Homeಮುಖಪುಟ9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ ರಜೆಗಳ ಲಾಭ ಪಡೆದಿದ್ದು 42 ಸಾವಿರ ಮಂದಿ - ಕೇಂದ್ರ...

9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ ರಜೆಗಳ ಲಾಭ ಪಡೆದಿದ್ದು 42 ಸಾವಿರ ಮಂದಿ – ಕೇಂದ್ರ ಸರ್ಕಾರ ಮಾಹಿತಿ

- Advertisement -
- Advertisement -

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿ ಪಡೆಯಬೇಕಿದ್ದ 100 ದಿನಗಳ ರಜೆಯಲ್ಲಿ 2020 ಮತ್ತು 2024ರ (ಅಕ್ಟೋಬರ್ ವರೆಗೆ) ನಡುವೆ ಈ ಪಡೆಗಳಲ್ಲಿರುವ 9.5 ಲಕ್ಷ ಸಿಬ್ಬಂದಿಗಳ ಪೈಕಿ ಕೇವಲ 42,000 ಸಿಬ್ಬಂದಿಗಳು ಮಾತ್ರವೇ 100 ದಿನಗಳ ರಜೆಯ ಲಾಭ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ (MHA) ಮಾಹಿತಿ ನೀಡಿದೆ. 9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ ಆತ್ಮಹತ್ಯೆಗಳು ಮತ್ತು ಸ್ವಯಂನಿವೃತ್ತಿಯನ್ನು ಕಡಿಮೆ ಮಾಡುವ ಮತ್ತು ಸಿಬ್ಬಂದಿಗಳು ತಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಅವಕಾಶ ಮಾಡಿಕೊಡುವ ಉದ್ದೇಶದಿಂದ 100 ದಿನಗಳ ರಜೆ ನೀತಿಯನ್ನು ಘೋಷಿಸಲಾಗಿತ್ತು. ಆದಾಗ್ಯೂ, ತೀರಾ ಕಡಿಮೆ ಸಿಬ್ಬಂದಿ ಈ ನೀತಿಯಡಿ ರಜೆ ಪಡೆದಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. 9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಸತ್ತಿನಲ್ಲಿ ಗೃಹ ಸಚಿವಾಲಯದ ನೀಡಿದ ಮಾಹಿತಿಯಂತೆ, ಕಳೆದ ನಾಲ್ಕು ವರ್ಷಗಳಲ್ಲಿ ಸಿಆರ್‌ಪಿಎಫ್‌ನ ಒಟ್ಟು 2,245 ಸಿಬ್ಬಂದಿಗಳು ಮಾತ್ರವೇ 100 ದಿನಗಳ ರಜೆ ಪಡೆದುಕೊಂಡಿದ್ದಾರೆ. ಆದಾಗ್ಯೂ, 2024ರಲ್ಲಿ ಕೇವಲ 71 ಮಂದಿ ಮಾತ್ರವೇ ರಜೆ ಮೇಲೆ ತಮ್ಮೂರಿಗೆ ಹೋಗಲು ಸಾಧ್ಯವಾಗಿದೆ ಎಂದು ಸಚಿವಾಲಯ ಹೇಳಿದೆ.

ಜೊತೆಗೆ, ಗಡಿ ಭದ್ರತಾ ಪಡೆಯಲ್ಲಿ (BSF) ಒಟ್ಟು 21,733 ಸಿಬ್ಬಂದಿ 100 ದಿನ ರಜೆಯನ್ನು ತೆಗೆದುಕೊಂಡಿದ್ದರೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) ಪಡೆಯ 1,472 ಸಿಬ್ಬಂದಿ, ಸಶಸ್ತ್ರ ಸೀಮಾ ಬಲ್‌ನ (SSB) 6,142 ಸಿಬ್ಬಂದಿ ಹಾಗೂ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್‌ನ (CISF) 8,838 ಸಿಬ್ಬಂದಿ ಈ ರಜೆಗಳನ್ನು ಪಡೆದಿದ್ದಾರೆ ಎಂದು ಸರ್ಕಾರ ಹೇಳಿದೆ.

ಇದಲ್ಲದೆ, ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಾರ್ಯನಿರ್ವಹಿಸುವ ಮತ್ತು ಮಣಿಪುರದಲ್ಲಿ ನಿಯೋಜಿಸಲಾದ ಅಸ್ಸಾಂ ರೈಫಲ್ಸ್‌ನ 2,367 ಸಿಬ್ಬಂದಿಗಳು 100 ದಿನಗಳ ರಜೆ ಪಡೆದಿದ್ದು, ಒಟ್ಟಾರೆಯಾಗಿ, 42,797 ಸಿಬ್ಬಂದಿಗಳು ರಜೆಯ ಉಪಯೋಗ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸದನದಲ್ಲಿ ಹೇಳಿದೆ.

ಇದನ್ನೂ ಓದಿ: ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. No such types of orders for avail compulsory 100 days leave till now. I am availed 60 days EL&15days C/L with 2 RH , 4 GH & 06 Sundays as prefix and Suffix Total-87 days. How I am availed 100 days leave? Please provide if any orders issued for compulsory avail 100 days leave by MHA to CAPF Jawans. Regards.

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...