Homeಮುಖಪುಟಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ದೇಶ ನಡೆಸುವುದು, ರೈತರೊಂದಿಗೆ ನಿಲ್ಲುವುದು ಮತ್ತು ಉದ್ಯೋಗ ಸೃಷ್ಟಿಸುವುದು ನಮಗೆ ತಿಳಿದಿದೆ. ಆದರೆ, ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಚುನಾವಣಾ ಪ್ರಚಾರ ಆರಂಭವಾಗಿದ್ದು, ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದಾರೆ.

ಬಿಹಾರದ ವಾಲ್ಮೀಕಿ ನಗರದಲ್ಲಿ ಬುಧವಾರ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನೋಟು ಅಮಾನ್ಯೀಕರಣ ಮತ್ತು ಯೋಜನೆಯಿಲ್ಲದ ಲಾಕ್‌ಡೌನ್ ಸಣ್ಣ ವ್ಯಾಪಾರಿಗಳು, ಕಾರ್ಮಿಕರು ಮತ್ತು ರೈತರನ್ನು ಬೀದಿಗೆ ತಳ್ಳಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

’ಪ್ರಧಾನಿ ಮೋದಿ ಈಗ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭಾಷಣಗಳಲ್ಲಿ ಹೇಳುತ್ತಿಲ್ಲ. ಅವರು ಸುಳ್ಳು ಹೇಳಿದ್ದಾರೆಂದು ಜನರಿಗೆ ತಿಳಿದಿದೆ. ಈಗ ಪ್ರಧಾನಿ ಇಲ್ಲಿಗೆ ಬಂದು ಎರಡು ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಹೇಳಿದರೆ, ಜನರೇ ಅವರನ್ನು ಓಡಿಸುತ್ತಾರೆ’ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

‘ಕಾಂಗ್ರೆಸ್ ಪಕ್ಷವು ಈವರೆಗೂ ದೇಶಕ್ಕೆ ನಿರ್ದೇಶನ ನೀಡುತ್ತ ಬಂದಿದೆ. ನಾವು ನರೇಗಾ ಯೋಜನೆ ತಂದಿದ್ದೇವೆ. ಸಾಲ ಮನ್ನಾ ಮಾಡಿದ್ದೇವೆ. ದೇಶ ನಡೆಸುವುದು, ರೈತರೊಂದಿಗೆ ನಿಲ್ಲುವುದು ಮತ್ತು ಉದ್ಯೋಗ ಸೃಷ್ಟಿಸುವುದು ನಮಗೆ ತಿಳಿದಿದೆ. ಆದರೆ, ಸುಳ್ಳು ಹೇಳುವ ಒಂದು ವಿಷಯ ನಮಗೆ ತಿಳಿದಿಲ್ಲ. ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ’ ಎಂದು ರಾಹುಲ್ ಗಾಂಧಿ‌ ವಾಗ್ದಾಳಿ ನಡೆಸಿದ್ದಾರೆ.

‘ಸರ್ಕಾರವು ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳ ಪರವಾಗಿದೆ. ನೋಟು ಅಮಾನ್ಯೀಕರಣ ಮತ್ತು ಲಾಕ್‌ಡೌನ್‌ಗಳ ಉದ್ದೇಶ ಎರಡು ಒಂದೇ ಆಗಿತ್ತು. ರೈತರು, ಸಣ್ಣ ವ್ಯಾಪಾರಿಗಳು ಮತ್ತು ಕಾರ್ಮಿಕರನ್ನು ನಾಶಪಡಿಸುವ ಗುರಿಯನ್ನು ಹೊಂದಿದ್ದವು’ ಎಂದು ಆರೋಪಿಸಿದ್ದಾರೆ.

“ಅವರಿಗೆ ಬಿಹಾರದಲ್ಲಿ ಉದ್ಯೋಗ ನೀಡಲು ಸಾಧ್ಯವಿಲ್ಲ. ಇದು ವಾಸ್ತವ. ರಾಜ್ಯದ ರೈತರು ಮತ್ತು ಯುವಕರೊಂದಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಸಮಸ್ಯೆ ಇರುವುದು ನಿಮ್ಮ ಸಿಎಂ ನಿತೀಶ್ ಕುಮಾರ್ ಮತ್ತು ಪಿಎಂ ಅವರೊಂದಿಗೆ. ಅವರುಗಳು ನಿಮಗೆ ಸತ್ಯವನ್ನು ಹೇಳುವುದಿಲ್ಲ. ಪ್ರಧಾನಿ ಮೋದಿ ಪ್ರತಿ ವರ್ಷ 2 ಕೋಟಿ ಉದ್ಯೋಗಗಳು ನೀಡುವ ಭರವಸೆ ನೀಡಿದರು” ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಸಮಯದಲ್ಲಿ ಲಕ್ಷಾಂತರ ಬಿಹಾರ ಕಾರ್ಮಿಕರು ರಾಜ್ಯಕ್ಕೆ ಮರಳಿದ್ದನ್ನು ನೀವು ನೋಡಿದ್ದೀರಿ. ಇದು ಚುನಾವಣಾ ಸಮಯ, ಕಾಲ್ನಡಿಗೆಯಲ್ಲಿ ಪ್ರಯಾಣಿಸಿದ ನೀವು ಅದನ್ನು ಮರೆಯಬಾರದು. ದಸರಾದಲ್ಲಿ ರೈತರು ಮತ್ತು ಕಾರ್ಮಿಕರು ಪ್ರಧಾನಿ ಮೋದಿಯವರ ಪ್ರತಿಕೃತಿ ದಹಿಸಿ ಕೋಪ ಹೊರಹಾಕಿದ್ದಾರೆ. ದೇಶದ ರೈತರು ಮತ್ತು ಯುವಕರು ಪ್ರಧಾನಿಯವರ ವಿರುದ್ಧ ಕೋಪಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಬಾರಿಯ ಚುನಾವಣಾ ಪ್ರಚಾರದಲ್ಲಿಯೂ “ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ. ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದೀರಿ. ಆದರೆ ಯಾರಿಗೂ ಉದ್ಯೋಗ ಸಿಗಲಿಲ್ಲ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.


ಇದನ್ನೂ ಓದಿ: ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...