Homeಮುಖಪುಟ9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ ರಜೆಗಳ ಲಾಭ ಪಡೆದಿದ್ದು 42 ಸಾವಿರ ಮಂದಿ - ಕೇಂದ್ರ...

9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ ರಜೆಗಳ ಲಾಭ ಪಡೆದಿದ್ದು 42 ಸಾವಿರ ಮಂದಿ – ಕೇಂದ್ರ ಸರ್ಕಾರ ಮಾಹಿತಿ

- Advertisement -
- Advertisement -

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿ ಪಡೆಯಬೇಕಿದ್ದ 100 ದಿನಗಳ ರಜೆಯಲ್ಲಿ 2020 ಮತ್ತು 2024ರ (ಅಕ್ಟೋಬರ್ ವರೆಗೆ) ನಡುವೆ ಈ ಪಡೆಗಳಲ್ಲಿರುವ 9.5 ಲಕ್ಷ ಸಿಬ್ಬಂದಿಗಳ ಪೈಕಿ ಕೇವಲ 42,000 ಸಿಬ್ಬಂದಿಗಳು ಮಾತ್ರವೇ 100 ದಿನಗಳ ರಜೆಯ ಲಾಭ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ (MHA) ಮಾಹಿತಿ ನೀಡಿದೆ. 9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ ಆತ್ಮಹತ್ಯೆಗಳು ಮತ್ತು ಸ್ವಯಂನಿವೃತ್ತಿಯನ್ನು ಕಡಿಮೆ ಮಾಡುವ ಮತ್ತು ಸಿಬ್ಬಂದಿಗಳು ತಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಅವಕಾಶ ಮಾಡಿಕೊಡುವ ಉದ್ದೇಶದಿಂದ 100 ದಿನಗಳ ರಜೆ ನೀತಿಯನ್ನು ಘೋಷಿಸಲಾಗಿತ್ತು. ಆದಾಗ್ಯೂ, ತೀರಾ ಕಡಿಮೆ ಸಿಬ್ಬಂದಿ ಈ ನೀತಿಯಡಿ ರಜೆ ಪಡೆದಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ. 9.5 ಲಕ್ಷ ಸಿಎಪಿಎಫ್‌ ಸಿಬ್ಬಂದಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಸತ್ತಿನಲ್ಲಿ ಗೃಹ ಸಚಿವಾಲಯದ ನೀಡಿದ ಮಾಹಿತಿಯಂತೆ, ಕಳೆದ ನಾಲ್ಕು ವರ್ಷಗಳಲ್ಲಿ ಸಿಆರ್‌ಪಿಎಫ್‌ನ ಒಟ್ಟು 2,245 ಸಿಬ್ಬಂದಿಗಳು ಮಾತ್ರವೇ 100 ದಿನಗಳ ರಜೆ ಪಡೆದುಕೊಂಡಿದ್ದಾರೆ. ಆದಾಗ್ಯೂ, 2024ರಲ್ಲಿ ಕೇವಲ 71 ಮಂದಿ ಮಾತ್ರವೇ ರಜೆ ಮೇಲೆ ತಮ್ಮೂರಿಗೆ ಹೋಗಲು ಸಾಧ್ಯವಾಗಿದೆ ಎಂದು ಸಚಿವಾಲಯ ಹೇಳಿದೆ.

ಜೊತೆಗೆ, ಗಡಿ ಭದ್ರತಾ ಪಡೆಯಲ್ಲಿ (BSF) ಒಟ್ಟು 21,733 ಸಿಬ್ಬಂದಿ 100 ದಿನ ರಜೆಯನ್ನು ತೆಗೆದುಕೊಂಡಿದ್ದರೆ, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) ಪಡೆಯ 1,472 ಸಿಬ್ಬಂದಿ, ಸಶಸ್ತ್ರ ಸೀಮಾ ಬಲ್‌ನ (SSB) 6,142 ಸಿಬ್ಬಂದಿ ಹಾಗೂ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್‌ನ (CISF) 8,838 ಸಿಬ್ಬಂದಿ ಈ ರಜೆಗಳನ್ನು ಪಡೆದಿದ್ದಾರೆ ಎಂದು ಸರ್ಕಾರ ಹೇಳಿದೆ.

ಇದಲ್ಲದೆ, ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಾರ್ಯನಿರ್ವಹಿಸುವ ಮತ್ತು ಮಣಿಪುರದಲ್ಲಿ ನಿಯೋಜಿಸಲಾದ ಅಸ್ಸಾಂ ರೈಫಲ್ಸ್‌ನ 2,367 ಸಿಬ್ಬಂದಿಗಳು 100 ದಿನಗಳ ರಜೆ ಪಡೆದಿದ್ದು, ಒಟ್ಟಾರೆಯಾಗಿ, 42,797 ಸಿಬ್ಬಂದಿಗಳು ರಜೆಯ ಉಪಯೋಗ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸದನದಲ್ಲಿ ಹೇಳಿದೆ.

ಇದನ್ನೂ ಓದಿ: ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. No such types of orders for avail compulsory 100 days leave till now. I am availed 60 days EL&15days C/L with 2 RH , 4 GH & 06 Sundays as prefix and Suffix Total-87 days. How I am availed 100 days leave? Please provide if any orders issued for compulsory avail 100 days leave by MHA to CAPF Jawans. Regards.

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...