Homeಕರ್ನಾಟಕರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

- Advertisement -
- Advertisement -

ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕ? ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರೈತರ ಆತ್ಮಹತ್ಯೆಗಳ ವರದಿಯನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ”ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್‌ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

”ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ‌” ಎಂದು ವಾಗ್ದಾಳಿ ನಡೆಸಿದ್ದಾರೆ.

”ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

”ʼಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು(!!) ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ.ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ. ಸರಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ” ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರತಿ ಲೀ. ನಂದಿನಿ ಹಾಲಿಗೆ 3 ರೂ ಹೆಚ್ಚಳ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...