Homeಮುಖಪುಟಸಾವರ್ಕರ್, ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ: ಭಾಗವತ್ ಹೇಳಿಕೆಗೆ ಚಂದ್ರ ಕುಮಾರ್ ಬೋಸ್ ತಿರುಗೇಟು

ಸಾವರ್ಕರ್, ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ: ಭಾಗವತ್ ಹೇಳಿಕೆಗೆ ಚಂದ್ರ ಕುಮಾರ್ ಬೋಸ್ ತಿರುಗೇಟು

- Advertisement -
- Advertisement -

ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜಯಂತಿಯಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು, “ಆರ್‌ಎಸ್‌ಎಸ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗುರಿಗಳು ಒಂದೇ ಆಗಿವೆ- ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡುವುದು” ಎಂದು ಹೇಳಿದ್ದರು. ಈ ಹೇಳಿಕೆಗೆ ಸ್ವತಃ ಸುಭಾಸ್ ಚಂದ್ರ ಬೋಸ್ ಅವರ ಮೊಮ್ಮಗ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಬಲಪಂಥೀಯ ಸಿದ್ದಾಂತಕ್ಕೂ ಸುಭಾಷ್ ಚಂದ್ರ ಬೋಸ್ ಅವರ ವಿಚಾರಗಳಿಗೆ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ” ಎಂದು ಮೋಹನ್ ಭಾಗವತ್ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ. “ಆರ್‌ಎಸ್‌ಎಸ್ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ. ಇಂದಿನವರೆಗೆ ಎಲ್ಲರನ್ನೂ ಒಳಗೊಳ್ಳುವ ಮತ್ತು ಜಾತ್ಯತೀತರಾಗಿದ್ದ ಏಕೈಕ ನಾಯಕ” ಎಂದು 2020 ರಲ್ಲಿ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲ್ಪಟ್ಟ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಏನು ಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿರಬೇಕು, ನೀವು ಸಾವರ್ಕರ್ ಮತ್ತು ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ, ಅವರು ಒಂದೇ ಪುಟದಲ್ಲಿ ಇರಲು ಸಾಧ್ಯವಿಲ್ಲ” ಎಂದು ಬೋಸ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ನೇತಾಜಿ ಸುಭಾಷ್‌ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್‌ ಬಚ್ಚಿಡುವ ಸತ್ಯಗಳಿವು

ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಮೋಹನ್ ಭಾಗವತ್, “ಆರ್‌ಎಸ್‌ಎಸ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗುರಿಗಳು ಒಂದೇ ಆಗಿವೆ – ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡುವುದು” ಎಂದು ಹೇಳಿದ್ದಾರೆ.

“ನಾವು ನೇತಾಜಿಯನ್ನು ಸ್ವಾತಂತ್ರ್ಯ ಹೋರಾಟಕ್ಕೆ ಅವರ ಅಮೂಲ್ಯ ಕೊಡುಗೆಗಳಿವೆ ಎನ್ನುವ ವಿಚಾರಕ್ಕೆ ಮಾತ್ರ ಸ್ಮರಿಸುವುದಲ್ಲ, ಅವರ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕಿದೆ. ಅವರು ಬಯಸಿದ ಭಾರತದ ಕನಸು ಇನ್ನೂ ಈಡೇರಿಲ್ಲ. ಅದನ್ನು ಸಾಧಿಸಲು ಕೆಲಸ ಮಾಡಬೇಕು” ಎಂದು ಭಾಗವತ್ ಹೇಳಿದರು.

“ಸುಭಾಸ್‌ಬಾಬು ಅವರ ಆದರ್ಶಗಳು ನಮ್ಮ ಮುಂದೆ ಇದೆ. ಅವರು ಹೊಂದಿದ್ದ ಗುರಿಗಳು ನಮ್ಮ ಗುರಿಗಳೂ ಒಂದೇ ಆಗಿವೆ. ಭಾರತವು ಪ್ರಪಂಚದ ಒಂದು ಸಣ್ಣ ಭಾಗವಾಗಿದೆ. ಆದರೆ ನಾವು ಜಗತ್ತಿಗೆ ಪರಿಹಾರವನ್ನು ನೀಡುವಂತಾಗಬೇಕು ಎಂದು ಹೇಳಿದ್ದರು. ನಾವೆಲ್ಲರೂ ಈಗ ಅದರ ಕಡೆಗೆ ಕೆಲಸ ಮಾಡಬೇಕು” ಎಂದರು.

ಆ ಗುರಿಯನ್ನು ಸಾಧಿಸುವುದು ಅತ್ಯಗತ್ಯ ಎಂದು ಒತ್ತಿಹೇಳುತ್ತಾ, “ಗುರಿ ಸಾಧಿಸಲು ವಿಭಿನ್ನ ಮಾರ್ಗಗಳಿರಬಹುದು, ಮತ್ತು ಇವುಗಳನ್ನು ‘isms’ (ಸಿದ್ಧಾಂತಗಳು) ಎಂದು ವಿವರಿಸಲಾಗಿದೆ, ಅವುಗಳು ಭಿನ್ನವಾಗಿರಬಹುದು ಆದರೆ ಮುಖ್ಯವಾದುದು ಗುರಿಯಾಗಿದೆ” ಎಂದು ಹೇಳುವ ಮೂಲಕ ಮೋಹನ್ ಭಾಗವತ್ ಅವರು ತಮ್ಮ ಸಿದ್ದಾಂತಕ್ಕೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಿದ್ದಾಂತಗಳು ಭಿನ್ನವಾಗಿವೆ ಎನ್ನುವ ವಿಚಾರವನ್ನು ಒಪ್ಪಿಕೊಂಡಂತೆ ತೋರುತ್ತದೆ.

ನೇತಾಜಿ ಸುಭಾ‍ಷ್ ಚಂದ್ರ ಬೋಸ್ ಅವರು ಸ್ಪಷ್ಟವಾಗಿ ಜಾತ್ಯಾತೀತ ಸಿದ್ದಾಂತವನ್ನು ಹೊಂದಿದ್ದರು. ಆದರೆ ಮೋಹನ್ ಭಾಗವತ್ ಅವರು ಹೇಳುವ ಬಲಪಂಥೀಯ ಸಿದ್ದಾಂತ ಅದಕ್ಕೆ ತದ್ವಿರುದ್ಧವಾಗಿದೆ. ಬೋಸ್ ಅವರೊಟ್ಟಿಗೆ ತಮ್ಮ ಸಿದ್ದಾಂತವನ್ನು ಸಾಮ್ಯತೆ ಮಾಡಿಕೊಳ್ಳಲು ಮೋಹನ್ ಭಾಗವತ್ ಹಾಗೂ ಸಂಘಪರಿವಾರದ ನಾಯಕರು ಮೇಲಿಂದ ಮೇಲೆ ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಇದಕ್ಕೆ ಈಗ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಸರಿಯಾಗಿ ಉತ್ತರ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...