Homeಮುಖಪುಟಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

- Advertisement -
- Advertisement -

ಕೋವಾಕ್ಸಿನ್‌ಗೆ ಮಾನ್ಯತೆ ನೀಡದ ಕಾರಣಕ್ಕಾಗಿ ವಿದೇಶ ಪ್ರವಾಸಕ್ಕೆ ಅನುಮತಿ ಪಡೆಯಲು ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಕೋವಾಕ್ಸಿನ್‌ನ ಎರಡು ಡೋಸ್‌ ಪಡೆದಿರುವ ಜನರಿಗೆ ಮತ್ತೇ ‘ಕೋವಿಶೀಲ್ಡ್’ ನೀಡುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶಿಸುವ ಮೂಲಕ ಜನರ ಜೀವದ ಜೊತೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ.

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, “ಮತ್ತೆ ಲಸಿಕೆ ನೀಡುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡುವ ಮೂಲಕ ನಾವು ಜನರ ಜೀವದ ಜೊತೆ ಚೆಲ್ಲಾಟವಾಡಲು ಸಾಧ್ಯವಿಲ್ಲ. ನಮ್ಮೊಂದಿಗೆ ಯಾವುದೇ ಡೇಟಾ ಇಲ್ಲ. ಭಾರತ್ ಬಯೋಟೆಕ್ ವಿಶ್ವ ಆರೋಗ್ಯ ಸಂಸ್ಥೆಗೆ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿರುವುದನ್ನು ನಾವು ಪತ್ರಿಕೆಗಳಲ್ಲಿ ಓದಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆ (WHO) ನ ಪ್ರತಿಕ್ರಿಯೆಗಾಗಿ ನಾವು ಕಾಯೋಣ. ದೀಪಾವಳಿ ರಜೆಯ ನಂತರ ನಾವು ಈ ವಿಷಯವನ್ನು ಕೈಗೆತ್ತಿಕೊಳ್ಳುತ್ತೇವೆ” ಎಂದು ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಖುದ್ದು ಹಾಜರಾದ ವಕೀಲ ಕಾರ್ತಿಕ್ ಸೇಠ್, ಕೋವಾಕ್ಸಿನ್ ಅನ್ನು WHO ಮಾನ್ಯತೆ ನೀಡದ ಕಾರಣ ಪ್ರತಿದಿನ ವಿದೇಶಕ್ಕೆ ಹೋಗಲು ಇಚ್ಛಿಸುವ ಹಲವಾರು ಜನರಿಗೆ ಇತರ ದೇಶಗಳಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ ಎಂದು ವಾದಿಸಿದರು. ಪ್ರಸ್ತುತ ವ್ಯವಸ್ಥೆಯಡಿಯಲ್ಲಿ, ಈಗಾಗಲೇ ಕೋವಾಕ್ಸಿನ್ ಲಸಿಕೆಯನ್ನು ಪಡೆದಿರುವ ವ್ಯಕ್ತಿಯು ಕೋವಿಶೀಲ್ಡ್ ಲಸಿಕೆ ಪಡೆಯಲು ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನವನ್ನು ನೀಡಬಹುದು ಎಂದು ಅವರು ಸೂಚಿಸಿದ್ದಾರೆ.

“ಯಾವುದೇ ಡೇಟಾ ಇಲ್ಲದೆ ಮತ್ತೊಂದು ಲಸಿಕೆಯನ್ನು ನೀಡುವಂತೆ ನಾವು ನಿರ್ದೇಶನ ಮಾಡಲು ಸಾಧ್ಯವಿಲ್ಲ. ನಿಮ್ಮ ಕಾಳಜಿಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ ಆದರೆ WHO ಯ ಪ್ರತಿಕ್ರಿಯೆಗಾಗಿ ಕಾಯೋಣ” ಎಂದು ಸುಪ್ರೀಂಕೋರ್ಟ್‌ ಪೀಠ ಹೇಳಿದೆ.

ವಕೀಲ ಕಾರ್ತಿಕ್ ಸೇಠ್ ಅವರು ತಮ್ಮ PIL ಸಂಪೂರ್ಣವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿದೆ ಎಂದು ಉಲ್ಲೇಖಿಸಿದ್ದು, ಯಾಕೆಂದರೆ ವಿದೇಶದಲ್ಲಿ ಅಧ್ಯಯನ ಮಾಡಲು ಸಜ್ಜಾಗಿರುವ ಹಲವಾರು ವಿದ್ಯಾರ್ಥಿಗಳು ಹಲವು ದೇಶಗಳಿಗೆ ಪ್ರವೇಶಕ್ಕೆ ಅನುಮತಿ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಕೋವಾಕ್ಸಿನ್ ಲಸಿಕೆಯನ್ನು ಬಿಡುಗಡೆ ಮಾಡುವಾಗ WHO ಅದನ್ನು ಅನುಮೋದಿಸಿಲ್ಲ ಎಂದು ಸರ್ಕಾರವು ಜನರಿಗೆ ತಿಳಿಸಲಿಲ್ಲ ಎಂದು ಕಾರ್ತಿಕ್‌ ಸೇಠ್‌ ಅವರ ಅರ್ಜಿಯಲ್ಲಿ ಹೇಳಲಾಗಿದೆ.

ಲಸಿಕೆ ತಯಾರಕರಾದ ಭಾರತ್ ಬಯೋಟೆಕ್ ಅನುಮೋದನೆಗಾಗಿ ಅರ್ಜಿಯನ್ನು 2021  ಏಪ್ರಿಲ್ ನಲ್ಲಿ ಸಲ್ಲಿಸಿದೆ. ಡಬ್ಲ್ಯುಎಚ್‌ಒ ಪಟ್ಟಿ ಮಾಡಿದ ಲಸಿಕೆಗಳನ್ನು ಹೊರತುಪಡಿಸಿ ಇತರ ಲಸಿಕೆಗಳನ್ನು ಪಡೆದ ಜನರಿಗೆ ಅನೇಕ ದೇಶಗಳು ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಮೇ ತಿಂಗಳಲ್ಲಿ ಜನರು ತಿಳಿದು ಬಂದಿದ್ದಾರೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಕೋವಾಕ್ಸಿನ್ ಕುರಿತು ಅಧಿಕೃತ ಮಾಹಿತಿಯ ಬಿಡುಗಡೆ ಮತ್ತು ಅನುಮೋದನೆ ವಿಳಂಬದ ಕಾರಣಗಳನ್ನು ಬಹಿರಂಗಪಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...