Homeಮುಖಪುಟನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ನೈತಿಕತೆ ಇಲ್ಲದೇ ಬದುಕಲಾಗದು: ಮಾರಲ್ ಪೊಲೀಸಿಂಗ್ ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ

ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ. - ಬೊಮ್ಮಾಯಿ

- Advertisement -
- Advertisement -

ಕರ್ನಾಟಕದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿದ್ದು ಅವುಗಳನ್ನು ಸರ್ಕಾರ ನಿಗ್ರಹಿಸಬೇಕು ಎಂಬ ಹಕ್ಕೊತ್ತಾಯ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿರುವ ಹೊತ್ತಿನಲ್ಲಿಯೇ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೈತಿಕ ಪೊಲೀಸ್‌ ಗಿರಿಯನ್ನು ಸಮರ್ಥಿಸಿವಂತೆ ಮಾತಾನಾಡಿದ್ದಾರೆ.

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗಾಗಿ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ನೈತಿಕತೆ ಇಲ್ಲದೇ ನಾವು ಬದುಕಲು ಸಾಧ್ಯವೇ?” ಎಂದಿದ್ದಾರೆ.

ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಆ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕಾಗಿದೆ. ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆ ನಡೆಯುತ್ತವೆ. ಇಂಥ ಸಂದರ್ಭದಲ್ಲಿ ಒಂದು ಸರ್ಕಾರವಾಗಿ ನಮ್ಮ ಕರ್ತವ್ಯ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕವಾಗಿಯೂ ಸಾಮರಸ್ಯ ಕಾಪಾಡಲು ನಾವೆಲ್ಲರೂ ಕ್ರಮ ಕೈಗೊಳ್ಳಬೇಕು. ಅದಕ್ಕೆ ಎಲ್ಲರೂ ಸಹಕಾರ ಕೊಡಬೇಕು” ಎಂದಿದ್ದಾರೆ.

ಮುಂದುವರಿದು ಕೆಲವು ಯುವಕರು ಏನಾದರೂ ಕೈಗೆತ್ತುಕೊಂಡು, ಈಗ ಅವರ ಒಂದು, ಈ ಸಮಾಜದ ಭಾವೆನೆಗಳಿಗೆ ಧಕ್ಕೆಯಾಗದಂತೆ ಅವರು ಕೂಡ ನೋಡಿಕೊಳ್ಳಬೇಕಾಗಿದೆ. ಹೀಗಾಗಿ ಇದೊಂದು ಸಮಾಜಿಕವಾಗಿರುವ ಪ್ರಶ್ನೆ ಇದೆ. ಸಮಾಜದಲ್ಲಿ ಮೊರಾಲಿಟಿ ಇರಬೇಕು. ನೈತಿಕತೆ ಇಲ್ಲದೇ ನಾವು ಬದಕಲು ಸಾಧ್ಯವೇ? ಎಂದಿದ್ದಾರೆ.

ನಿಮ್ಮ ಶಾಸಕರೆ ಎಂದು ಪತ್ರಕರ್ತರ ಪ್ರಶ್ನೆಯನ್ನು ತುಂಡರಿಸಿದ ಅವರು, ನೈತಿಕತೆ ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಇವತ್ತು ನಾವು ನಮ್ಮಲ್ಲ ಸಂಬಂಧಗಳು, ಶಾಂತಿ ಸುವ್ಯವಸ್ಥೇ ಇರುವುದು ನಮ್ಮ ಮೇಲೆ ನಾವು ನಿಯಂತ್ರಣವಿರುವುದರಿಂದ, ನೈತಿಕತೆಯಿಂದ. ನೈತಿಕತೆ ಇಲ್ಲದಾಗ ಎಲ್ಲಾ ಥರದ ಘಟನೆಗಳು ನಡೆಯುತ್ತವೆ ಎಂದಿದ್ದಾರೆ.

ಸಿಎಂರವರ ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಹಲವಾರು ಜನ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸದ್ದಾರೆ.

ಮಾನ್ಯ ಬಸವರಾಜ ಬೊಮ್ಮಾಯಿಯವರೆ, ರಾಜ್ಯದ ಮುಖ್ಯಮಂತ್ರಿಯಾಗಿ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿರುವುದು ಎಷ್ಟು ಸರಿ? ಜನರ ಭಾವನೆಗಳಿಗೆ ಧಕ್ಕೆಯಾದಾಗ ಅವರಿಗೆ ಕಾನೂನನ್ನು ಕೈಗೆತ್ತಿಕೊಳ್ಳುವ ಅವಕಾಶ ತಮ್ಮ ಆಡಳಿತದಲ್ಲಿಇದೆಯೇ? ಹಾಗಾದರೆ ಗೃಹ ಇಲಾಖೆ ಇರುವುದಾದರೂ ಯಾಕಾಗಿ? ಎಂದು ಸಾಮಾಜಿಕ ಕಾರ್ಯಕರ್ತ ಫೈಜಲ್ ಪಿರಾಜೆ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮುಸಲ್ಮಾನ ಅನೈತಿಕ ಗೂಂಡಾಗಳು ಭಿನ್ನ ಧರ್ಮದ ಗಂಡು ಹೆಣ್ಣಿನ ಮೇಲೆ ಹಲ್ಲೆ ನಡೆಸಿದಾಗ ಸಿಡಿದೆದ್ದು ಕಾನೂನಿನ ಪಾಠ ಮಾಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿನ ಸಂಘಪರಿವಾರದ ಅನೈತಿಕ ಗೂಂಡಾಗಿರಿಯ ವಿಷಯದಲ್ಲಿ ಉಲ್ಟಾ ಹೊಡೆದಿದ್ದಾರೆ. ಭಾವನೆಗಳಿಗೆ ಧಕ್ಕೆ, ಕ್ರಿಯೆಗೆ ಪ್ರತಿಕ್ರಿಯೆ ಎಂಬುದು ಎಲ್ಲಾ ಮತೀಯವಾದಿಗಳ ರೆಡಿಮೇಡ್ ಡೈಲಾಗ್. ಸಂವಿಧಾನದ ಮೇಲೆ ಪ್ರತಿಜ್ಞೆ ಮಾಡಿ ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿಯೊಬ್ಬ ಅದೇ ಡೈಲಾಗ್ ಹೊಡೆಯುತ್ತಾರೆ, ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುತ್ತಾರೆ ಅಂತಾದರೆ ಗತಿಯೇನು? ಎಂದು ಡಿವೈಎಫ್‌ಐ ರಾಜ್ಯಧ್ಯಕ್ಷ ಮುನೀರ್ ಕಾಟಿಪಳ್ಳ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಯ ಈ ಮಾತಿನಿಂದ ಈಗಾಗಲೇ ಹೆಂಡ ಕುಡಿದ ಕಪಿಗಳಂತೆ ಆಡುತ್ತಿರುವ ಮತೀಯವಾದಿ ಸಂಘಟನೆಗಳ ಕಾರ್ಯಕರ್ತರು ಮತ್ತಷ್ಟು ಪ್ರಚೋದಿತರಾಗಿ ಬೀದಿಗಿಳಿಯುವುದು ಖಂಡಿತ. ಕ್ರಿಯೆಗೆ ಪ್ರತಿಕ್ರಿಯೆ ಎಂದು ಮತ್ತೊಂದು ಕೋಮಿನ ಅನೈತಿಕ ಪೊಲೀಸರೂ ಸ್ಪರ್ಧೆಗೆ ಬಿದ್ದರೆ ಪರಿಸ್ಥಿತಿ ಎಲ್ಲಿಗೆ ತಲುಪುತ್ತದೆ ? ಮುಖ್ಯಮಂತ್ರಿಯೊಬ್ಬ ಇಷ್ಟು ಬೇಜವಾಬ್ದಾರಿತನ ಮೆರೆಯುವುದು ನಾಚಿಕೆಗೇಡು. ಪ್ರಜಾಪ್ರಭುತ್ವ ದೇಶದ ದುರಂತ. ತನ್ನ ಈ ನಾಚಿಕೆಗೇಡಿನ ಮಾತಿಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಜನತೆಯ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಸಂಯೋಜಕಿ ಲಾವಣ್ಯ ಬಲ್ಲಾಳ್, “ನಿಮ್ಮ ಮಾತಿನ ಅರ್ಥವೇನು ಬೊಮ್ಮಾಯಿಯವರೆ, ರಾಜ್ಯದ ಮುಖ್ಯಮಂತ್ರಿಗಳೆ ಮಾರಲ್ ಪೊಲೀಸಿಂಗ್ ಅನ್ನು ಬೆಂಬಲಿಸಿದರೆ ಇನ್ನು ಗುಲಾಮರಿಂದ ನಾವು ಏನನ್ನು ನಿರೀಕ್ಷಿಸಲು ಸಾಧ್ಯ? ದಯವಿಟ್ಟು ಕರ್ನಾಟಕದ ನಾಗರಿಕರು ತಮ್ಮ ಸುರಕ್ಷತೆಯನ್ನು ತಾವೇ ಕಾಪಾಡಿಕೊಳ್ಳಬೇಕು ಹೊರತು ಸರ್ಕಾರದಿಂದ ಏನನ್ನು ನಿರೀಕ್ಷಿಸಬೇಡಿ ಎಂದಿದ್ದಾರೆ.


ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...