Homeಮುಖಪುಟಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

- Advertisement -
- Advertisement -

ಕೋವಾಕ್ಸಿನ್‌ಗೆ ಮಾನ್ಯತೆ ನೀಡದ ಕಾರಣಕ್ಕಾಗಿ ವಿದೇಶ ಪ್ರವಾಸಕ್ಕೆ ಅನುಮತಿ ಪಡೆಯಲು ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಕೋವಾಕ್ಸಿನ್‌ನ ಎರಡು ಡೋಸ್‌ ಪಡೆದಿರುವ ಜನರಿಗೆ ಮತ್ತೇ ‘ಕೋವಿಶೀಲ್ಡ್’ ನೀಡುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶಿಸುವ ಮೂಲಕ ಜನರ ಜೀವದ ಜೊತೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ.

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, “ಮತ್ತೆ ಲಸಿಕೆ ನೀಡುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡುವ ಮೂಲಕ ನಾವು ಜನರ ಜೀವದ ಜೊತೆ ಚೆಲ್ಲಾಟವಾಡಲು ಸಾಧ್ಯವಿಲ್ಲ. ನಮ್ಮೊಂದಿಗೆ ಯಾವುದೇ ಡೇಟಾ ಇಲ್ಲ. ಭಾರತ್ ಬಯೋಟೆಕ್ ವಿಶ್ವ ಆರೋಗ್ಯ ಸಂಸ್ಥೆಗೆ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿರುವುದನ್ನು ನಾವು ಪತ್ರಿಕೆಗಳಲ್ಲಿ ಓದಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆ (WHO) ನ ಪ್ರತಿಕ್ರಿಯೆಗಾಗಿ ನಾವು ಕಾಯೋಣ. ದೀಪಾವಳಿ ರಜೆಯ ನಂತರ ನಾವು ಈ ವಿಷಯವನ್ನು ಕೈಗೆತ್ತಿಕೊಳ್ಳುತ್ತೇವೆ” ಎಂದು ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಖುದ್ದು ಹಾಜರಾದ ವಕೀಲ ಕಾರ್ತಿಕ್ ಸೇಠ್, ಕೋವಾಕ್ಸಿನ್ ಅನ್ನು WHO ಮಾನ್ಯತೆ ನೀಡದ ಕಾರಣ ಪ್ರತಿದಿನ ವಿದೇಶಕ್ಕೆ ಹೋಗಲು ಇಚ್ಛಿಸುವ ಹಲವಾರು ಜನರಿಗೆ ಇತರ ದೇಶಗಳಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ ಎಂದು ವಾದಿಸಿದರು. ಪ್ರಸ್ತುತ ವ್ಯವಸ್ಥೆಯಡಿಯಲ್ಲಿ, ಈಗಾಗಲೇ ಕೋವಾಕ್ಸಿನ್ ಲಸಿಕೆಯನ್ನು ಪಡೆದಿರುವ ವ್ಯಕ್ತಿಯು ಕೋವಿಶೀಲ್ಡ್ ಲಸಿಕೆ ಪಡೆಯಲು ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನವನ್ನು ನೀಡಬಹುದು ಎಂದು ಅವರು ಸೂಚಿಸಿದ್ದಾರೆ.

“ಯಾವುದೇ ಡೇಟಾ ಇಲ್ಲದೆ ಮತ್ತೊಂದು ಲಸಿಕೆಯನ್ನು ನೀಡುವಂತೆ ನಾವು ನಿರ್ದೇಶನ ಮಾಡಲು ಸಾಧ್ಯವಿಲ್ಲ. ನಿಮ್ಮ ಕಾಳಜಿಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ ಆದರೆ WHO ಯ ಪ್ರತಿಕ್ರಿಯೆಗಾಗಿ ಕಾಯೋಣ” ಎಂದು ಸುಪ್ರೀಂಕೋರ್ಟ್‌ ಪೀಠ ಹೇಳಿದೆ.

ವಕೀಲ ಕಾರ್ತಿಕ್ ಸೇಠ್ ಅವರು ತಮ್ಮ PIL ಸಂಪೂರ್ಣವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿದೆ ಎಂದು ಉಲ್ಲೇಖಿಸಿದ್ದು, ಯಾಕೆಂದರೆ ವಿದೇಶದಲ್ಲಿ ಅಧ್ಯಯನ ಮಾಡಲು ಸಜ್ಜಾಗಿರುವ ಹಲವಾರು ವಿದ್ಯಾರ್ಥಿಗಳು ಹಲವು ದೇಶಗಳಿಗೆ ಪ್ರವೇಶಕ್ಕೆ ಅನುಮತಿ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಕೋವಾಕ್ಸಿನ್ ಲಸಿಕೆಯನ್ನು ಬಿಡುಗಡೆ ಮಾಡುವಾಗ WHO ಅದನ್ನು ಅನುಮೋದಿಸಿಲ್ಲ ಎಂದು ಸರ್ಕಾರವು ಜನರಿಗೆ ತಿಳಿಸಲಿಲ್ಲ ಎಂದು ಕಾರ್ತಿಕ್‌ ಸೇಠ್‌ ಅವರ ಅರ್ಜಿಯಲ್ಲಿ ಹೇಳಲಾಗಿದೆ.

ಲಸಿಕೆ ತಯಾರಕರಾದ ಭಾರತ್ ಬಯೋಟೆಕ್ ಅನುಮೋದನೆಗಾಗಿ ಅರ್ಜಿಯನ್ನು 2021  ಏಪ್ರಿಲ್ ನಲ್ಲಿ ಸಲ್ಲಿಸಿದೆ. ಡಬ್ಲ್ಯುಎಚ್‌ಒ ಪಟ್ಟಿ ಮಾಡಿದ ಲಸಿಕೆಗಳನ್ನು ಹೊರತುಪಡಿಸಿ ಇತರ ಲಸಿಕೆಗಳನ್ನು ಪಡೆದ ಜನರಿಗೆ ಅನೇಕ ದೇಶಗಳು ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಮೇ ತಿಂಗಳಲ್ಲಿ ಜನರು ತಿಳಿದು ಬಂದಿದ್ದಾರೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಕೋವಾಕ್ಸಿನ್ ಕುರಿತು ಅಧಿಕೃತ ಮಾಹಿತಿಯ ಬಿಡುಗಡೆ ಮತ್ತು ಅನುಮೋದನೆ ವಿಳಂಬದ ಕಾರಣಗಳನ್ನು ಬಹಿರಂಗಪಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...