Homeಮುಖಪುಟಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

- Advertisement -
- Advertisement -

ಆಲಪ್ಪುಝದಲ್ಲಿ ನಡೆದಿದ್ದ ಬಿಜೆಪಿಯ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ 15 ಅಪರಾಧಿಗಳಿಗೆ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಕೇರಳದ ಇತಿಹಾಸದಲ್ಲಿ ಈ ರೀತಿ ಒಂದು ಪ್ರಕರಣದಲ್ಲಿ ಇಷ್ಟು ಮಂದಿ ಅಪರಾಧಿಗಳಿಗೆ ಯಾವುದೇ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿಲ್ಲ ಎಂದು onmanorama.com ವರದಿ ತಿಳಿಸಿದೆ.

ಡಿಸೆಂಬರ್ 19, 2021ರಂದು ನಡೆದಿದ್ದ ಬಿಜೆಪಿ ನಾಯಕ ಮತ್ತು ವಕೀಲ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೈಸಾಮ್, ಅಜ್ಮಲ್, ಅನೂಪ್, ಮೊಹಮ್ಮದ್ ಅಸ್ಲಾಂ, ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮನ್ಶಾದ್, ಜಸೀಬ್ ರಾಜಾ, ನವಾಸ್, ಸಮೀರ್, ನಝೀರ್, ಜಾಕೀರ್ ಹುಸೇನ್, ಶಾಜಿ ಪೂವತುಂಗಲ್ ಮತ್ತು ಶೆರ್ನಾಸ್ ಅಶ್ರಫ್ ಅವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.

ನ್ಯಾಯಾಧೀಶರಾದ ಶ್ರೀದೇವಿ ವಿ ಜಿ ಅವರು ಅಪರಾಧಿಗಳ ಮಾತುಗಳನ್ನು ಆಲಿಸಿದ್ದು, ಶಿಕ್ಷೆಯ ಪ್ರಮಾಣದ ಕುರಿತು ವಾದಗಳ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ಗರಿಷ್ಠ ಶಿಕ್ಷೆಯನ್ನು ನೀಡುವಂತೆ ನ್ಯಾಯಾಲಯವನ್ನು ಕೇಳಿಕೊಂಡಿದ್ದರು. ಆದರೆ ಆರೋಪಿಗಳ ಪರ ವಕೀಲರು ಮರಣದಂಡನೆಯನ್ನು ಸಮರ್ಥಿಸುವ ರೀತಿಯಲ್ಲಿನ ಅಪರೂಪದ ವರ್ಗದ ಅಡಿಯಲ್ಲಿ ಈ ಪ್ರಕರಣವು ಸೇರುವುದಿಲ್ಲ ಎಂದು ಹೇಳಿದ್ದರು. ತೀರ್ಪಿನ ವೇಳೆ ನ್ಯಾಯಾಲಯವು ಅಪರಾಧಿಗಳನ್ನು ಅಲಪ್ಪುಝದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾನಸಿಕ ಸ್ಥಿರತೆ ಪರೀಕ್ಷೆಗೆ ಒಳಪಡಿಸುವಂತೆ ಕೂಡ ಹೇಳಿದೆ.

ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗವಹಿಸಿದ 8 ಆರೋಪಿಗಳು ಸೆಕ್ಷನ್ 302 (ಕೊಲೆ), 149 (ಕಾನೂನುಬಾಹಿರ ಸಭೆ), 449 (ಮರಣದಂಡನೆಗೆ ಒಳಪಡುವ ಅಪರಾಧವನ್ನು ಮಾಡಲು ಮನೆ ಅತಿಕ್ರಮಣ), 506 (ಅಪರಾಧ ಬೆದರಿಕೆ) ಮತ್ತು 341 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಅಪರಾಧ ಸಾಬೀತಾಗಿದೆ.

ಕೃತ್ಯದ ವೇಳೆ ಮಾರಕಾಯುಧಗಳೊಂದಿಗೆ ಬಿಜೆಪಿಯ ನಾಯಕನ ಮನೆಯ ಹೊರಗೆ ಕಾಯುತ್ತಿದ್ದ ಆರೋಪಿಗಳನ್ನು ಐಪಿಸಿಯ ಸೆಕ್ಷನ್ 302 ಆರ್/ಡಬ್ಲ್ಯೂ 149 ಮತ್ತು 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ. ಪ್ರಮುಖ ಸಂಚುಕೋರರಾದ ಜಾಕಿರ್ (13 ನೇ ಆರೋಪಿ), ಶಾಜಿ (14 ನೇ ಆರೋಪಿ), ಮತ್ತು ಶೆರ್ನಾಸ್ (15 ನೇ ಆರೋಪಿ) ಕ್ರಮವಾಗಿ ಐಪಿಸಿ ಸೆಕ್ಷನ್ 120 ಬಿ ಮತ್ತು 302ರಡಿಯಲ್ಲಿ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದೆ.

ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ವಕೀಲ ರಂಜೀತ್ ಅವರನ್ನು ಆಲಪ್ಪುಝದ ಪುರಸಭೆಯ ವೆಲ್ಲಕಿನಾರ್‌ನಲ್ಲಿರುವ ಅವರ ನಿವಾಸದಲ್ಲಿ ಆರೋಪಿಗಳು ಡಿಸೆಂಬರ್ 19, 2021ರಂದು ಬೆಳಿಗ್ಗೆ ಅವರ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೂ ಮೊದಲು ಮನ್ನಂಚೇರಿಯ ಕುಪ್ಪೆಝಂ ಜಂಕ್ಷನ್‌ನಲ್ಲಿ ಎಸ್‌ಡಿಪಿಐನ ರಾಜ್ಯ ಕಾರ್ಯದರ್ಶಿ ಕೆ ಎಸ್ ಶಾನ್ ಅವರನ್ನು ಸಂಘಪರಿವಾರದ ಕಾರ್ಯಕರ್ತರು ಹತ್ಯೆ ಮಾಡಿದ್ದರು. ಕೆ ಎಸ್ ಶಾನ್ ಹತ್ಯೆಗೆ ರಂಜೀತ್ ಹತ್ಯೆ ಪ್ರತಿಕಾರವೆಂದು ಹೇಳಾಗಿತ್ತು. ಶಾನ್ ಕೊಲೆ ಪ್ರಕರಣದ ವಿಚಾರಣೆ ಫೆಬ್ರವರಿ 2ರಂದು ಪ್ರಾರಂಭವಾಗಲಿದೆ. ಪೊಲೀಸರು ಮಾರ್ಚ್ 16, 2022 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರೂ, ವಿಶೇಷ ಅಭಿಯೋಜಕರನ್ನು ನೇಮಿಸುವಲ್ಲಿ ವಿಳಂಬವಾದ ಕಾರಣ ವಿಚಾರಣೆ ವಿಳಂಬವಾಗಿದೆ. ಮೊದಲೆರಡು ವಿಶೇಷ ಅಭಿಯೋಜಕರು ತಮ್ಮ ನೇಮಕಾತಿಯಿಂದ ಹಿಂದೆ ಸರಿದಿದ್ದರು. ಕಳೆದ ವಾರವಷ್ಟೇ ಆ ಹುದ್ದೆಗೆ ಅಡ್ವಕೇಟ್‌ ಪಿ ಪಿ ಹ್ಯಾರಿಸ್ ಅವರನ್ನು ನೇಮಿಸಲಾಗಿತ್ತು.

ಇದನ್ನು ಓದಿ; ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...