Homeಮುಖಪುಟಸಾವರ್ಕರ್, ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ: ಭಾಗವತ್ ಹೇಳಿಕೆಗೆ ಚಂದ್ರ ಕುಮಾರ್ ಬೋಸ್ ತಿರುಗೇಟು

ಸಾವರ್ಕರ್, ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ: ಭಾಗವತ್ ಹೇಳಿಕೆಗೆ ಚಂದ್ರ ಕುಮಾರ್ ಬೋಸ್ ತಿರುಗೇಟು

- Advertisement -
- Advertisement -

ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜಯಂತಿಯಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು, “ಆರ್‌ಎಸ್‌ಎಸ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗುರಿಗಳು ಒಂದೇ ಆಗಿವೆ- ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡುವುದು” ಎಂದು ಹೇಳಿದ್ದರು. ಈ ಹೇಳಿಕೆಗೆ ಸ್ವತಃ ಸುಭಾಸ್ ಚಂದ್ರ ಬೋಸ್ ಅವರ ಮೊಮ್ಮಗ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಬಲಪಂಥೀಯ ಸಿದ್ದಾಂತಕ್ಕೂ ಸುಭಾಷ್ ಚಂದ್ರ ಬೋಸ್ ಅವರ ವಿಚಾರಗಳಿಗೆ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ” ಎಂದು ಮೋಹನ್ ಭಾಗವತ್ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ. “ಆರ್‌ಎಸ್‌ಎಸ್ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ. ಇಂದಿನವರೆಗೆ ಎಲ್ಲರನ್ನೂ ಒಳಗೊಳ್ಳುವ ಮತ್ತು ಜಾತ್ಯತೀತರಾಗಿದ್ದ ಏಕೈಕ ನಾಯಕ” ಎಂದು 2020 ರಲ್ಲಿ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲ್ಪಟ್ಟ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಏನು ಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿರಬೇಕು, ನೀವು ಸಾವರ್ಕರ್ ಮತ್ತು ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ, ಅವರು ಒಂದೇ ಪುಟದಲ್ಲಿ ಇರಲು ಸಾಧ್ಯವಿಲ್ಲ” ಎಂದು ಬೋಸ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ನೇತಾಜಿ ಸುಭಾಷ್‌ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್‌ ಬಚ್ಚಿಡುವ ಸತ್ಯಗಳಿವು

ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಮೋಹನ್ ಭಾಗವತ್, “ಆರ್‌ಎಸ್‌ಎಸ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗುರಿಗಳು ಒಂದೇ ಆಗಿವೆ – ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡುವುದು” ಎಂದು ಹೇಳಿದ್ದಾರೆ.

“ನಾವು ನೇತಾಜಿಯನ್ನು ಸ್ವಾತಂತ್ರ್ಯ ಹೋರಾಟಕ್ಕೆ ಅವರ ಅಮೂಲ್ಯ ಕೊಡುಗೆಗಳಿವೆ ಎನ್ನುವ ವಿಚಾರಕ್ಕೆ ಮಾತ್ರ ಸ್ಮರಿಸುವುದಲ್ಲ, ಅವರ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕಿದೆ. ಅವರು ಬಯಸಿದ ಭಾರತದ ಕನಸು ಇನ್ನೂ ಈಡೇರಿಲ್ಲ. ಅದನ್ನು ಸಾಧಿಸಲು ಕೆಲಸ ಮಾಡಬೇಕು” ಎಂದು ಭಾಗವತ್ ಹೇಳಿದರು.

“ಸುಭಾಸ್‌ಬಾಬು ಅವರ ಆದರ್ಶಗಳು ನಮ್ಮ ಮುಂದೆ ಇದೆ. ಅವರು ಹೊಂದಿದ್ದ ಗುರಿಗಳು ನಮ್ಮ ಗುರಿಗಳೂ ಒಂದೇ ಆಗಿವೆ. ಭಾರತವು ಪ್ರಪಂಚದ ಒಂದು ಸಣ್ಣ ಭಾಗವಾಗಿದೆ. ಆದರೆ ನಾವು ಜಗತ್ತಿಗೆ ಪರಿಹಾರವನ್ನು ನೀಡುವಂತಾಗಬೇಕು ಎಂದು ಹೇಳಿದ್ದರು. ನಾವೆಲ್ಲರೂ ಈಗ ಅದರ ಕಡೆಗೆ ಕೆಲಸ ಮಾಡಬೇಕು” ಎಂದರು.

ಆ ಗುರಿಯನ್ನು ಸಾಧಿಸುವುದು ಅತ್ಯಗತ್ಯ ಎಂದು ಒತ್ತಿಹೇಳುತ್ತಾ, “ಗುರಿ ಸಾಧಿಸಲು ವಿಭಿನ್ನ ಮಾರ್ಗಗಳಿರಬಹುದು, ಮತ್ತು ಇವುಗಳನ್ನು ‘isms’ (ಸಿದ್ಧಾಂತಗಳು) ಎಂದು ವಿವರಿಸಲಾಗಿದೆ, ಅವುಗಳು ಭಿನ್ನವಾಗಿರಬಹುದು ಆದರೆ ಮುಖ್ಯವಾದುದು ಗುರಿಯಾಗಿದೆ” ಎಂದು ಹೇಳುವ ಮೂಲಕ ಮೋಹನ್ ಭಾಗವತ್ ಅವರು ತಮ್ಮ ಸಿದ್ದಾಂತಕ್ಕೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಿದ್ದಾಂತಗಳು ಭಿನ್ನವಾಗಿವೆ ಎನ್ನುವ ವಿಚಾರವನ್ನು ಒಪ್ಪಿಕೊಂಡಂತೆ ತೋರುತ್ತದೆ.

ನೇತಾಜಿ ಸುಭಾ‍ಷ್ ಚಂದ್ರ ಬೋಸ್ ಅವರು ಸ್ಪಷ್ಟವಾಗಿ ಜಾತ್ಯಾತೀತ ಸಿದ್ದಾಂತವನ್ನು ಹೊಂದಿದ್ದರು. ಆದರೆ ಮೋಹನ್ ಭಾಗವತ್ ಅವರು ಹೇಳುವ ಬಲಪಂಥೀಯ ಸಿದ್ದಾಂತ ಅದಕ್ಕೆ ತದ್ವಿರುದ್ಧವಾಗಿದೆ. ಬೋಸ್ ಅವರೊಟ್ಟಿಗೆ ತಮ್ಮ ಸಿದ್ದಾಂತವನ್ನು ಸಾಮ್ಯತೆ ಮಾಡಿಕೊಳ್ಳಲು ಮೋಹನ್ ಭಾಗವತ್ ಹಾಗೂ ಸಂಘಪರಿವಾರದ ನಾಯಕರು ಮೇಲಿಂದ ಮೇಲೆ ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಇದಕ್ಕೆ ಈಗ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಸರಿಯಾಗಿ ಉತ್ತರ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...