Homeಅಂತರಾಷ್ಟ್ರೀಯಕ್ಯಾಪಿಟಲ್ ಮೇಲೆ ದಾಳಿ: ಟ್ರಂಪ್ ಮತ್ತು ಬಲಪಂಥೀಯ ಗುಂಪುಗಳ ವಿರುದ್ಧ ಮೊಕದ್ದಮೆ ಹೂಡಿದ ಪೊಲೀಸರು

ಕ್ಯಾಪಿಟಲ್ ಮೇಲೆ ದಾಳಿ: ಟ್ರಂಪ್ ಮತ್ತು ಬಲಪಂಥೀಯ ಗುಂಪುಗಳ ವಿರುದ್ಧ ಮೊಕದ್ದಮೆ ಹೂಡಿದ ಪೊಲೀಸರು

- Advertisement -
- Advertisement -

ಜನವರಿ 6 ರಂದು ಅಮೆರಿಕದ ಕ್ಯಾಪಿಟಲ್‌‌ನಲ್ಲಿ ನಡೆದ ಗಲಭೆಯ ಸಂದರ್ಭ ದಾಳಿಗೊಳಗಾದ ಪೊಲೀಸ್ ಅಧಿಕಾರಿಗಳು, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪರವಾಗಿರುವ ತೀವ್ರವಾದಿ ಗುಂಪುಗಳಾದ ಪ್ರೌಡ್ ಬಾಯ್ಸ್ ಮತ್ತು ಓತ್ ಕೀಪರ್ಸ್ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.

ಟ್ರಂಪ್‌‌ ಅವರ ಬೆಂಬಲಿಗ, ರಾಜಕೀಯ ಸಹಾಯಕರಾಗಿರುವ ರೋಜರ್ ಸ್ಟೋನ್ ಮತ್ತು ಬಲಪಂಥೀಯ ತೀವ್ರಗಾಮಿ ಗುಂಪುಗಳ ಸದಸ್ಯರು, ನವೆಂಬರ್ 2020 ರ ಚುನಾವಣೆಯಲ್ಲಿ ಜೋ ಬಿಡೆನ್ ಅವರ ವಿಜಯವನ್ನು ಅಧೀಕೃತಗೊಳಿಸುವ ಕಾರ್ಯಕ್ರಮವನ್ನು ಅಡ್ಡಿಪಡಿಸಲು, ಉದ್ದೇಶಪೂರ್ವಕವಾಗಿ ಹಿಂಸಾತ್ಮಕ ಗುಂಪನ್ನು ಕಳುಹಿಸಿದ್ದಾರೆ ಎಂದು, ಪ್ರಕರಣ ದಾಖಲಿಸಿರುವ ಏಳು ಪೊಲೀಸ್ ಅಧಿಕಾರಿಗಳು ಆರೋಪಿಸುತ್ತಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಇದನ್ನೂ ಓದಿ: 2023ರವರೆಗೆ ಟ್ರಂಪ್‌ ಖಾತೆ ಬ್ಯಾನ್‌ ವಿಸ್ತರಿಸಿದ ಫೇಸ್‌ಬುಕ್: ಅವಮಾನವೆಂದ ಟ್ರಂಪ್

2016 ರ ಚುನಾವಣಾ ಪ್ರಚಾರದಲ್ಲಿ ರಷ್ಯಾದ ಹಸ್ತಕ್ಷೇಪಕ್ಕೆ ಸಂಬಂಧಿಸಿದ ಅಪರಾಧಗಳಿಗಾಗಿ ರೋಜರ್ ಸ್ಟೋನ್ ಜೈಲಿನಲ್ಲಿದ್ದರು. ಡೊನಾಲ್ಡ್ ಟ್ರಂಪ್ ಅವರ ಅಧಿಕಾರಾವಧಿ ಮುಗಿಯುವುದಕ್ಕಿಂತ ಮುಂಚೆ ಅವರಿಗೆ ಕ್ಷಮಾದಾನ ನೀಡಿ ಬಿಡುಗಡೆಗೊಳಿಸಲಾಗಿತ್ತು.

ನವೆಂಬರ್ 2020 ರ ಚುನಾವಣೆಯಲ್ಲಿ ಜೋ ಬಿಡೆನ್ ಅವರ ವಿಜಯವನ್ನು ಅಧೀಕೃತಗೊಳಿಸುವ ಕಾರ್ಯಕ್ರಮವನ್ನು ಅಡ್ಡಿಪಡಿಸಲು, ಉದ್ದೇಶಪೂರ್ವಕವಾಗಿ ಹಿಂಸಾತ್ಮಕ ಗುಂಪನ್ನು ಕಳುಹಿಸುವಲ್ಲಿ ಟ್ರಂಪ್ ಕೂಡಾ ಕೆಲಸ ಮಾಡಿದ್ದಾರೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿದೆ. ಮಾಜಿ ಅಧ್ಯಕ್ಷರು ಅಧಿಕಾರದಲ್ಲಿ ಉಳಿಯಲು ಕಾನೂನುಬಾಹಿರ ಪ್ರಯತ್ನ ಮಾಡಿದ್ದು, ಆಂತರಿಕವಾಗಿ ಭಯೋತ್ಪಾದನೆಯ ಕೃತ್ಯಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಅಮೆರಿಕಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ವಂಚನೆ ನಡೆದಿದೆ ಎಂದು ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮತ್ತು ಅವರ ಪಕ್ಷವು ಪದೇ ಪದೇ ಆರೋಪಿಸಿದ್ದವು. ಇದರ ನಂತರ ಜೊ ಬೈಡನ್ ಅಲ್ಲಿಯ ಅಧ್ಯಕ್ಷನಾಗಿ ಆಯ್ಕೆಯಾದರು. ಈ ಸಮಯದಲ್ಲಿ ಅವರ ವಿಜಯವನ್ನು ಅಧೀಕೃತವಾಗಿ ಘೋಷಿಸುವ ಕಾರ್ಯಕ್ರಮದಲ್ಲಿ ಟ್ರಂಪ್ ಬೆಂಬಲಿಗರು ಅಲ್ಲಿನ ಕ್ಯಾಪಿಟಲ್‌ಗೆ ದಾಳಿ ನಡೆಸಿದ್ದರು.

ಇದನ್ನೂ ಓದಿ: ಟ್ರಂಪ್ ಆಡಳಿತದಲ್ಲಿ ಏಷ್ಯನ್ ಅಮೆರಿಕನ್ನರ ವಿರುದ್ಧ ದ್ವೇಷ ಹರಡಲಾಗಿತ್ತು: ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...