Homeಮುಖಪುಟಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ದೇಶ ನಡೆಸುವುದು, ರೈತರೊಂದಿಗೆ ನಿಲ್ಲುವುದು ಮತ್ತು ಉದ್ಯೋಗ ಸೃಷ್ಟಿಸುವುದು ನಮಗೆ ತಿಳಿದಿದೆ. ಆದರೆ, ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಚುನಾವಣಾ ಪ್ರಚಾರ ಆರಂಭವಾಗಿದ್ದು, ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದಾರೆ.

ಬಿಹಾರದ ವಾಲ್ಮೀಕಿ ನಗರದಲ್ಲಿ ಬುಧವಾರ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನೋಟು ಅಮಾನ್ಯೀಕರಣ ಮತ್ತು ಯೋಜನೆಯಿಲ್ಲದ ಲಾಕ್‌ಡೌನ್ ಸಣ್ಣ ವ್ಯಾಪಾರಿಗಳು, ಕಾರ್ಮಿಕರು ಮತ್ತು ರೈತರನ್ನು ಬೀದಿಗೆ ತಳ್ಳಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

’ಪ್ರಧಾನಿ ಮೋದಿ ಈಗ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭಾಷಣಗಳಲ್ಲಿ ಹೇಳುತ್ತಿಲ್ಲ. ಅವರು ಸುಳ್ಳು ಹೇಳಿದ್ದಾರೆಂದು ಜನರಿಗೆ ತಿಳಿದಿದೆ. ಈಗ ಪ್ರಧಾನಿ ಇಲ್ಲಿಗೆ ಬಂದು ಎರಡು ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಹೇಳಿದರೆ, ಜನರೇ ಅವರನ್ನು ಓಡಿಸುತ್ತಾರೆ’ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

‘ಕಾಂಗ್ರೆಸ್ ಪಕ್ಷವು ಈವರೆಗೂ ದೇಶಕ್ಕೆ ನಿರ್ದೇಶನ ನೀಡುತ್ತ ಬಂದಿದೆ. ನಾವು ನರೇಗಾ ಯೋಜನೆ ತಂದಿದ್ದೇವೆ. ಸಾಲ ಮನ್ನಾ ಮಾಡಿದ್ದೇವೆ. ದೇಶ ನಡೆಸುವುದು, ರೈತರೊಂದಿಗೆ ನಿಲ್ಲುವುದು ಮತ್ತು ಉದ್ಯೋಗ ಸೃಷ್ಟಿಸುವುದು ನಮಗೆ ತಿಳಿದಿದೆ. ಆದರೆ, ಸುಳ್ಳು ಹೇಳುವ ಒಂದು ವಿಷಯ ನಮಗೆ ತಿಳಿದಿಲ್ಲ. ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ’ ಎಂದು ರಾಹುಲ್ ಗಾಂಧಿ‌ ವಾಗ್ದಾಳಿ ನಡೆಸಿದ್ದಾರೆ.

‘ಸರ್ಕಾರವು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳ ಪರವಾಗಿದೆ. ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ಗಳ ಉದ್ದೇಶ ಎರಡು ಒಂದೇ ಆಗಿತ್ತು. ರೈತರು, ಸಣ್ಣ ವ್ಯಾಪಾರಿಗಳು ಮತ್ತು ಕಾರ್ಮಿಕರನ್ನು ನಾಶಪಡಿಸುವ ಗುರಿಯನ್ನು ಹೊಂದಿದ್ದವು’ ಎಂದು ಆರೋಪಿಸಿದ್ದಾರೆ.

“ಅವರಿಗೆ ಬಿಹಾರದಲ್ಲಿ ಉದ್ಯೋಗ ನೀಡಲು ಸಾಧ್ಯವಿಲ್ಲ. ಇದು ವಾಸ್ತವ. ರಾಜ್ಯದ ರೈತರು ಮತ್ತು ಯುವಕರೊಂದಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಸಮಸ್ಯೆ ಇರುವುದು ನಿಮ್ಮ ಸಿಎಂ ನಿತೀಶ್ ಕುಮಾರ್ ಮತ್ತು ಪಿಎಂ ಅವರೊಂದಿಗೆ. ಅವರುಗಳು ನಿಮಗೆ ಸತ್ಯವನ್ನು ಹೇಳುವುದಿಲ್ಲ. ಪ್ರಧಾನಿ ಮೋದಿ ಪ್ರತಿ ವರ್ಷ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದರು” ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಸಮಯದಲ್ಲಿ ಲಕ್ಷಾಂತರ ಬಿಹಾರ ಕಾರ್ಮಿಕರು ರಾಜ್ಯಕ್ಕೆ ಮರಳಿದ್ದನ್ನು ನೀವು ನೋಡಿದ್ದೀರಿ. ಇದು ಚುನಾವಣಾ ಸಮಯ, ಕಾಲ್ನಡಿಗೆಯಲ್ಲಿ ಪ್ರಯಾಣಿಸಿದ ನೀವು ಅದನ್ನು ಮರೆಯಬಾರದು. ದಸರಾದಲ್ಲಿ ರೈತರು ಮತ್ತು ಕಾರ್ಮಿಕರು ಪ್ರಧಾನಿ ಮೋದಿಯವರ ಪ್ರತಿಕೃತಿ ದಹಿಸಿ ಕೋಪ ಹೊರಹಾಕಿದ್ದಾರೆ. ದೇಶದ ರೈತರು ಮತ್ತು ಯುವಕರು ಪ್ರಧಾನಿಯವರ ವಿರುದ್ಧ ಕೋಪಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಬಾರಿಯ ಚುನಾವಣಾ ಪ್ರಚಾರದಲ್ಲಿಯೂ “ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ. ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದೀರಿ. ಆದರೆ ಯಾರಿಗೂ ಉದ್ಯೋಗ ಸಿಗಲಿಲ್ಲ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.


ಇದನ್ನೂ ಓದಿ: ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...