ್ಲ ಮತ್ತು ಯಾವುದೇ ಹಸ್ತಕ್ಷೇಪವನ್ನು ಮಾಡುವಂತಿಲ್ಲ. ದೇವಾಲಯವು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಲ್ಲ. ತಂಜಾವೂರಿನ ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನಕ್ಕೆ ಇತರ ಧರ್ಮದ ಜನರು ದೇವಾಲಯದ ವಾಸ್ತುಶಿಲ್ಪಗಳನ್ನು ವೀಕ್ಷಿಸಲು ಬರುತ್ತಾರೆ. ವಾಸ್ತುಶಿಲ್ಪದ ಸ್ಮಾರಕಗಳನ್ನು ವೀಕ್ಷಿಸಲು ಬರುವ ಜನರು ಆವರಣವನ್ನು ವಿಹಾರ ಸ್ಥಳ ಅಥವಾ ಪ್ರವಾಸಿ ತಾಣವಾಗಿ ಬಳಸುವಂತಿಲ್ಲ ಮತ್ತು ದೇವಾಲಯಗಳ ಆವರಣವನ್ನು ಗೌರವದಿಂದ ಕಾಣಬೇಕು ಎಂದು ಹೇಳಿದೆ.

ಹಿಂದೂಯೇತರರು ದೇವಾಲಯಗಳಿಗೆ ಪ್ರವೇಶಿಸುತ್ತಿದ್ದಾರೆ ಎಂದು ಹೇಳಲಾದ ಘಟನೆಯೊಂದನ್ನು ಹೈಕೋರ್ಟ್ ಉಲ್ಲೇಖಿಸಿದೆ. ಅರುಲ್ಮಿಘು ಬ್ರಹದೀಶ್ವರ ದೇವಸ್ಥಾನದಲ್ಲಿ ಅನ್ಯ ಧರ್ಮದ ವ್ಯಕ್ತಿಗಳ ಗುಂಪೊಂದು ದೇವಸ್ಥಾನದ ಆವರಣವನ್ನು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸಿದೆ ಮತ್ತು ದೇವಾಲಯದ ಆವರಣದಲ್ಲಿ ಮಾಂಸಾಹಾರವನ್ನು ಸೇವಿಸಿದೆ ಎಂದು ಇತ್ತೀಚೆಗೆ ಪತ್ರಿಕೆಯೊಂದು ವರದಿ ಮಾಡಿದೆ. ಈ ಘಟನೆಗಳು ಸಂವಿಧಾನದ ಅಡಿಯಲ್ಲಿ ಹಿಂದೂಗಳಿಗೆ ಖಾತರಿಪಡಿಸಿದ ಮೂಲಭೂತ ಹಕ್ಕುಗಳಿಗೆ ಸಂಪೂರ್ಣವಾಗಿ ಅಡ್ಡಿಪಡಿಸುತ್ತಿವೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನು ಓದಿ: ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...