Homeಅಂತರಾಷ್ಟ್ರೀಯಕ್ಯಾಪಿಟಲ್ ಮೇಲೆ ದಾಳಿ: ಟ್ರಂಪ್ ಮತ್ತು ಬಲಪಂಥೀಯ ಗುಂಪುಗಳ ವಿರುದ್ಧ ಮೊಕದ್ದಮೆ ಹೂಡಿದ ಪೊಲೀಸರು

ಕ್ಯಾಪಿಟಲ್ ಮೇಲೆ ದಾಳಿ: ಟ್ರಂಪ್ ಮತ್ತು ಬಲಪಂಥೀಯ ಗುಂಪುಗಳ ವಿರುದ್ಧ ಮೊಕದ್ದಮೆ ಹೂಡಿದ ಪೊಲೀಸರು

- Advertisement -
- Advertisement -

ಜನವರಿ 6 ರಂದು ಅಮೆರಿಕದ ಕ್ಯಾಪಿಟಲ್‌‌ನಲ್ಲಿ ನಡೆದ ಗಲಭೆಯ ಸಂದರ್ಭ ದಾಳಿಗೊಳಗಾದ ಪೊಲೀಸ್ ಅಧಿಕಾರಿಗಳು, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪರವಾಗಿರುವ ತೀವ್ರವಾದಿ ಗುಂಪುಗಳಾದ ಪ್ರೌಡ್ ಬಾಯ್ಸ್ ಮತ್ತು ಓತ್ ಕೀಪರ್ಸ್ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.

ಟ್ರಂಪ್‌‌ ಅವರ ಬೆಂಬಲಿಗ, ರಾಜಕೀಯ ಸಹಾಯಕರಾಗಿರುವ ರೋಜರ್ ಸ್ಟೋನ್ ಮತ್ತು ಬಲಪಂಥೀಯ ತೀವ್ರಗಾಮಿ ಗುಂಪುಗಳ ಸದಸ್ಯರು, ನವೆಂಬರ್ 2020 ರ ಚುನಾವಣೆಯಲ್ಲಿ ಜೋ ಬಿಡೆನ್ ಅವರ ವಿಜಯವನ್ನು ಅಧೀಕೃತಗೊಳಿಸುವ ಕಾರ್ಯಕ್ರಮವನ್ನು ಅಡ್ಡಿಪಡಿಸಲು, ಉದ್ದೇಶಪೂರ್ವಕವಾಗಿ ಹಿಂಸಾತ್ಮಕ ಗುಂಪನ್ನು ಕಳುಹಿಸಿದ್ದಾರೆ ಎಂದು, ಪ್ರಕರಣ ದಾಖಲಿಸಿರುವ ಏಳು ಪೊಲೀಸ್ ಅಧಿಕಾರಿಗಳು ಆರೋಪಿಸುತ್ತಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಇದನ್ನೂ ಓದಿ: 2023ರವರೆಗೆ ಟ್ರಂಪ್‌ ಖಾತೆ ಬ್ಯಾನ್‌ ವಿಸ್ತರಿಸಿದ ಫೇಸ್‌ಬುಕ್: ಅವಮಾನವೆಂದ ಟ್ರಂಪ್

2016 ರ ಚುನಾವಣಾ ಪ್ರಚಾರದಲ್ಲಿ ರಷ್ಯಾದ ಹಸ್ತಕ್ಷೇಪಕ್ಕೆ ಸಂಬಂಧಿಸಿದ ಅಪರಾಧಗಳಿಗಾಗಿ ರೋಜರ್ ಸ್ಟೋನ್ ಜೈಲಿನಲ್ಲಿದ್ದರು. ಡೊನಾಲ್ಡ್ ಟ್ರಂಪ್ ಅವರ ಅಧಿಕಾರಾವಧಿ ಮುಗಿಯುವುದಕ್ಕಿಂತ ಮುಂಚೆ ಅವರಿಗೆ ಕ್ಷಮಾದಾನ ನೀಡಿ ಬಿಡುಗಡೆಗೊಳಿಸಲಾಗಿತ್ತು.

ನವೆಂಬರ್ 2020 ರ ಚುನಾವಣೆಯಲ್ಲಿ ಜೋ ಬಿಡೆನ್ ಅವರ ವಿಜಯವನ್ನು ಅಧೀಕೃತಗೊಳಿಸುವ ಕಾರ್ಯಕ್ರಮವನ್ನು ಅಡ್ಡಿಪಡಿಸಲು, ಉದ್ದೇಶಪೂರ್ವಕವಾಗಿ ಹಿಂಸಾತ್ಮಕ ಗುಂಪನ್ನು ಕಳುಹಿಸುವಲ್ಲಿ ಟ್ರಂಪ್ ಕೂಡಾ ಕೆಲಸ ಮಾಡಿದ್ದಾರೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿದೆ. ಮಾಜಿ ಅಧ್ಯಕ್ಷರು ಅಧಿಕಾರದಲ್ಲಿ ಉಳಿಯಲು ಕಾನೂನುಬಾಹಿರ ಪ್ರಯತ್ನ ಮಾಡಿದ್ದು, ಆಂತರಿಕವಾಗಿ ಭಯೋತ್ಪಾದನೆಯ ಕೃತ್ಯಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಅಮೆರಿಕಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ವಂಚನೆ ನಡೆದಿದೆ ಎಂದು ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮತ್ತು ಅವರ ಪಕ್ಷವು ಪದೇ ಪದೇ ಆರೋಪಿಸಿದ್ದವು. ಇದರ ನಂತರ ಜೊ ಬೈಡನ್ ಅಲ್ಲಿಯ ಅಧ್ಯಕ್ಷನಾಗಿ ಆಯ್ಕೆಯಾದರು. ಈ ಸಮಯದಲ್ಲಿ ಅವರ ವಿಜಯವನ್ನು ಅಧೀಕೃತವಾಗಿ ಘೋಷಿಸುವ ಕಾರ್ಯಕ್ರಮದಲ್ಲಿ ಟ್ರಂಪ್ ಬೆಂಬಲಿಗರು ಅಲ್ಲಿನ ಕ್ಯಾಪಿಟಲ್‌ಗೆ ದಾಳಿ ನಡೆಸಿದ್ದರು.

ಇದನ್ನೂ ಓದಿ: ಟ್ರಂಪ್ ಆಡಳಿತದಲ್ಲಿ ಏಷ್ಯನ್ ಅಮೆರಿಕನ್ನರ ವಿರುದ್ಧ ದ್ವೇಷ ಹರಡಲಾಗಿತ್ತು: ಜೋ ಬೈಡೆನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...