Homeಮುಖಪುಟ'ದೀದಿ ಇಲ್ಲದೆ ಬದುಕಲಾರೆ': ಮತ್ತೆ ಟಿಎಂಸಿ ಸೇರಲು ಬಯಸಿದ ಬಿಜೆಪಿಯ ಸೋನಾಲಿ ಗುಹಾ

‘ದೀದಿ ಇಲ್ಲದೆ ಬದುಕಲಾರೆ’: ಮತ್ತೆ ಟಿಎಂಸಿ ಸೇರಲು ಬಯಸಿದ ಬಿಜೆಪಿಯ ಸೋನಾಲಿ ಗುಹಾ

ಬಿಜೆಪಿಯವರು ನನ್ನನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ನಾನು ಮಮತಾ ಬ್ಯಾನರ್ಜಿಯ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದರು. ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ...

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದ ಮಾಜಿ ಟಿಎಂಸಿ ಶಾಸಕಿ ಸೋನಾಲಿ ಗುಹಾ, ಶನಿವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪತ್ರ ಬರೆದು, ಪಕ್ಷ ತೊರೆದಿದ್ದಕ್ಕಾಗಿ ಕ್ಷಮೆಯಾಚಿಸಿದ್ದಲ್ಲದೆ ಮತ್ತೆ ಟಿಎಂಸಿಗೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಆ ಸಂದರ್ಭದಲ್ಲಿ ನಾನು ಭಾವಾವೇಷಕ್ಕೆ ಒಳಗಾಗಿದ್ದ ಕಾರಣ ಪಕ್ಷ ತ್ಯಜಿಸಿದ್ದೆ. ಆದರೆ ನನಗೆ ಈಗ ಅದು ತಪ್ಪು ಎಂದು ಅರಿವಾಗಿದೆ ಎಂದು ಅವರು ಪತ್ರಲ್ಲಿ ಉಲ್ಲೇಖಿಸಿದ್ದಾರೆ. ಆ ಪತ್ರವನ್ನು ಸೋನಾಲಿ ಗುಹಾ ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

“ನಾನು ಇದನ್ನು ಭಾರವಾದ ಹೃದಯದಿಂದ ಬರೆಯುತ್ತಿದ್ದೇನೆ, ಭಾವಾವೇಷಕ್ಕೆ ಒಳಗಾಗಿದ್ದ ಕಾರಣ ನಾನು ಬೇರೆ ಪಕ್ಷಕ್ಕೆ ಸೇರುವ ತಪ್ಪು ನಿರ್ಧಾರವನ್ನು ತೆಗೆದುಕೊಂಡಿದ್ದೆ. ಆದರೆ ಅಲ್ಲಿ ನನಗೆ ಒಗ್ಗಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ.

“ಮೀನೊಂದು ನೀರಿನಿಂದ ಹೊರಗುಳಿಯಲು ಸಾಧ್ಯವಿಲ್ಲ, ದೀದಿ, ನೀವು ಇಲ್ಲದೆ ಬದುಕಲು ನನಗೆ ಸಾಧ್ಯವಾಗುವುದಿಲ್ಲ. ನಾನು ನಿಮ್ಮಲ್ಲಿ ಕ್ಷಮೆ ಕೋರುತ್ತೇನೆ ಮತ್ತು ನೀವು ನನ್ನನ್ನು ಕ್ಷಮಿಸದಿದ್ದರೆ, ನಾನು ಬದುಕಲು ಸಾಧ್ಯವಾಗುವುದಿಲ್ಲ. ದಯವಿಟ್ಟು ನಾನು ಪಕ್ಷಕ್ಕೆ ಮತ್ತೆ ಸೇರಲು ಅನುಮತಿಸಿ. ನನ್ನ ಜೀವನದ ಉಳಿದ ಭಾಗವನ್ನು ನಿಮ್ಮ ವಾತ್ಸಲ್ಯದಲ್ಲಿ ಕಳೆಯಲು ಅವಕಾಶ ನೀಡಿ” ಎಂದು ಅವರು ಬಂಗಾಳಿ ಭಾಷೆಯಲ್ಲಿ ಬರೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾಲ್ಕು ಬಾರಿ ಶಾಸಕರಾಗಿದ್ದ ಸೋನಾಲಿ ಗುಹಾ ಅವರು ಮಮತಾ ಬ್ಯಾನರ್ಜಿಯವರ ಆಪ್ತರಾಗಿದ್ದರು. ಆದರೆ ಈ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಈ ಬಾರಿ ಅವರನ್ನು ಟಿಎಂಸಿಯ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಡಲಾಯಿತು, ಅದರ ನಂತರ ಅವರು ಟಿವಿ ಚಾನೆಲ್‌ಗಳಲ್ಲಿ ಭಾವನಾತ್ಮಕ ಮಾತುಗಳನ್ನಾಡಿದ ನಂತರ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದ್ದರು. ಆದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಬದಲಿಗೆ ಬಿಜೆಪಿಯ ಸಂಘಟನೆಯನ್ನು ಬಲಪಡಿಸಲು ಕೆಲಸ ಮಾಡುವುದಾಗಿ ಹೇಳಿದ್ದರು.

“ಬಿಜೆಪಿಗೆ ಸೇರ್ಪಡೆಗೊಳ್ಳುವ ನನ್ನ ನಿರ್ಧಾರ ತಪ್ಪಾಗಿದ್ದು, ಅದರ ಫಲವನ್ನು ನಾನಿಂದು ಅನುಭವಿಸುತ್ತಿದ್ದೇನೆ. ಬಿಜೆಪಿ ತ್ಯಜಿಸುತ್ತಿದ್ದೇನೆ ಎಂದು ಹೇಳಲು ನನಗೆ ಯಾವುದೇ ಅಂಜಿಕೆಯಿಲ್ಲ. ಏಕೆಂದರೆ ಅಲ್ಲಿ ನಾನು ಅನಗತ್ಯ ಎಂಬ ಭಾವನೆ ಇದೆ. ಅವರು ನನ್ನನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ಮತ್ತು ನಾನು ಮಮತಾ ಬ್ಯಾನರ್ಜಿಯ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದರು. ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ.

ಟಿಎಂಸಿಗೆ ಮತ್ತೆ ಸೇರ್ಪಡೆಗೊಳ್ಳಲು ಮುಖ್ಯಮಂತ್ರಿಯನ್ನು ಭೇಟಿಯಾಗಲು ಸಿದ್ಧರಿರುವುದಾಗಿ ಅವರು ಹೇಳಿದ್ದಾರೆ. ಮುಂದಿನ ವಾರ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಮಾತನಾಡುತ್ತೇನೆ ಎಂದು ಸೋನಾಲಿ ಗುಹಾ ಹೇಳಿದ್ದಾರೆ.


ಇದನ್ನೂ ಓದಿ: ತಮ್ಮ ಮೊದಲಿನ ಕ್ಷೇತ್ರ ಭವಾನಿಪೋರ್‌ನಿಂದ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...