Homeಮುಖಪುಟಮನೀಶ್ ಸಿಸೋಡಿಯಾರನ್ನು ಅನಿರ್ದಿಷ್ಟಾವಧಿ ಜೈಲಿನಲ್ಲಿಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಮನೀಶ್ ಸಿಸೋಡಿಯಾರನ್ನು ಅನಿರ್ದಿಷ್ಟಾವಧಿ ಜೈಲಿನಲ್ಲಿಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣಗಳಲ್ಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಅನಿರ್ದಿಷ್ಟ ಅವಧಿಯವರೆಗೆ ಜೈಲಿನಲ್ಲಿಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಸಿಬಿಐ ಮತ್ತು ಇಡಿಗೆ ತಿಳಿಸಿದೆ.

ಮನೀಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಸಿಬಿಐ ಮತ್ತು ಇಡಿ ತನಿಖಾ ಸಂಸ್ಥೆಗಳ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಸಿಸೋಡಿಯಾ ವಿರುದ್ಧದ ಆರೋಪಗಳ ವಾದ ಯಾವಾಗ ಪ್ರಾರಂಭವಾಗುತ್ತದೆ ಎಂದು ಕೇಳಿದೆ.

ನೀವು ಅವರನ್ನು ಅನಿರ್ದಿಷ್ಟ ಅವಧಿಗೆ ಜೈಲಿನಲ್ಲಿ ಇಡಲು ಸಾಧ್ಯವಿಲ್ಲ. ಒಂದು ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದ ನಂತರ, ಆರೋಪದ ಮೇಲಿನ ವಾದಗಳನ್ನು ತಕ್ಷಣವೇ ಪ್ರಾರಂಭಿಸಬೇಕು ಎಂದು ಪೀಠವು ರಾಜುಗೆ ಸೂಚಿಸಿದೆ.

ಸಿಸೋಡಿಯಾ ವಿರುದ್ಧದ ಪ್ರಕರಣಗಳು ಸಿಆರ್‌ಪಿಸಿಯ ಸೆಕ್ಷನ್ 207 (ದಾಖಲೆಗಳ ಪೂರೈಕೆ) ಹಂತದಲ್ಲಿವೆ ಮತ್ತು ಅದರ ನಂತರ ಆರೋಪದ ಮೇಲಿನ ವಾದಗಳು ಪ್ರಾರಂಭವಾಗುತ್ತವೆ ಎಂದು ರಾಜು ಪೀಠಕ್ಕೆ ತಿಳಿಸಿದ್ದಾರೆ.

ಆರೋಪದ ಮೇಲಿನ ವಾದಗಳು ಇನ್ನೂ ಏಕೆ ಪ್ರಾರಂಭವಾಗಿಲ್ಲ ಮತ್ತು ಅವು ಯಾವಾಗ ಪ್ರಾರಂಭವಾಗುತ್ತವೆ? ನಾಳೆ ನಮಗೆ ತಿಳಿಸಿ ಎಂದು ನ್ಯಾಯಮೂರ್ತಿ ಖನ್ನಾ ಅವರು ಹೇಳಿದ್ದಾರೆ.

ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಎರಡೂ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಪ್ರಕರಣಗಳಲ್ಲಿ ಬಂಧಿತರಾಗಿರುವ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ.

ಅಬಕಾರಿ ಇಲಾಖೆ ಸೇರಿದಂತೆ 18 ಖಾತೆಗಳನ್ನು ಹೊಂದಿರುವ ಉಪಮುಖ್ಯಮಂತ್ರಿ ದರ್ಜೆಯ ವ್ಯಕ್ತಿಯೊಬ್ಬರು ಲಂಚ ಸ್ವೀಕರಿಸಿದರೆ ಅದಕ್ಕೆ ತಕ್ಕ ಸಾಕ್ಷಿ ಪ್ರಸ್ತುತಪಡಿಸಬೇಕಾಗುತ್ತದೆ. ಮದ್ಯ ನೀತಿ ಬದಲಾವಣೆಯಿಂದಾಗಿ ಗ್ರಾಹಕರು ತಮ್ಮ ಹಣದಿಂದ ವಂಚಿತರಾಗಿದ್ದಾರೆ. ಹಣ ವರ್ಗಾವಣೆಯ ಪಿತೂರಿ ಕುರಿತು ವಾಟ್ಸಾಪ್ ಚಾಟ್‌ಗಳು ಮತ್ತು ಇತರ ಸಂವಹನ ದಾಖಲೆಗಳಿವೆ. ಅಕ್ರಮ ಹಣ ವರ್ಗಾವಣೆಯ ಅಪರಾಧದ ಬಗ್ಗೆ ಸಿಸೋಡಿಯಾ ವಿರುದ್ಧ ಸಾಕಷ್ಟು ದಾಖಲೆಗಳಿವೆ. ಅವರು ಮೊಬೈಲ್ ಫೋನ್‌ಗಳಲ್ಲಿನ ಸಾಕ್ಷ್ಯವನ್ನು ಕೂಡ ನಾಶಪಡಿಸಿದ್ದಾರೆ.  ಸಿಸೋಡಿಯಾಗೆ ಜಾಮೀನು ನೀಡಬಾರದು ಎಂದು ರಾಜು ಕೋರ್ಟ್‌ಗೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿಸುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...