Homeಮುಖಪುಟಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

ಕೇರಳ: ರಂಜಿತ್‌ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

- Advertisement -
- Advertisement -

ಆಲಪ್ಪುಝದಲ್ಲಿ ನಡೆದಿದ್ದ ಬಿಜೆಪಿಯ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ 15 ಅಪರಾಧಿಗಳಿಗೆ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ್ದು, ಕೇರಳದ ಇತಿಹಾಸದಲ್ಲಿ ಈ ರೀತಿ ಒಂದು ಪ್ರಕರಣದಲ್ಲಿ ಇಷ್ಟು ಮಂದಿ ಅಪರಾಧಿಗಳಿಗೆ ಯಾವುದೇ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿಲ್ಲ ಎಂದು onmanorama.com ವರದಿ ತಿಳಿಸಿದೆ.

ಡಿಸೆಂಬರ್ 19, 2021ರಂದು ನಡೆದಿದ್ದ ಬಿಜೆಪಿ ನಾಯಕ ಮತ್ತು ವಕೀಲ ರಂಜೀತ್ ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೈಸಾಮ್, ಅಜ್ಮಲ್, ಅನೂಪ್, ಮೊಹಮ್ಮದ್ ಅಸ್ಲಾಂ, ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮನ್ಶಾದ್, ಜಸೀಬ್ ರಾಜಾ, ನವಾಸ್, ಸಮೀರ್, ನಝೀರ್, ಜಾಕೀರ್ ಹುಸೇನ್, ಶಾಜಿ ಪೂವತುಂಗಲ್ ಮತ್ತು ಶೆರ್ನಾಸ್ ಅಶ್ರಫ್ ಅವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.

ನ್ಯಾಯಾಧೀಶರಾದ ಶ್ರೀದೇವಿ ವಿ ಜಿ ಅವರು ಅಪರಾಧಿಗಳ ಮಾತುಗಳನ್ನು ಆಲಿಸಿದ್ದು, ಶಿಕ್ಷೆಯ ಪ್ರಮಾಣದ ಕುರಿತು ವಾದಗಳ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ಗರಿಷ್ಠ ಶಿಕ್ಷೆಯನ್ನು ನೀಡುವಂತೆ ನ್ಯಾಯಾಲಯವನ್ನು ಕೇಳಿಕೊಂಡಿದ್ದರು. ಆದರೆ ಆರೋಪಿಗಳ ಪರ ವಕೀಲರು ಮರಣದಂಡನೆಯನ್ನು ಸಮರ್ಥಿಸುವ ರೀತಿಯಲ್ಲಿನ ಅಪರೂಪದ ವರ್ಗದ ಅಡಿಯಲ್ಲಿ ಈ ಪ್ರಕರಣವು ಸೇರುವುದಿಲ್ಲ ಎಂದು ಹೇಳಿದ್ದರು. ತೀರ್ಪಿನ ವೇಳೆ ನ್ಯಾಯಾಲಯವು ಅಪರಾಧಿಗಳನ್ನು ಅಲಪ್ಪುಝದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾನಸಿಕ ಸ್ಥಿರತೆ ಪರೀಕ್ಷೆಗೆ ಒಳಪಡಿಸುವಂತೆ ಕೂಡ ಹೇಳಿದೆ.

ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗವಹಿಸಿದ 8 ಆರೋಪಿಗಳು ಸೆಕ್ಷನ್ 302 (ಕೊಲೆ), 149 (ಕಾನೂನುಬಾಹಿರ ಸಭೆ), 449 (ಮರಣದಂಡನೆಗೆ ಒಳಪಡುವ ಅಪರಾಧವನ್ನು ಮಾಡಲು ಮನೆ ಅತಿಕ್ರಮಣ), 506 (ಅಪರಾಧ ಬೆದರಿಕೆ) ಮತ್ತು 341 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಅಪರಾಧ ಸಾಬೀತಾಗಿದೆ.

ಕೃತ್ಯದ ವೇಳೆ ಮಾರಕಾಯುಧಗಳೊಂದಿಗೆ ಬಿಜೆಪಿಯ ನಾಯಕನ ಮನೆಯ ಹೊರಗೆ ಕಾಯುತ್ತಿದ್ದ ಆರೋಪಿಗಳನ್ನು ಐಪಿಸಿಯ ಸೆಕ್ಷನ್ 302 ಆರ್/ಡಬ್ಲ್ಯೂ 149 ಮತ್ತು 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ದೋಷಿ ಎಂದು ಘೋಷಿಸಲಾಗಿದೆ. ಪ್ರಮುಖ ಸಂಚುಕೋರರಾದ ಜಾಕಿರ್ (13 ನೇ ಆರೋಪಿ), ಶಾಜಿ (14 ನೇ ಆರೋಪಿ), ಮತ್ತು ಶೆರ್ನಾಸ್ (15 ನೇ ಆರೋಪಿ) ಕ್ರಮವಾಗಿ ಐಪಿಸಿ ಸೆಕ್ಷನ್ 120 ಬಿ ಮತ್ತು 302ರಡಿಯಲ್ಲಿ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದೆ.

ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ವಕೀಲ ರಂಜೀತ್ ಅವರನ್ನು ಆಲಪ್ಪುಝದ ಪುರಸಭೆಯ ವೆಲ್ಲಕಿನಾರ್‌ನಲ್ಲಿರುವ ಅವರ ನಿವಾಸದಲ್ಲಿ ಆರೋಪಿಗಳು ಡಿಸೆಂಬರ್ 19, 2021ರಂದು ಬೆಳಿಗ್ಗೆ ಅವರ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೂ ಮೊದಲು ಮನ್ನಂಚೇರಿಯ ಕುಪ್ಪೆಝಂ ಜಂಕ್ಷನ್‌ನಲ್ಲಿ ಎಸ್‌ಡಿಪಿಐನ ರಾಜ್ಯ ಕಾರ್ಯದರ್ಶಿ ಕೆ ಎಸ್ ಶಾನ್ ಅವರನ್ನು ಸಂಘಪರಿವಾರದ ಕಾರ್ಯಕರ್ತರು ಹತ್ಯೆ ಮಾಡಿದ್ದರು. ಕೆ ಎಸ್ ಶಾನ್ ಹತ್ಯೆಗೆ ರಂಜೀತ್ ಹತ್ಯೆ ಪ್ರತಿಕಾರವೆಂದು ಹೇಳಾಗಿತ್ತು. ಶಾನ್ ಕೊಲೆ ಪ್ರಕರಣದ ವಿಚಾರಣೆ ಫೆಬ್ರವರಿ 2ರಂದು ಪ್ರಾರಂಭವಾಗಲಿದೆ. ಪೊಲೀಸರು ಮಾರ್ಚ್ 16, 2022 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರೂ, ವಿಶೇಷ ಅಭಿಯೋಜಕರನ್ನು ನೇಮಿಸುವಲ್ಲಿ ವಿಳಂಬವಾದ ಕಾರಣ ವಿಚಾರಣೆ ವಿಳಂಬವಾಗಿದೆ. ಮೊದಲೆರಡು ವಿಶೇಷ ಅಭಿಯೋಜಕರು ತಮ್ಮ ನೇಮಕಾತಿಯಿಂದ ಹಿಂದೆ ಸರಿದಿದ್ದರು. ಕಳೆದ ವಾರವಷ್ಟೇ ಆ ಹುದ್ದೆಗೆ ಅಡ್ವಕೇಟ್‌ ಪಿ ಪಿ ಹ್ಯಾರಿಸ್ ಅವರನ್ನು ನೇಮಿಸಲಾಗಿತ್ತು.

ಇದನ್ನು ಓದಿ; ‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...