Homeಮುಖಪುಟಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

- Advertisement -
- Advertisement -

ಆಲಪ್ಪುಝದಲ್ಲಿ ನಡೆದಿದ್ದ ಬಿಜೆಪಿಯ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ 15 ಅಪರಾಧಿಗಳಿಗೆ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಕೇರಳದ ಇತಿಹಾಸದಲ್ಲಿ ಈ ರೀತಿ ಒಂದು ಪ್ರಕರಣದಲ್ಲಿ ಇಷ್ಟು ಮಂದಿ ಅಪರಾಧಿಗಳಿಗೆ ಯಾವುದೇ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿಲ್ಲ ಎಂದು onmanorama.com ವರದಿ ತಿಳಿಸಿದೆ.

ಡಿಸೆಂಬರ್ 19, 2021ರಂದು ನಡೆದಿದ್ದ ಬಿಜೆಪಿ ನಾಯಕ ಮತ್ತು ವಕೀಲ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೈಸಾಮ್, ಅಜ್ಮಲ್, ಅನೂಪ್, ಮೊಹಮ್ಮದ್ ಅಸ್ಲಾಂ, ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮನ್ಶಾದ್, ಜಸೀಬ್ ರಾಜಾ, ನವಾಸ್, ಸಮೀರ್, ನಝೀರ್, ಜಾಕೀರ್ ಹುಸೇನ್, ಶಾಜಿ ಪೂವತುಂಗಲ್ ಮತ್ತು ಶೆರ್ನಾಸ್ ಅಶ್ರಫ್ ಅವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.

ನ್ಯಾಯಾಧೀಶರಾದ ಶ್ರೀದೇವಿ ವಿ ಜಿ ಅವರು ಅಪರಾಧಿಗಳ ಮಾತುಗಳನ್ನು ಆಲಿಸಿದ್ದು, ಶಿಕ್ಷೆಯ ಪ್ರಮಾಣದ ಕುರಿತು ವಾದಗಳ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ಗರಿಷ್ಠ ಶಿಕ್ಷೆಯನ್ನು ನೀಡುವಂತೆ ನ್ಯಾಯಾಲಯವನ್ನು ಕೇಳಿಕೊಂಡಿದ್ದರು. ಆದರೆ ಆರೋಪಿಗಳ ಪರ ವಕೀಲರು ಮರಣದಂಡನೆಯನ್ನು ಸಮರ್ಥಿಸುವ ರೀತಿಯಲ್ಲಿನ ಅಪರೂಪದ ವರ್ಗದ ಅಡಿಯಲ್ಲಿ ಈ ಪ್ರಕರಣವು ಸೇರುವುದಿಲ್ಲ ಎಂದು ಹೇಳಿದ್ದರು. ತೀರ್ಪಿನ ವೇಳೆ ನ್ಯಾಯಾಲಯವು ಅಪರಾಧಿಗಳನ್ನು ಅಲಪ್ಪುಝದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾನಸಿಕ ಸ್ಥಿರತೆ ಪರೀಕ್ಷೆಗೆ ಒಳಪಡಿಸುವಂತೆ ಕೂಡ ಹೇಳಿದೆ.

ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗವಹಿಸಿದ 8 ಆರೋಪಿಗಳು ಸೆಕ್ಷನ್ 302 (ಕೊಲೆ), 149 (ಕಾನೂನುಬಾಹಿರ ಸಭೆ), 449 (ಮರಣದಂಡನೆಗೆ ಒಳಪಡುವ ಅಪರಾಧವನ್ನು ಮಾಡಲು ಮನೆ ಅತಿಕ್ರಮಣ), 506 (ಅಪರಾಧ ಬೆದರಿಕೆ) ಮತ್ತು 341 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಅಪರಾಧ ಸಾಬೀತಾಗಿದೆ.

ಕೃತ್ಯದ ವೇಳೆ ಮಾರಕಾಯುಧಗಳೊಂದಿಗೆ ಬಿಜೆಪಿಯ ನಾಯಕನ ಮನೆಯ ಹೊರಗೆ ಕಾಯುತ್ತಿದ್ದ ಆರೋಪಿಗಳನ್ನು ಐಪಿಸಿಯ ಸೆಕ್ಷನ್ 302 ಆರ್/ಡಬ್ಲ್ಯೂ 149 ಮತ್ತು 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ. ಪ್ರಮುಖ ಸಂಚುಕೋರರಾದ ಜಾಕಿರ್ (13 ನೇ ಆರೋಪಿ), ಶಾಜಿ (14 ನೇ ಆರೋಪಿ), ಮತ್ತು ಶೆರ್ನಾಸ್ (15 ನೇ ಆರೋಪಿ) ಕ್ರಮವಾಗಿ ಐಪಿಸಿ ಸೆಕ್ಷನ್ 120 ಬಿ ಮತ್ತು 302ರಡಿಯಲ್ಲಿ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದೆ.

ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ವಕೀಲ ರಂಜೀತ್ ಅವರನ್ನು ಆಲಪ್ಪುಝದ ಪುರಸಭೆಯ ವೆಲ್ಲಕಿನಾರ್‌ನಲ್ಲಿರುವ ಅವರ ನಿವಾಸದಲ್ಲಿ ಆರೋಪಿಗಳು ಡಿಸೆಂಬರ್ 19, 2021ರಂದು ಬೆಳಿಗ್ಗೆ ಅವರ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೂ ಮೊದಲು ಮನ್ನಂಚೇರಿಯ ಕುಪ್ಪೆಝಂ ಜಂಕ್ಷನ್‌ನಲ್ಲಿ ಎಸ್‌ಡಿಪಿಐನ ರಾಜ್ಯ ಕಾರ್ಯದರ್ಶಿ ಕೆ ಎಸ್ ಶಾನ್ ಅವರನ್ನು ಸಂಘಪರಿವಾರದ ಕಾರ್ಯಕರ್ತರು ಹತ್ಯೆ ಮಾಡಿದ್ದರು. ಕೆ ಎಸ್ ಶಾನ್ ಹತ್ಯೆಗೆ ರಂಜೀತ್ ಹತ್ಯೆ ಪ್ರತಿಕಾರವೆಂದು ಹೇಳಾಗಿತ್ತು. ಶಾನ್ ಕೊಲೆ ಪ್ರಕರಣದ ವಿಚಾರಣೆ ಫೆಬ್ರವರಿ 2ರಂದು ಪ್ರಾರಂಭವಾಗಲಿದೆ. ಪೊಲೀಸರು ಮಾರ್ಚ್ 16, 2022 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರೂ, ವಿಶೇಷ ಅಭಿಯೋಜಕರನ್ನು ನೇಮಿಸುವಲ್ಲಿ ವಿಳಂಬವಾದ ಕಾರಣ ವಿಚಾರಣೆ ವಿಳಂಬವಾಗಿದೆ. ಮೊದಲೆರಡು ವಿಶೇಷ ಅಭಿಯೋಜಕರು ತಮ್ಮ ನೇಮಕಾತಿಯಿಂದ ಹಿಂದೆ ಸರಿದಿದ್ದರು. ಕಳೆದ ವಾರವಷ್ಟೇ ಆ ಹುದ್ದೆಗೆ ಅಡ್ವಕೇಟ್‌ ಪಿ ಪಿ ಹ್ಯಾರಿಸ್ ಅವರನ್ನು ನೇಮಿಸಲಾಗಿತ್ತು.

ಇದನ್ನು ಓದಿ; ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...