Homeಮುಖಪುಟನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ. - ಬೊಮ್ಮಾಯಿ

- Advertisement -
- Advertisement -

ಕರ್ನಾಟಕದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿದ್ದು ಅವುಗಳನ್ನು ಸರ್ಕಾರ ನಿಗ್ರಹಿಸಬೇಕು ಎಂಬ ಹಕ್ಕೊತ್ತಾಯ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿರುವ ಹೊತ್ತಿನಲ್ಲಿಯೇ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೈತಿಕ ಪೊಲೀಸ್‌ ಗಿರಿಯನ್ನು ಸಮರ್ಥಿಸಿವಂತೆ ಮಾತಾನಾಡಿದ್ದಾರೆ.

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗಾಗಿ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ನೈತಿಕತೆ ಇಲ್ಲದೇ ನಾವು ಬದುಕಲು ಸಾಧ್ಯವೇ?” ಎಂದಿದ್ದಾರೆ.

ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ. ಇಂಥ ಸಂದರ್ಭದಲ್ಲಿ ಒಂದು ಸರ್ಕಾರವಾಗಿ ನಮ್ಮ ಕರ್ತವ್ಯ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕವಾಗಿಯೂ ಸಾಮರಸ್ಯ ಕಾಪಾಡಲು ನಾವೆಲ್ಲರೂ ಕ್ರಮ ಕೈಗೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ಕೊಡಬೇಕು” ಎಂದಿದ್ದಾರೆ.

ಮುಂದುವರಿದು ಕೆಲವು ಯುವಕರು ಏನಾದರೂ ಕೈಗೆತ್ತುಕೊಂಡು, ಈಗ ಅವರ ಒಂದು, ಈ ಸಮಾಜದ ಭಾವೆನೆಗಳಿಗೆ ಧಕ್ಕೆಯಾಗದಂತೆ ಅವರು ಕೂಡ ನೋಡಿಕೊಳ್ಳಬೇಕಾಗಿದೆ. ಹೀಗಾಗಿ ಇದೊಂದು ಸಮಾಜಿಕವಾಗಿರುವ ಪ್ರಶ್ನೆ ಇದೆ. ಸಮಾಜದಲ್ಲಿ ಮೊರಾಲಿಟಿ ಇರಬೇಕು. ನೈತಿಕತೆ ಇಲ್ಲದೇ ನಾವು ಬದಕಲು ಸಾಧ್ಯವೇ? ಎಂದಿದ್ದಾರೆ.

ನಿಮ್ಮ ಶಾಸಕರೆ ಎಂದು ಪತ್ರಕರ್ತರ ಪ್ರಶ್ನೆಯನ್ನು ತುಂಡರಿಸಿದ ಅವರು, ನೈತಿಕತೆ ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಇವತ್ತು ನಾವು ನಮ್ಮಲ್ಲ ಸಂಬಂಧಗಳು, ಶಾಂತಿ ಸುವ್ಯವಸ್ಥೇ ಇರುವುದು ನಮ್ಮ ಮೇಲೆ ನಾವು ನಿಯಂತ್ರಣವಿರುವುದರಿಂದ, ನೈತಿಕತೆಯಿಂದ. ನೈತಿಕತೆ ಇಲ್ಲದಾಗ ಎಲ್ಲಾ ಥರದ ಘಟನೆಗಳು ನಡೆಯುತ್ತವೆ ಎಂದಿದ್ದಾರೆ.

ಸಿಎಂರವರ ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಹಲವಾರು ಜನ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸದ್ದಾರೆ.

ಮಾನ್ಯ ಬಸವರಾಜ ಬೊಮ್ಮಾಯಿಯವರೆ, ರಾಜ್ಯದ ಮುಖ್ಯಮಂತ್ರಿಯಾಗಿ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿರುವುದು ಎಷ್ಟು ಸರಿ? ಜನರ ಭಾವನೆಗಳಿಗೆ ಧಕ್ಕೆಯಾದಾಗ ಅವರಿಗೆ ಕಾನೂನನ್ನು ಕೈಗೆತ್ತಿಕೊಳ್ಳುವ ಅವಕಾಶ ತಮ್ಮ ಆಡಳಿತದಲ್ಲಿಇದೆಯೇ? ಹಾಗಾದರೆ ಗೃಹ ಇಲಾಖೆ ಇರುವುದಾದರೂ ಯಾಕಾಗಿ? ಎಂದು ಸಾಮಾಜಿಕ ಕಾರ್ಯಕರ್ತ ಫೈಜಲ್ ಪಿರಾಜೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮುಸಲ್ಮಾನ ಅನೈತಿಕ ಗೂಂಡಾಗಳು ಭಿನ್ನ ಧರ್ಮದ ಗಂಡು ಹೆಣ್ಣಿನ ಮೇಲೆ ಹಲ್ಲೆ ನಡೆಸಿದಾಗ ಸಿಡಿದೆದ್ದು ಕಾನೂನಿನ ಪಾಠ ಮಾಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿನ ಸಂಘಪರಿವಾರದ ಅನೈತಿಕ ಗೂಂಡಾಗಿರಿಯ ವಿಷಯದಲ್ಲಿ ಉಲ್ಟಾ ಹೊಡೆದಿದ್ದಾರೆ. ಭಾವನೆಗಳಿಗೆ ಧಕ್ಕೆ, ಕ್ರಿಯೆಗೆ ಪ್ರತಿಕ್ರಿಯೆ ಎಂಬುದು ಎಲ್ಲಾ ಮತೀಯವಾದಿಗಳ ರೆಡಿಮೇಡ್ ಡೈಲಾಗ್. ಸಂವಿಧಾನದ ಮೇಲೆ ಪ್ರತಿಜ್ಞೆ ಮಾಡಿ ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿಯೊಬ್ಬ ಅದೇ ಡೈಲಾಗ್ ಹೊಡೆಯುತ್ತಾರೆ, ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುತ್ತಾರೆ ಅಂತಾದರೆ ಗತಿಯೇನು? ಎಂದು ಡಿವೈಎಫ್‌ಐ ರಾಜ್ಯಧ್ಯಕ್ಷ ಮುನೀರ್ ಕಾಟಿಪಳ್ಳ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಯ ಈ ಮಾತಿನಿಂದ ಈಗಾಗಲೇ ಹೆಂಡ ಕುಡಿದ ಕಪಿಗಳಂತೆ ಆಡುತ್ತಿರುವ ಮತೀಯವಾದಿ ಸಂಘಟನೆಗಳ ಕಾರ್ಯಕರ್ತರು ಮತ್ತಷ್ಟು ಪ್ರಚೋದಿತರಾಗಿ ಬೀದಿಗಿಳಿಯುವುದು ಖಂಡಿತ. ಕ್ರಿಯೆಗೆ ಪ್ರತಿಕ್ರಿಯೆ ಎಂದು ಮತ್ತೊಂದು ಕೋಮಿನ ಅನೈತಿಕ ಪೊಲೀಸರೂ ಸ್ಪರ್ಧೆಗೆ ಬಿದ್ದರೆ ಪರಿಸ್ಥಿತಿ ಎಲ್ಲಿಗೆ ತಲುಪುತ್ತದೆ ? ಮುಖ್ಯಮಂತ್ರಿಯೊಬ್ಬ ಇಷ್ಟು ಬೇಜವಾಬ್ದಾರಿತನ ಮೆರೆಯುವುದು ನಾಚಿಕೆಗೇಡು. ಪ್ರಜಾಪ್ರಭುತ್ವ ದೇಶದ ದುರಂತ. ತನ್ನ ಈ ನಾಚಿಕೆಗೇಡಿನ ಮಾತಿಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಜನತೆಯ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಸಂಯೋಜಕಿ ಲಾವಣ್ಯ ಬಲ್ಲಾಳ್, “ನಿಮ್ಮ ಮಾತಿನ ಅರ್ಥವೇನು ಬೊಮ್ಮಾಯಿಯವರೆ, ರಾಜ್ಯದ ಮುಖ್ಯಮಂತ್ರಿಗಳೆ ಮಾರಲ್ ಪೊಲೀಸಿಂಗ್ ಅನ್ನು ಬೆಂಬಲಿಸಿದರೆ ಇನ್ನು ಗುಲಾಮರಿಂದ ನಾವು ಏನನ್ನು ನಿರೀಕ್ಷಿಸಲು ಸಾಧ್ಯ? ದಯವಿಟ್ಟು ಕರ್ನಾಟಕದ ನಾಗರಿಕರು ತಮ್ಮ ಸುರಕ್ಷತೆಯನ್ನು ತಾವೇ ಕಾಪಾಡಿಕೊಳ್ಳಬೇಕು ಹೊರತು ಸರ್ಕಾರದಿಂದ ಏನನ್ನು ನಿರೀಕ್ಷಿಸಬೇಡಿ ಎಂದಿದ್ದಾರೆ.


ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...