Homeಮುಖಪುಟಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

- Advertisement -
- Advertisement -

ಕೋವಾಕ್ಸಿನ್‌ಗೆ ಮಾನ್ಯತೆ ನೀಡದ ಕಾರಣಕ್ಕಾಗಿ ವಿದೇಶ ಪ್ರವಾಸಕ್ಕೆ ಅನುಮತಿ ಪಡೆಯಲು ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಕೋವಾಕ್ಸಿನ್‌ನ ಎರಡು ಡೋಸ್‌ ಪಡೆದಿರುವ ಜನರಿಗೆ ಮತ್ತೇ ‘ಕೋವಿಶೀಲ್ಡ್’ ನೀಡುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶಿಸುವ ಮೂಲಕ ಜನರ ಜೀವದ ಜೊತೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ.

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, “ಮತ್ತೆ ಲಸಿಕೆ ನೀಡುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡುವ ಮೂಲಕ ನಾವು ಜನರ ಜೀವದ ಜೊತೆ ಚೆಲ್ಲಾಟವಾಡಲು ಸಾಧ್ಯವಿಲ್ಲ. ನಮ್ಮೊಂದಿಗೆ ಯಾವುದೇ ಡೇಟಾ ಇಲ್ಲ. ಭಾರತ್ ಬಯೋಟೆಕ್ ವಿಶ್ವ ಆರೋಗ್ಯ ಸಂಸ್ಥೆಗೆ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿರುವುದನ್ನು ನಾವು ಪತ್ರಿಕೆಗಳಲ್ಲಿ ಓದಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆ (WHO) ನ ಪ್ರತಿಕ್ರಿಯೆಗಾಗಿ ನಾವು ಕಾಯೋಣ. ದೀಪಾವಳಿ ರಜೆಯ ನಂತರ ನಾವು ಈ ವಿಷಯವನ್ನು ಕೈಗೆತ್ತಿಕೊಳ್ಳುತ್ತೇವೆ” ಎಂದು ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಖುದ್ದು ಹಾಜರಾದ ವಕೀಲ ಕಾರ್ತಿಕ್ ಸೇಠ್, ಕೋವಾಕ್ಸಿನ್ ಅನ್ನು WHO ಮಾನ್ಯತೆ ನೀಡದ ಕಾರಣ ಪ್ರತಿದಿನ ವಿದೇಶಕ್ಕೆ ಹೋಗಲು ಇಚ್ಛಿಸುವ ಹಲವಾರು ಜನರಿಗೆ ಇತರ ದೇಶಗಳಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತಿದೆ ಎಂದು ವಾದಿಸಿದರು. ಪ್ರಸ್ತುತ ವ್ಯವಸ್ಥೆಯಡಿಯಲ್ಲಿ, ಈಗಾಗಲೇ ಕೋವಾಕ್ಸಿನ್ ಲಸಿಕೆಯನ್ನು ಪಡೆದಿರುವ ವ್ಯಕ್ತಿಯು ಕೋವಿಶೀಲ್ಡ್ ಲಸಿಕೆ ಪಡೆಯಲು ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನವನ್ನು ನೀಡಬಹುದು ಎಂದು ಅವರು ಸೂಚಿಸಿದ್ದಾರೆ.

“ಯಾವುದೇ ಡೇಟಾ ಇಲ್ಲದೆ ಮತ್ತೊಂದು ಲಸಿಕೆಯನ್ನು ನೀಡುವಂತೆ ನಾವು ನಿರ್ದೇಶನ ಮಾಡಲು ಸಾಧ್ಯವಿಲ್ಲ. ನಿಮ್ಮ ಕಾಳಜಿಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ ಆದರೆ WHO ಯ ಪ್ರತಿಕ್ರಿಯೆಗಾಗಿ ಕಾಯೋಣ” ಎಂದು ಸುಪ್ರೀಂಕೋರ್ಟ್‌ ಪೀಠ ಹೇಳಿದೆ.

ವಕೀಲ ಕಾರ್ತಿಕ್ ಸೇಠ್ ಅವರು ತಮ್ಮ PIL ಸಂಪೂರ್ಣವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿದೆ ಎಂದು ಉಲ್ಲೇಖಿಸಿದ್ದು, ಯಾಕೆಂದರೆ ವಿದೇಶದಲ್ಲಿ ಅಧ್ಯಯನ ಮಾಡಲು ಸಜ್ಜಾಗಿರುವ ಹಲವಾರು ವಿದ್ಯಾರ್ಥಿಗಳು ಹಲವು ದೇಶಗಳಿಗೆ ಪ್ರವೇಶಕ್ಕೆ ಅನುಮತಿ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಕೋವಾಕ್ಸಿನ್ ಲಸಿಕೆಯನ್ನು ಬಿಡುಗಡೆ ಮಾಡುವಾಗ WHO ಅದನ್ನು ಅನುಮೋದಿಸಿಲ್ಲ ಎಂದು ಸರ್ಕಾರವು ಜನರಿಗೆ ತಿಳಿಸಲಿಲ್ಲ ಎಂದು ಕಾರ್ತಿಕ್‌ ಸೇಠ್‌ ಅವರ ಅರ್ಜಿಯಲ್ಲಿ ಹೇಳಲಾಗಿದೆ.

ಲಸಿಕೆ ತಯಾರಕರಾದ ಭಾರತ್ ಬಯೋಟೆಕ್ ಅನುಮೋದನೆಗಾಗಿ ಅರ್ಜಿಯನ್ನು 2021  ಏಪ್ರಿಲ್ ನಲ್ಲಿ ಸಲ್ಲಿಸಿದೆ. ಡಬ್ಲ್ಯುಎಚ್‌ಒ ಪಟ್ಟಿ ಮಾಡಿದ ಲಸಿಕೆಗಳನ್ನು ಹೊರತುಪಡಿಸಿ ಇತರ ಲಸಿಕೆಗಳನ್ನು ಪಡೆದ ಜನರಿಗೆ ಅನೇಕ ದೇಶಗಳು ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಮೇ ತಿಂಗಳಲ್ಲಿ ಜನರು ತಿಳಿದು ಬಂದಿದ್ದಾರೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಕೋವಾಕ್ಸಿನ್ ಕುರಿತು ಅಧಿಕೃತ ಮಾಹಿತಿಯ ಬಿಡುಗಡೆ ಮತ್ತು ಅನುಮೋದನೆ ವಿಳಂಬದ ಕಾರಣಗಳನ್ನು ಬಹಿರಂಗಪಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಪೊಲೀಸ್ ಮನೆಯಲ್ಲಿ ಕಳ್ಳತನ ಮಾಡಿ, ಕ್ಷಮಿಸು ಗೆಳೆಯ ಎಂದು ಪತ್ರ ಬರೆದಿಟ್ಟ ಕಳ್ಳ

ಇದನ್ನೂ ಓದಿ: ಕೋವಿಶೀಲ್ಡ್‌ ಪಡೆದವರಿಗೆ ಯುರೋಪಿನ 9 ರಾಷ್ಟ್ರಗಳಲ್ಲಿ ಪ್ರವೇಶಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...