Homeಕರೋನಾ ತಲ್ಲಣಕೊರೊನಾದಿಂದ ಮೃತಪಟ್ಟವರಿಗೆ 4 ಲಕ್ಷ ರೂ.ಪರಿಹಾರ ನೀಡಲಾಗದು: ಒಕ್ಕೂಟ ಸರ್ಕಾರ

ಕೊರೊನಾದಿಂದ ಮೃತಪಟ್ಟವರಿಗೆ 4 ಲಕ್ಷ ರೂ.ಪರಿಹಾರ ನೀಡಲಾಗದು: ಒಕ್ಕೂಟ ಸರ್ಕಾರ

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದಿಂದ ಮೃತಪಟ್ಟ ಎಲ್ಲರಿಗೂ 4 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗದು ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್​ಗೆ ಭಾನುವಾರ ಅಫಿಡವಿಟ್​ ಸಲ್ಲಿಸಿದೆ. ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ತೆರಿಗೆ ಆದಾಯ ಕಡಿಮೆಯಾಗಿದೆ. ಜೊತೆಗೆ ಆರೋಗ್ಯ ವೆಚ್ಚಗಳ ಹೆಚ್ಚಳದಿಂದಾಗಿ ರಾಜ್ಯಗಳು ಮತ್ತು ಕೇಂದ್ರದ ಹಣಕಾಸು ಪರಿಸ್ಥಿತಿ ತೀವ್ರ ಒತ್ತಡದಲ್ಲಿದೆ ಎಂದು ಮಾಹಿತಿ ನೀಡಿದೆ.

“ಎಲ್ಲರಿಗೂ ಪರಿಹಾರ ನೀಡಿದರೆ, ವಿಪತ್ತು ಪರಿಹಾರ ನಿಧಿಗಳನ್ನು ಖಾಲಿ ಮಾಡಿದಂತಾಗುತ್ತದೆ ಮತ್ತು ಕೊರೊನಾ ಭವಿಷ್ಯದ ಅಲೆಗಳನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯಗಳ ಸಿದ್ಧತೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್​ಗೆ ಭಾನುವಾರ ಅಫಿಡವಿಟ್​ ಸಲ್ಲಿಸಿದೆ.

ವಕೀಲರಾದ ಗೌರವ್ ಕುಮಾರ್ ಬನ್ಸಾಲ್ ಮತ್ತು ರೀಪಕ್ ಕನ್ಸಾಲ್, “ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 12 ಅನ್ನು ಉಲ್ಲೇಖಿಸಿ ಇದರ ಅಡಿಯಲ್ಲಿ  ವಿಪತ್ತು ಪೀಡಿತ ವ್ಯಕ್ತಿಗಳಿಗೆ ಕನಿಷ್ಟ ಪರಿಹಾರ ನೀಡಬೇಕು” ಎಂದು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ ನೀಡಿತ್ತು. ಅದರಂತೆ ಒಕ್ಕೂಟ ಸರ್ಕಾರ ಹರಿಹಾರ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

“ಕೊರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ರಾಜ್ಯ ಹಾಗೂ ಕೇಂದ್ರದ ತೆರಿಗೆ ಆದಾಯ ಕಡಿಮೆಯಾಗಿದೆ. ಇದೇ ಸಂದರ್ಭದಲ್ಲಿ ಆರೋಗ್ಯ ವೆಚ್ಚಗಳು ಅಧಿಕವಾಗಿದೆ. ಹೀಗಾಗಿ ರಾಜ್ಯಗಳು ಮತ್ತು ಕೇಂದ್ರದ ಹಣಕಾಸು ಪರಿಸ್ಥಿತಿ ತೀವ್ರ ಒತ್ತಡದಲ್ಲಿದೆ. ಈಗಾಗಲೇ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ 12 ಅಧಿಸೂಚನೆಗಳಿಗೆ ಮಾಜಿ ಗ್ರೇಟಿಯಾ ಪರಿಹಾರವನ್ನು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್‌ಡಿಆರ್‌ಎಫ್) ಮೂಲಕ ರಾಜ್ಯ ಸರ್ಕಾರಗಳಿಗೆ ಒದಗಿಸಲಾಗಿದೆ. 2021-22ರ ವಾರ್ಷಿಕ ಹಂಚಿಕೆ ಎಸ್‌ಡಿಆರ್‌ಎಫ್, ಎಲ್ಲಾ ರಾಜ್ಯಗಳಿಗೆ ಸೇರಿ 22,184 ಕೋಟಿ ರೂ ನೀಡಲಾಗಿದೆ” ಎಂದಿದೆ.

“ಇಂತಹ ಸಂದರ್ಭದಲ್ಲಿ ಕೊರೊನಾ ಮುಂದಿನ ಅಲೆಗಳು ಉಂಟು ಮಾಡಬಹುದಾದ ಅನಾಹುತಗಳನ್ನು ಎದುರಿಸುವುದು ಕಷ್ಟವಾಗಲಿದೆ. ಸರ್ಕಾರಗಳ ಖಜಾನೆ ಖಾಲಿಯಾದರೆ ಆರ್ಥಿಕತೆಯೂ ಮತ್ತಷ್ಟು ಕುಸಿಯಲಿದೆ. ಸರ್ಕಾರಗಳ ಸಂಪನ್ಮೂಲಗಳಿಗೆ ಮಿತಿಗಳಿವೆ ಮತ್ತು ಎಕ್ಸ್-ಗ್ರೇಟಿಯಾ ಮೂಲಕ ಯಾವುದೇ ಹೆಚ್ಚುವರಿ ಹೊರೆ ಇತರ ಆರೋಗ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಲಭ್ಯವಿರುವ ಹಣವನ್ನು ಕಡಿಮೆ ಮಾಡುತ್ತದೆ” ಎಂದು ಅಫಿಡವಿಟ್​ನಲ್ಲಿ ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಪ್ರವಾಹ, ಭೂಕಂಪ, ಚಂಡಮಾರುತ ಇತ್ಯಾದಿಗಳಿಗಿಂತ ಭಿನ್ನವಾಗಿ, ತಡೆಗಟ್ಟುವಿಕೆ, ಪರೀಕ್ಷೆ, ಚಿಕಿತ್ಸೆ, ಸಂಪರ್ಕತಡೆ, ಆಸ್ಪತ್ರೆಗೆ ಸೇರಿಸುವುದು, ಔಷಧಿಗಳು ಮತ್ತು ವ್ಯಾಕ್ಸಿನೇಷನ್ ಇತ್ಯಾದಿಗಳಿಗಾಗಿ ಕೇಂದ್ರ ಮತ್ತು ರಾಜ್ಯಗಳು ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿವೆ. ಅದು ಇನ್ನೂ ಮುಂದುವರೆದಿದೆ. ಅಲ್ಲದೆ ಇನ್ನೂ ಎಷ್ಟು ಹಣ ಬೇಕು ಎಂದು ತಿಳಿದಿಲ್ಲ. ಹೀಗಾಗಿ, ಕೊರೊನಾ ಭವಿಷ್ಯದ ಅಲೆಗಳನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ” ಎಂದು ಸುಪ್ರೀಂ ಕೋರ್ಟ್​ಗೆ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...