Homeಮುಖಪುಟಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

- Advertisement -
- Advertisement -

ಆಲಪ್ಪುಝದಲ್ಲಿ ನಡೆದಿದ್ದ ಬಿಜೆಪಿಯ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ 15 ಅಪರಾಧಿಗಳಿಗೆ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಕೇರಳದ ಇತಿಹಾಸದಲ್ಲಿ ಈ ರೀತಿ ಒಂದು ಪ್ರಕರಣದಲ್ಲಿ ಇಷ್ಟು ಮಂದಿ ಅಪರಾಧಿಗಳಿಗೆ ಯಾವುದೇ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿಲ್ಲ ಎಂದು onmanorama.com ವರದಿ ತಿಳಿಸಿದೆ.

ಡಿಸೆಂಬರ್ 19, 2021ರಂದು ನಡೆದಿದ್ದ ಬಿಜೆಪಿ ನಾಯಕ ಮತ್ತು ವಕೀಲ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೈಸಾಮ್, ಅಜ್ಮಲ್, ಅನೂಪ್, ಮೊಹಮ್ಮದ್ ಅಸ್ಲಾಂ, ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮನ್ಶಾದ್, ಜಸೀಬ್ ರಾಜಾ, ನವಾಸ್, ಸಮೀರ್, ನಝೀರ್, ಜಾಕೀರ್ ಹುಸೇನ್, ಶಾಜಿ ಪೂವತುಂಗಲ್ ಮತ್ತು ಶೆರ್ನಾಸ್ ಅಶ್ರಫ್ ಅವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.

ನ್ಯಾಯಾಧೀಶರಾದ ಶ್ರೀದೇವಿ ವಿ ಜಿ ಅವರು ಅಪರಾಧಿಗಳ ಮಾತುಗಳನ್ನು ಆಲಿಸಿದ್ದು, ಶಿಕ್ಷೆಯ ಪ್ರಮಾಣದ ಕುರಿತು ವಾದಗಳ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ಗರಿಷ್ಠ ಶಿಕ್ಷೆಯನ್ನು ನೀಡುವಂತೆ ನ್ಯಾಯಾಲಯವನ್ನು ಕೇಳಿಕೊಂಡಿದ್ದರು. ಆದರೆ ಆರೋಪಿಗಳ ಪರ ವಕೀಲರು ಮರಣದಂಡನೆಯನ್ನು ಸಮರ್ಥಿಸುವ ರೀತಿಯಲ್ಲಿನ ಅಪರೂಪದ ವರ್ಗದ ಅಡಿಯಲ್ಲಿ ಈ ಪ್ರಕರಣವು ಸೇರುವುದಿಲ್ಲ ಎಂದು ಹೇಳಿದ್ದರು. ತೀರ್ಪಿನ ವೇಳೆ ನ್ಯಾಯಾಲಯವು ಅಪರಾಧಿಗಳನ್ನು ಅಲಪ್ಪುಝದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾನಸಿಕ ಸ್ಥಿರತೆ ಪರೀಕ್ಷೆಗೆ ಒಳಪಡಿಸುವಂತೆ ಕೂಡ ಹೇಳಿದೆ.

ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗವಹಿಸಿದ 8 ಆರೋಪಿಗಳು ಸೆಕ್ಷನ್ 302 (ಕೊಲೆ), 149 (ಕಾನೂನುಬಾಹಿರ ಸಭೆ), 449 (ಮರಣದಂಡನೆಗೆ ಒಳಪಡುವ ಅಪರಾಧವನ್ನು ಮಾಡಲು ಮನೆ ಅತಿಕ್ರಮಣ), 506 (ಅಪರಾಧ ಬೆದರಿಕೆ) ಮತ್ತು 341 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಅಪರಾಧ ಸಾಬೀತಾಗಿದೆ.

ಕೃತ್ಯದ ವೇಳೆ ಮಾರಕಾಯುಧಗಳೊಂದಿಗೆ ಬಿಜೆಪಿಯ ನಾಯಕನ ಮನೆಯ ಹೊರಗೆ ಕಾಯುತ್ತಿದ್ದ ಆರೋಪಿಗಳನ್ನು ಐಪಿಸಿಯ ಸೆಕ್ಷನ್ 302 ಆರ್/ಡಬ್ಲ್ಯೂ 149 ಮತ್ತು 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ. ಪ್ರಮುಖ ಸಂಚುಕೋರರಾದ ಜಾಕಿರ್ (13 ನೇ ಆರೋಪಿ), ಶಾಜಿ (14 ನೇ ಆರೋಪಿ), ಮತ್ತು ಶೆರ್ನಾಸ್ (15 ನೇ ಆರೋಪಿ) ಕ್ರಮವಾಗಿ ಐಪಿಸಿ ಸೆಕ್ಷನ್ 120 ಬಿ ಮತ್ತು 302ರಡಿಯಲ್ಲಿ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದೆ.

ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ವಕೀಲ ರಂಜೀತ್ ಅವರನ್ನು ಆಲಪ್ಪುಝದ ಪುರಸಭೆಯ ವೆಲ್ಲಕಿನಾರ್‌ನಲ್ಲಿರುವ ಅವರ ನಿವಾಸದಲ್ಲಿ ಆರೋಪಿಗಳು ಡಿಸೆಂಬರ್ 19, 2021ರಂದು ಬೆಳಿಗ್ಗೆ ಅವರ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೂ ಮೊದಲು ಮನ್ನಂಚೇರಿಯ ಕುಪ್ಪೆಝಂ ಜಂಕ್ಷನ್‌ನಲ್ಲಿ ಎಸ್‌ಡಿಪಿಐನ ರಾಜ್ಯ ಕಾರ್ಯದರ್ಶಿ ಕೆ ಎಸ್ ಶಾನ್ ಅವರನ್ನು ಸಂಘಪರಿವಾರದ ಕಾರ್ಯಕರ್ತರು ಹತ್ಯೆ ಮಾಡಿದ್ದರು. ಕೆ ಎಸ್ ಶಾನ್ ಹತ್ಯೆಗೆ ರಂಜೀತ್ ಹತ್ಯೆ ಪ್ರತಿಕಾರವೆಂದು ಹೇಳಾಗಿತ್ತು. ಶಾನ್ ಕೊಲೆ ಪ್ರಕರಣದ ವಿಚಾರಣೆ ಫೆಬ್ರವರಿ 2ರಂದು ಪ್ರಾರಂಭವಾಗಲಿದೆ. ಪೊಲೀಸರು ಮಾರ್ಚ್ 16, 2022 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರೂ, ವಿಶೇಷ ಅಭಿಯೋಜಕರನ್ನು ನೇಮಿಸುವಲ್ಲಿ ವಿಳಂಬವಾದ ಕಾರಣ ವಿಚಾರಣೆ ವಿಳಂಬವಾಗಿದೆ. ಮೊದಲೆರಡು ವಿಶೇಷ ಅಭಿಯೋಜಕರು ತಮ್ಮ ನೇಮಕಾತಿಯಿಂದ ಹಿಂದೆ ಸರಿದಿದ್ದರು. ಕಳೆದ ವಾರವಷ್ಟೇ ಆ ಹುದ್ದೆಗೆ ಅಡ್ವಕೇಟ್‌ ಪಿ ಪಿ ಹ್ಯಾರಿಸ್ ಅವರನ್ನು ನೇಮಿಸಲಾಗಿತ್ತು.

ಇದನ್ನು ಓದಿ; ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...