Homeಮುಖಪುಟಸಿಎಪಿಎಫ್‌ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 1ಲಕ್ಷ ಹುದ್ದೆಗಳು ಖಾಲಿ - ಕೇಂದ್ರ ಸರ್ಕಾರ

ಸಿಎಪಿಎಫ್‌ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 1ಲಕ್ಷ ಹುದ್ದೆಗಳು ಖಾಲಿ – ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 1 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿವೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ. ಜೊತೆಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್‌)ಯಲ್ಲಿ ಅತಿ ಹೆಚ್ಚು ಅಂದರೆ 33,730 ಹುದ್ದೆಗಳು ಖಾಲಿಯಿವೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಸದನದಲ್ಲಿ ಬಹಿರಂಗಪಡಿಸಿದ್ದಾರೆ.

ಗೃಹ ಸಚಿವಾಲಯವು ಸಿದ್ಧಪಡಿಸಿದ ಮಾಹಿತಿಯ ಪ್ರಕಾರ, 2024ರ ಅಕ್ಟೋಬರ್ 30ರ ವರೆಗೆ ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ನ ಒಟ್ಟು ಪೋಸ್ಟ್ ಸಾಮರ್ಥ್ಯ 9,48,204 ಆಗಿತ್ತು. ಸಿಎಪಿಎಫ್‌ ಮತ್ತು ಅಸ್ಸಾಂ

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವ ನಿತ್ಯಾನಂದ ರೈ, ಖಾಲಿ ಇರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಪ್ರತಿಪಾದಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್ ನಲ್ಲಿ 71,231 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸಿಎಪಿಎಫ್‌ ಮತ್ತು ಅಸ್ಸಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನಿವೃತ್ತಿ, ರಾಜೀನಾಮೆಗಳು, ಬಡ್ತಿಗಳು, ಸಾವುಗಳು, ಹೊಸ ಬೆಟಾಲಿಯನ್ ಸ್ಥಾಪನೆ ಮತ್ತು ಹೊಸ ಹುದ್ದೆಗಳ ಸೃಷ್ಟಿಯಿಂದಾಗಿ ಖಾಲಿ ಹುದ್ದೆಗಳು ಉದ್ಭವಿಸುತ್ತವೆ ಎಂದು ಕೇಂದ್ರ ಸಚಿವ ಪ್ರತಿಪಾದಿಸಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ನಿರಂತರ ಪ್ರಕ್ರಿಯೆ ಎಂದು ಅವರು ಪ್ರತಿಪಾದಿಸಿದರು.

ಅಕ್ಟೋಬರ್ 30ರ ಮಾಹಿತಿಯಂತೆ, ಸಿಎಪಿಎಫ್‌ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 1,00,204 ಹುದ್ದೆಗಳು ಖಾಲಿ ಇವೆ ಎಂದು ಅಂಕಿ ಅಂಶಗಳು ಹೇಳಿವೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳಲ್ಲಿ 33,730 ಹುದ್ದೆಗಳು; ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್‌ನಲ್ಲಿ 31,782; ಗಡಿ ಭದ್ರತಾ ಪಡೆಯಲ್ಲಿ 12,808; ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್‌ನಲ್ಲಿ 9,861; ಸಶಸ್ತ್ರ ಸೀಮಾ ಬಲ್‌ನಲ್ಲಿ 8,646 ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 3,377 ಹುದ್ದೆಗಳು ಖಾಲಿಯಿದ್ದವು.

ಮಂಗಳವಾರ ಸದನಕ್ಕೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಪ್ರತಾಪ್ರಾವ್ ಜಾಧವ್ ನೀಡಿರುವ ಲಿಖಿತ ಉತ್ತರದಲ್ಲಿ, ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ ವೈದ್ಯಕೀಯ ಇಂಟರ್ನ್‌ಗಳ ಅಂಕಿ ಅಂಶವನ್ನು “ಕೇಂದ್ರೀಕೃತವಾಗಿ ನಿರ್ವಹಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಅದಾಗ್ಯೂ, ಮಾನಸಿಕ ಆರೋಗ್ಯ ಸವಾಲುಗಳನ್ನು ಎದುರಿಸಲು ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಉತ್ತೇಜಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ವಿವಿಧ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಚಿವರು ಹೇಳಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಪರಿಹರಿಸಲು ಫೆಬ್ರವರಿ 2024 ರಲ್ಲಿ NMC ಯ ರ ್ಯಾಗಿಂಗ್ ವಿರೋಧಿ ಸಮಿತಿಯು 15 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ (NTF)ಯನ್ನು ಸ್ಥಾಪಿಸಿದೆ ಎಂದು ಅವರು ಹೇಳಿದ್ದಾರೆ.

NTF ಕೇಂದ್ರೀಕೃತ ವರದಿಯು ಆತ್ಮಹತ್ಯೆಗಳ ಮೇಲ್ವಿಚಾರಣೆಗಾಗಿ ದೃಢವಾದ ಕಾರ್ಯವಿಧಾನವನ್ನು ಅಭಿವೃದ್ಧಿಪಡಿಸುವುದು, ಬೆಂಬಲಿತ ವಾತಾವರಣವನ್ನು ಬೆಳೆಸುವುದು ಮತ್ತು ವ್ಯವಸ್ಥಿತ ಸಮಸ್ಯೆಗಳನ್ನು ಪರಿಹರಿಸುವುದು ಸೇರಿದಂತೆ ಹಲವು ವ್ಯವಸ್ಥೆಗಳನ್ನು ಸ್ಥಾಪಿಸಲು ಶಿಫಾರಸು ಮಾಡಿದೆ.

ನೊಂದ ವಿದ್ಯಾರ್ಥಿಗಳು ಮಾನಸಿಕ ಆರೋಗ್ಯ ಮತ್ತು ರ್ಯಾಗಿಂಗ್‌ಗೆ ಸಂಬಂಧಿಸಿದ ದೂರುಗಳನ್ನು ಎನ್‌ಎಂಸಿ ವೆಬ್‌ಸೈಟ್ ಮತ್ತು ಕೇಂದ್ರೀಕೃತ ಸಾರ್ವಜನಿಕ ಕುಂದುಕೊರತೆ ಪರಿಹಾರ ಮತ್ತು ಮಾನಿಟರಿಂಗ್ ಸಿಸ್ಟಮ್ (ಸಿಪಿಜಿಆರ್‌ಎಂಎಸ್) ನಂತಹ ಪೋರ್ಟಲ್‌ಗಳಲ್ಲಿ ಸಲ್ಲಿಸಬಹುದು ಎಂದು ಸಚಿವರು ಹೇಳಿದ್ದಾರೆ. ಮಾನಸಿಕ ಆರೋಗ್ಯ ಸವಾಲುಗಳನ್ನು ಎದುರಿಸಲು, ಸರ್ಕಾರವು ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು (NMHP) ಸಹ ಜಾರಿಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...