Homeಮುಖಪುಟಉನ್ನತ ನ್ಯಾಯಾಲಯದ ತೀರ್ಪಿನ ವಿರುದ್ಧ ಆದೇಶ ನೀಡುವಂತಿಲ್ಲ: ಗುಜರಾತ್ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

ಉನ್ನತ ನ್ಯಾಯಾಲಯದ ತೀರ್ಪಿನ ವಿರುದ್ಧ ಆದೇಶ ನೀಡುವಂತಿಲ್ಲ: ಗುಜರಾತ್ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

- Advertisement -
- Advertisement -

ಯಾವುದೇ ನ್ಯಾಯಾಲಯವು ಸುಪ್ರೀಂ ಕೋರ್ಟ್‌ನ ತೀರ್ಪಿನ ವಿರುದ್ಧ ಆದೇಶ ಹೊರಡಿಸುವುದು ಸಾಂವಿಧಾನಿಕ ತತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್, ಪ್ರಕರಣವೊಂದರಲ್ಲಿ ಗುಜರಾತ್‌ ಹೈಕೋರ್ಟ್‌ನ್ನು ತರಾಟೆಗೆ ತೆಗೆದುಕೊಂಡಿದೆ.

ಅತ್ಯಾಚಾರ ಸಂತ್ರಸ್ತೆ ತನ್ನ ಗರ್ಭಾವಸ್ಥೆಯನ್ನು ಕೊನೆಗೊಳಿಸಲು ಅನುಮತಿ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರ್ಜಿ ವಿಚಾರಣೆ ನಡೆಸಿದ  ಹೈಕೋರ್ಟ್ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ ನಿರಾಕರಿಸಿ ಆದೇಶವನ್ನು ನೀಡಿತ್ತು. ಇದನ್ನು ಟೀಕಿಸಿದ ಸುಪ್ರೀಂಕೋರ್ಟ್ ಅತ್ಯಾಚಾರ ಸಂತ್ರಸ್ತೆಗೆ ಗರ್ಭವನ್ನು ಕೊನೆಗೊಳಿಸಲು ಅನುಮತಿಯನ್ನು ನೀಡಿದೆ.

ಗುಜರಾತ್ ಹೈಕೋರ್ಟ್ ನಲ್ಲಿ ಏನಾಗುತ್ತಿದೆ? ಭಾರತದ ಯಾವುದೇ ನ್ಯಾಯಾಲಯವು ಉನ್ನತ ನ್ಯಾಯಾಲಯದ ಆದೇಶದ ವಿರುದ್ಧ ಆದೇಶವನ್ನು ನೀಡುವಂತಿಲ್ಲ. ಇದು ಸಾಂವಿಧಾನದ ತತ್ವಕ್ಕೆ ವಿರುದ್ಧವಾಗಿದೆ ಎಂದು ನ್ಯಾಯಮೂರ್ತಿ ಬಿ ವಿ ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು  ಹೇಳಿದೆ.

ಪ್ರಕರಣದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಗುಜರಾತ್ ಸರ್ಕಾರದ ಪರ  ಹಾಜರಾಗಿದ್ದರು.

ಅತ್ಯಾಚಾರ ಸಂತ್ರಸ್ತೆಯ ಅರ್ಜಿಯನ್ನು ವಿಚಾರಣೆ  ನಡೆಸುವಲ್ಲಿ ಹೈಕೋರ್ಟ್‌ನ ವಿಳಂಬವನ್ನು ಸುಪ್ರೀಂಕೋರ್ಟ್ ಸೋಮವಾರ ಗಮನಿಸಿದೆ ಮತ್ತು “ಅಮೂಲ್ಯವಾದ ಸಮಯ” ಕಳೆದುಹೋಗಿದೆ ಎಂದು ಹೇಳಿದೆ. ನಂತರ ನ್ಯಾಯಮೂರ್ತಿ ನಾಗರತ್ನ ಮತ್ತು ನ್ಯಾ.ಭುಯಾನ್ ಅವರಿದ್ದ ಪೀಠ ಇಂದು ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ಹೇಳಿದೆ.

ಈ ಕುರಿತು ಹೈಕೋರ್ಟ್‌ನ  ಧೋರಣೆ ಯನ್ನು ಟೀಕಿಸಿದ ಸುಪ್ರೀಂ ಕೋರ್ಟ್, ಮಹಿಳೆಯ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಗುಜರಾತ್ ಸರ್ಕಾರ ಮತ್ತು ಇತರರಿಗೆ ಶನಿವಾರ ನೋಟಿಸ್ ಜಾರಿ ಮಾಡಿದೆ.

ಸಂತ್ರಸ್ತೆ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಈ ಕುರಿತು ಮಾಹಿತಿ ನೀಡಿದ್ದು, ಅವರು ಆಗಸ್ಟ್ 7 ರಂದು ಹೈಕೋರ್ಟ್ ಗೆ  ಸಂಪರ್ಕಿಸಿದರು ಮತ್ತು ಮರುದಿನ ಈ ವಿಷಯವನ್ನು ಆಲಿಸಲಾಯಿತು. ಅರ್ಜಿದಾರರ ಗರ್ಭಾವಸ್ಥೆಯ ಸ್ಥಿತಿ ಮತ್ತು ಅವರ ಆರೋಗ್ಯದ ಸ್ಥಿತಿಯನ್ನು ಪರಿಶೀಲಿಸಲು ವೈದ್ಯಕೀಯ  ತಂಡವನ್ನು ರಚಿಸುವಂತೆ ಆಗಸ್ಟ್ 8 ರಂದು ಹೈಕೋರ್ಟ್ ನಿರ್ದೇಶಿಸಿದೆ.

ಮೆಡಿಕಲ್ ಕಾಲೇಜು ಅತ್ಯಾಚಾರ ಸಂತ್ರಸ್ತೆಯನ್ನು ಪರೀಕ್ಷಿಸಿ ತನ್ನ ವರದಿಯನ್ನು ಆಗಸ್ಟ್ 10 ರಂದು ಸಲ್ಲಿಸಿದೆ. ವರದಿಯಲ್ಲಿ  ಗರ್ಭಾವಸ್ಥೆಯನ್ನು ಅಂತ್ಯಗೊಳಿಸಬಹುದು ಎಂದು ತಿಳಿಸಲಾಗಿತ್ತು ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.

ಈ ಕುರಿತು ಆಗಸ್ಟ್ 11 ರಂದು ಹೈಕೋರ್ಟ್ ವರದಿಯನ್ನು ದಾಖಲಿಸಿದೆ  ಆದರೆ ವಿಚಿತ್ರ ಎಂದರೆ  12 ದಿನಗಳ ನಂತರ ವಿಷಯವನ್ನು ಪಟ್ಟಿ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.  ಪ್ರಕರಣದಲ್ಲಿ  ಪ್ರತಿದಿನದ ವಿಳಂಬವು ನಿರ್ಣಾಯಕ ಮತ್ತು ಹೆಚ್ಚಿನ ಮಹತ್ವದ್ದಾಗಿದೆ ಕೋರ್ಟ್ ಹೇಳಿದೆ.

ಇಂತಹ ಸಂದರ್ಭಗಳಲ್ಲಿ, ಕನಿಷ್ಠ ತುರ್ತು ಪ್ರಜ್ಞೆ ಇರಬೇಕು ಮತ್ತು ಅದನ್ನು ಯಾವುದೇ ಸಾಮಾನ್ಯ ಪ್ರಕರಣವೆಂದು ಪರಿಗಣಿಸಿ ಅದನ್ನು ಮುಂದೂಡುವ ಮನೋಭಾವವನ್ನು ಹೊಂದಿರಬಾರದು. ಈ ಹೇಳಿಕೆಯನ್ನು ಹೇಳಲು ನಾವು ವಿಷಾದಿಸುತ್ತೇವೆ ಎಂದು  ಪೀಠವು ಮೌಖಿಕವಾಗಿ ಹೇಳಿದೆ.

ಆಗಸ್ಟ್ 17 ರಂದು ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ ಎಂದು ಪ್ರಕರಣದ ಸ್ಥಿತಿ ತೋರಿಸುತ್ತದೆ. ಆದರೆ ಯಾವುದೇ ಕಾರಣಗಳನ್ನು ನೀಡಲಾಗಿಲ್ಲ ಮತ್ತು ಆದೇಶವನ್ನು ಹೈಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಇನ್ನು ಅಪ್‌ಲೋಡ್ ಮಾಡಬೇಕಾಗಿದೆ ಎಂದು ಅರ್ಜಿದಾರರ ವಕೀಲರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಗರ್ಭಧಾರಣೆಯನ್ನು ಕೊನೆಗೊಳಿಸಲು ಮಹಿಳೆಗೆ ಅನುಮತಿಯನ್ನು ನೀಡಿದೆ. ಭ್ರೂಣವು ಜೀವಂತವಾಗಿದೆ ಎಂದಾದರೆ ಅದನ್ನು ಬದುಕುವಂತೆ ಮಾಡಲು ಆಸ್ಪತ್ರೆಯು ಕಾವು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನು ಓದಿ: ಕೇಂದ್ರದ ಗೃಹ, ರೈಲ್ವೆ, ಬ್ಯಾಂಕ್‌ ಸಿಬ್ಬಂದಿಗಳ ಮೇಲೆ ಹೆಚ್ಚು ಭ್ರಷ್ಟಾಚಾರದ ದೂರು ದಾಖಲು:ಸಿವಿಸಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...