Homeಕರ್ನಾಟಕರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

- Advertisement -
- Advertisement -

ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕ? ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರೈತರ ಆತ್ಮಹತ್ಯೆಗಳ ವರದಿಯನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ”ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್‌ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

”ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ‌” ಎಂದು ವಾಗ್ದಾಳಿ ನಡೆಸಿದ್ದಾರೆ.

”ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

”ʼಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು(!!) ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ.ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ. ಸರಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ” ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರತಿ ಲೀ. ನಂದಿನಿ ಹಾಲಿಗೆ 3 ರೂ ಹೆಚ್ಚಳ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...