Homeಮುಖಪುಟಮನೀಶ್ ಸಿಸೋಡಿಯಾರನ್ನು ಅನಿರ್ದಿಷ್ಟಾವಧಿ ಜೈಲಿನಲ್ಲಿಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಮನೀಶ್ ಸಿಸೋಡಿಯಾರನ್ನು ಅನಿರ್ದಿಷ್ಟಾವಧಿ ಜೈಲಿನಲ್ಲಿಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣಗಳಲ್ಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಅನಿರ್ದಿಷ್ಟ ಅವಧಿಯವರೆಗೆ ಜೈಲಿನಲ್ಲಿಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಸಿಬಿಐ ಮತ್ತು ಇಡಿಗೆ ತಿಳಿಸಿದೆ.

ಮನೀಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಸಿಬಿಐ ಮತ್ತು ಇಡಿ ತನಿಖಾ ಸಂಸ್ಥೆಗಳ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಸಿಸೋಡಿಯಾ ವಿರುದ್ಧದ ಆರೋಪಗಳ ವಾದ ಯಾವಾಗ ಪ್ರಾರಂಭವಾಗುತ್ತದೆ ಎಂದು ಕೇಳಿದೆ.

ನೀವು ಅವರನ್ನು ಅನಿರ್ದಿಷ್ಟ ಅವಧಿಗೆ ಜೈಲಿನಲ್ಲಿ ಇಡಲು ಸಾಧ್ಯವಿಲ್ಲ. ಒಂದು ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದ ನಂತರ, ಆರೋಪದ ಮೇಲಿನ ವಾದಗಳನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು ಪೀಠವು ರಾಜುಗೆ ಸೂಚಿಸಿದೆ.

ಸಿಸೋಡಿಯಾ ವಿರುದ್ಧದ ಪ್ರಕರಣಗಳು ಸಿಆರ್‌ಪಿಸಿಯ ಸೆಕ್ಷನ್ 207 (ದಾಖಲೆಗಳ ಪೂರೈಕೆ) ಹಂತದಲ್ಲಿವೆ ಮತ್ತು ಅದರ ನಂತರ ಆರೋಪದ ಮೇಲಿನ ವಾದಗಳು ಪ್ರಾರಂಭವಾಗುತ್ತವೆ ಎಂದು ರಾಜು ಪೀಠಕ್ಕೆ ತಿಳಿಸಿದ್ದಾರೆ.

ಆರೋಪದ ಮೇಲಿನ ವಾದಗಳು ಇನ್ನೂ ಏಕೆ ಪ್ರಾರಂಭವಾಗಿಲ್ಲ ಮತ್ತು ಅವು ಯಾವಾಗ ಪ್ರಾರಂಭವಾಗುತ್ತವೆ? ನಾಳೆ ನಮಗೆ ತಿಳಿಸಿ ಎಂದು ನ್ಯಾಯಮೂರ್ತಿ ಖನ್ನಾ ಅವರು ಹೇಳಿದ್ದಾರೆ.

ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಎರಡೂ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಪ್ರಕರಣಗಳಲ್ಲಿ ಬಂಧಿತರಾಗಿರುವ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ.

ಅಬಕಾರಿ ಇಲಾಖೆ ಸೇರಿದಂತೆ 18 ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ದರ್ಜೆಯ ವ್ಯಕ್ತಿಯೊಬ್ಬರು ಲಂಚ ಸ್ವೀಕರಿಸಿದರೆ ಅದಕ್ಕೆ ತಕ್ಕ ಸಾಕ್ಷಿ ಪ್ರಸ್ತುತಪಡಿಸಬೇಕಾಗುತ್ತದೆ. ಮದ್ಯ ನೀತಿ ಬದಲಾವಣೆಯಿಂದಾಗಿ ಗ್ರಾಹಕರು ತಮ್ಮ ಹಣದಿಂದ ವಂಚಿತರಾಗಿದ್ದಾರೆ. ಹಣ ವರ್ಗಾವಣೆಯ ಪಿತೂರಿ ಕುರಿತು ವಾಟ್ಸಾಪ್ ಚಾಟ್‌ಗಳು ಮತ್ತು ಇತರ ಸಂವಹನ ದಾಖಲೆಗಳಿವೆ. ಅಕ್ರಮ ಹಣ ವರ್ಗಾವಣೆಯ ಅಪರಾಧದ ಬಗ್ಗೆ ಸಿಸೋಡಿಯಾ ವಿರುದ್ಧ ಸಾಕಷ್ಟು ದಾಖಲೆಗಳಿವೆ. ಅವರು ಮೊಬೈಲ್ ಫೋನ್‌ಗಳಲ್ಲಿನ ಸಾಕ್ಷ್ಯವನ್ನು ಕೂಡ ನಾಶಪಡಿಸಿದ್ದಾರೆ.  ಸಿಸೋಡಿಯಾಗೆ ಜಾಮೀನು ನೀಡಬಾರದು ಎಂದು ರಾಜು ಕೋರ್ಟ್‌ಗೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿಸುವ ಸಾಧ್ಯತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...