Homeಮುಖಪುಟಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

- Advertisement -
- Advertisement -

ಆಲಪ್ಪುಝದಲ್ಲಿ ನಡೆದಿದ್ದ ಬಿಜೆಪಿಯ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ 15 ಅಪರಾಧಿಗಳಿಗೆ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಕೇರಳದ ಇತಿಹಾಸದಲ್ಲಿ ಈ ರೀತಿ ಒಂದು ಪ್ರಕರಣದಲ್ಲಿ ಇಷ್ಟು ಮಂದಿ ಅಪರಾಧಿಗಳಿಗೆ ಯಾವುದೇ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿಲ್ಲ ಎಂದು onmanorama.com ವರದಿ ತಿಳಿಸಿದೆ.

ಡಿಸೆಂಬರ್ 19, 2021ರಂದು ನಡೆದಿದ್ದ ಬಿಜೆಪಿ ನಾಯಕ ಮತ್ತು ವಕೀಲ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೈಸಾಮ್, ಅಜ್ಮಲ್, ಅನೂಪ್, ಮೊಹಮ್ಮದ್ ಅಸ್ಲಾಂ, ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮನ್ಶಾದ್, ಜಸೀಬ್ ರಾಜಾ, ನವಾಸ್, ಸಮೀರ್, ನಝೀರ್, ಜಾಕೀರ್ ಹುಸೇನ್, ಶಾಜಿ ಪೂವತುಂಗಲ್ ಮತ್ತು ಶೆರ್ನಾಸ್ ಅಶ್ರಫ್ ಅವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.

ನ್ಯಾಯಾಧೀಶರಾದ ಶ್ರೀದೇವಿ ವಿ ಜಿ ಅವರು ಅಪರಾಧಿಗಳ ಮಾತುಗಳನ್ನು ಆಲಿಸಿದ್ದು, ಶಿಕ್ಷೆಯ ಪ್ರಮಾಣದ ಕುರಿತು ವಾದಗಳ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ಗರಿಷ್ಠ ಶಿಕ್ಷೆಯನ್ನು ನೀಡುವಂತೆ ನ್ಯಾಯಾಲಯವನ್ನು ಕೇಳಿಕೊಂಡಿದ್ದರು. ಆದರೆ ಆರೋಪಿಗಳ ಪರ ವಕೀಲರು ಮರಣದಂಡನೆಯನ್ನು ಸಮರ್ಥಿಸುವ ರೀತಿಯಲ್ಲಿನ ಅಪರೂಪದ ವರ್ಗದ ಅಡಿಯಲ್ಲಿ ಈ ಪ್ರಕರಣವು ಸೇರುವುದಿಲ್ಲ ಎಂದು ಹೇಳಿದ್ದರು. ತೀರ್ಪಿನ ವೇಳೆ ನ್ಯಾಯಾಲಯವು ಅಪರಾಧಿಗಳನ್ನು ಅಲಪ್ಪುಝದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾನಸಿಕ ಸ್ಥಿರತೆ ಪರೀಕ್ಷೆಗೆ ಒಳಪಡಿಸುವಂತೆ ಕೂಡ ಹೇಳಿದೆ.

ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗವಹಿಸಿದ 8 ಆರೋಪಿಗಳು ಸೆಕ್ಷನ್ 302 (ಕೊಲೆ), 149 (ಕಾನೂನುಬಾಹಿರ ಸಭೆ), 449 (ಮರಣದಂಡನೆಗೆ ಒಳಪಡುವ ಅಪರಾಧವನ್ನು ಮಾಡಲು ಮನೆ ಅತಿಕ್ರಮಣ), 506 (ಅಪರಾಧ ಬೆದರಿಕೆ) ಮತ್ತು 341 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಅಪರಾಧ ಸಾಬೀತಾಗಿದೆ.

ಕೃತ್ಯದ ವೇಳೆ ಮಾರಕಾಯುಧಗಳೊಂದಿಗೆ ಬಿಜೆಪಿಯ ನಾಯಕನ ಮನೆಯ ಹೊರಗೆ ಕಾಯುತ್ತಿದ್ದ ಆರೋಪಿಗಳನ್ನು ಐಪಿಸಿಯ ಸೆಕ್ಷನ್ 302 ಆರ್/ಡಬ್ಲ್ಯೂ 149 ಮತ್ತು 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ. ಪ್ರಮುಖ ಸಂಚುಕೋರರಾದ ಜಾಕಿರ್ (13 ನೇ ಆರೋಪಿ), ಶಾಜಿ (14 ನೇ ಆರೋಪಿ), ಮತ್ತು ಶೆರ್ನಾಸ್ (15 ನೇ ಆರೋಪಿ) ಕ್ರಮವಾಗಿ ಐಪಿಸಿ ಸೆಕ್ಷನ್ 120 ಬಿ ಮತ್ತು 302ರಡಿಯಲ್ಲಿ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದೆ.

ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ವಕೀಲ ರಂಜೀತ್ ಅವರನ್ನು ಆಲಪ್ಪುಝದ ಪುರಸಭೆಯ ವೆಲ್ಲಕಿನಾರ್‌ನಲ್ಲಿರುವ ಅವರ ನಿವಾಸದಲ್ಲಿ ಆರೋಪಿಗಳು ಡಿಸೆಂಬರ್ 19, 2021ರಂದು ಬೆಳಿಗ್ಗೆ ಅವರ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೂ ಮೊದಲು ಮನ್ನಂಚೇರಿಯ ಕುಪ್ಪೆಝಂ ಜಂಕ್ಷನ್‌ನಲ್ಲಿ ಎಸ್‌ಡಿಪಿಐನ ರಾಜ್ಯ ಕಾರ್ಯದರ್ಶಿ ಕೆ ಎಸ್ ಶಾನ್ ಅವರನ್ನು ಸಂಘಪರಿವಾರದ ಕಾರ್ಯಕರ್ತರು ಹತ್ಯೆ ಮಾಡಿದ್ದರು. ಕೆ ಎಸ್ ಶಾನ್ ಹತ್ಯೆಗೆ ರಂಜೀತ್ ಹತ್ಯೆ ಪ್ರತಿಕಾರವೆಂದು ಹೇಳಾಗಿತ್ತು. ಶಾನ್ ಕೊಲೆ ಪ್ರಕರಣದ ವಿಚಾರಣೆ ಫೆಬ್ರವರಿ 2ರಂದು ಪ್ರಾರಂಭವಾಗಲಿದೆ. ಪೊಲೀಸರು ಮಾರ್ಚ್ 16, 2022 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರೂ, ವಿಶೇಷ ಅಭಿಯೋಜಕರನ್ನು ನೇಮಿಸುವಲ್ಲಿ ವಿಳಂಬವಾದ ಕಾರಣ ವಿಚಾರಣೆ ವಿಳಂಬವಾಗಿದೆ. ಮೊದಲೆರಡು ವಿಶೇಷ ಅಭಿಯೋಜಕರು ತಮ್ಮ ನೇಮಕಾತಿಯಿಂದ ಹಿಂದೆ ಸರಿದಿದ್ದರು. ಕಳೆದ ವಾರವಷ್ಟೇ ಆ ಹುದ್ದೆಗೆ ಅಡ್ವಕೇಟ್‌ ಪಿ ಪಿ ಹ್ಯಾರಿಸ್ ಅವರನ್ನು ನೇಮಿಸಲಾಗಿತ್ತು.

ಇದನ್ನು ಓದಿ; ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...