Homeಮುಖಪುಟಪಂಜಾಬಿನಲ್ಲಿ ಕಾಂಗ್ರೆಸ್‌ನ ಅನಿರೀಕ್ಷಿತ ಆಯ್ಕೆಯ ಹಿಂದಿನ ಕಾರಣಗಳೇನು?

ಪಂಜಾಬಿನಲ್ಲಿ ಕಾಂಗ್ರೆಸ್‌ನ ಅನಿರೀಕ್ಷಿತ ಆಯ್ಕೆಯ ಹಿಂದಿನ ಕಾರಣಗಳೇನು?

- Advertisement -
- Advertisement -

ಕಳೆದ ಶನಿವಾರ ಮತ್ತು ಭಾನುವಾರದೊಳಗೆ, ಸುಮಾರು 24 ಗಂಟೆಯೊಳಗೆ ಪಂಜಾಬಿನ ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆಯಲ್ಲಿ ಒಂದು ಬೃಹತ್ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕಾರಣವಾಗಿದೆ. ಅದು ಕೇವಲ ರಾಜಮನೆತನದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ರಾಜೀನಾಮೆ ನೀಡಲು ಒತ್ತಾಯ ಮಾಡಿದ್ದಷ್ಟೇ ಅಲ್ಲ, ಮುಖ್ಯಮಂತ್ರಿ ಸ್ಥಾನಕ್ಕೆ ಅನಿರೀಕ್ಷಿತ ಸಾಮಾನ್ಯ ವ್ಯಕ್ತಿ, ಒಬ್ಬ ದಲಿತ ಸಿಖ್ ಅನ್ನು ತಂದಿದೆ.

ಪಂಜಾಬಿನ ಬಗ್ಗೆ ಒಂದು ಪ್ರಶ್ನೆಯನ್ನು ಪದೇಪದೇ ಕೇಳಲಾಗುತ್ತದೆ; 56% ಸಿಖ್ಖರನ್ನು ಹೊಂದಿದ ರಾಜ್ಯ, ಕಾಂಗ್ರೆಸ್ ಆಳ್ವಿಕೆಯಲ್ಲಿ ಆಪರೇಷನ್ ಬ್ಲೂಸ್ಟಾರ್ ಮತ್ತು ಸಿಖ್ ವಿರೋಧಿ ಮಾರಣಹೋಮವನ್ನು ನೋಡಿದ ನಂತರವೂ ಕಾಂಗ್ರೆಸ್‌ನಲ್ಲಿ ಹೇಗೆ ನಂಬಿಕೆಯನ್ನು ಪುನರ್‌ಸ್ಥಾಪಿಸಿತು? ಮೂರು ಉದಾಹರಣೆಗಳ ಮೂಲಕ ನೋಡುವ. ಮೊದಲನೆಯದು, ಕ್ಯಾಪ್ಟನ್ ಅಮರಿಂದರ್ ಆಪರೇಷನ್ ಬ್ಲೂ ಸ್ಟಾರ್ ನಂತರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಎರಡನೆಯದು, ತನ್ನ ಕಳೆದ ಅವಧಿಯಲ್ಲಿ ಮಾಡಿದ ದೊಡ್ಡ ಸಾಧನೆ ಪಂಜಾಬ್ ಟರ್ಮಿನೇಷನ್ ಆಫ್ ಅಗ್ರಿಮೆಂಟ್ ಆಕ್ಟ್, 2004, ಅದರಿಂದ ಹರಿಯಾಣ ಮತ್ತು ರಾಜಸ್ಥಾನದೊಂದಿಗೆ ನದಿನೀರನ್ನು ಹಂಚಿಕೊಳ್ಳುವುದನ್ನು ರದ್ದುಗೊಳಿಸಲಾಯಿತು. ಕಾಂಗ್ರೆಸ್‌ನ ಹೈಕಮಾಂಡ್ ಮತ್ತು ಆಗಿನ ಪ್ರಧಾನಿಗೆ ಈ ನಡೆ ಸಮ್ಮತಿ ಇರಲಿಲ್ಲ.

ಆದರೆ ಕ್ಯಾಪ್ಟನ್ ಅದನ್ನು ಸಾಧಿಸಿ ಒಂದು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕಿದ್ದರು. ಮೂರನೆಯದ್ದು, ಈ ಅವಧಿಗೆ ಮುನ್ನ, ಅವರ ಅಧಿಕೃತ ಜೀವನಚರಿತ್ರೆ ಹೇಳುವುದೇನೆಂದರೆ, ಅವರನ್ನು ರಾಜ್ಯದ ಮುಖ್ಯಸ್ಥನನ್ನಾಗಿಸದಿದ್ದರೆ, ಅವರು ಕಾಂಗ್ರೆಸ್‌ಅನ್ನು ತ್ಯಜಿಸಿ ತಮ್ಮದೇ ಪಕ್ಷವನ್ನು ಸ್ಥಾಪಿಸಿ ಚುನಾವಣೆಯನ್ನು ಎದುರಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು. ಈ ಉದಾಹರಣೆಗಳು ಹೇಳುವುದೇನೆಂದರೆ, ಪಂಜಾಬ್ ಕಾಂಗ್ರೆಸ್‌ನ ಒಳಗಿದ್ದ ಒಬ್ಬ ರೆಬೆಲ್ ನಾಯಕನನ್ನು ಒಪ್ಪಿಕೊಂಡಿತೇ ಹೊರತು ಕಾಂಗ್ರೆಸ್ಸನ್ನಲ್ಲ ಎಂದು. ಕ್ಯಾಪ್ಟನ್‌ನ ಮುಖ್ಯ ಹೆಗ್ಗಳಿಕೆಯೇನೆಂದರೆ ಅವರು ದೆಹಲಿಯ ಹೈಕಮಾಂಡ್ ವಿರುದ್ಧ ನಿಂತರು, ಹಾಗಾಗಿ ಪಂಜಾಬಿನ ಹಿತಾಸಕ್ತಿಗಳನ್ನು ಕಾಪಾಡುವರು ಎಂಬ ನಂಬಿಕೆ ಬಿತ್ತಿದರು. ಇದು 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅರುಣ್ ಜೇಟ್ಲಿ ಅವರ ವಿರುದ್ಧದ ಭಾರಿ ಅಂತರದ ಗೆಲವಿನಲ್ಲಿ ಕಾಣಿಸಿತು.

PC : Swarajya (ಕ್ಯಾಪ್ಟನ್ ಅಮರಿಂದರ್ ಸಿಂಗ್)

ಕ್ಯಾಪ್ಟನ್‌ನ ನಾಯಕತ್ವದಲ್ಲಿ 2017ರಲ್ಲಿ ಅಧಿಕಾರಕ್ಕಾಗಿ ಬರಲು ಪ್ರಯತ್ನಿಸುತ್ತಿದ್ದಾಗ, ಪಂಜಾಬಿನಲ್ಲಿ ಎರಡು ವಿಷಯಗಳು ಪ್ರಾಮುಖ್ಯತೆ ಪಡೆದಿದ್ದವು: ಮೊದಲನೆಯದು, ಪವಿತ್ರ ಪುಸ್ತಕಗಳನ್ನು ಅಪವಿತ್ರಗೊಳಿಸಿದ್ದು, ಗ್ರಂಥ್ ಸಾಹಿಬ್‌ನ 200ಕ್ಕೂ ಹೆಚ್ಚು ಪ್ರತಿಗಳು, ಗುಟಕಾ ಸಾಹಿಬ್, ಹೋಲಿ ಕುರಾನ್, ರಾಮಾಯಣ, ಗುರುದ್ವಾರಗಳನ್ನು ಅಪವಿತ್ರಗೊಳಿಸಲಾಗಿತ್ತು. ಎರಡನೆಯದು ಡ್ರಗ್ಸ್; ಇಡೀ ಪಂಜಾಬ್ ಮಾದಕವಸ್ತುಗಳ ಕಳ್ಳಸಾಗಾಣಿಕೆಯ ಹಿಡಿತದಲ್ಲಿ ಸಿಲುಕಿಕೊಂಡಿದೆ ಎಂಬ ಪರಿಕಲ್ಪನೆ, ಇದು ರಾಹುಲ್ ಗಾಂಧಿಯ ತಪ್ಪಾದ ಅಂಕಿಅಂಶಗಳು (10ರಲ್ಲಿ 7 ಯುವಜನರು ಮಾದಕವ್ಯಸನಿಗಳಾಗಿದ್ದಾರೆ ಎಂದಿದ್ದರು) ಮತ್ತು ಉಡ್ತಾ ಪಂಜಾಬ್‌ನಂತಹ ಸಿನೆಮಾಗಳ ಮೇಲೆ ಆಧರಿಸಿ ಈ ರೀತಿಯ ಅಭಿಪ್ರಾಯ ಸೃಷ್ಟಿಸಲಾಗಿತ್ತು. ಆಮ್ ಆದ್ಮಿ ಪಾರ್ಟಿಯ ಪ್ರಯತ್ನಗಳನ್ನು ವಿಫಲಗೊಳಿಸಲು, 2015ರ ಡಿಸೆಂಬರ್ 15ರಂದು ಕ್ಯಾಪ್ಟನ್ ಸಿಖ್ಖರ ಪವಿತ್ರ ಗ್ರಂಥ ಗುಟ್ಕಾ ಸಾಹಿಬ್ ಮೇಲೆ ಕೈಇಟ್ಟು ಆಣೆ ಮಾಡಿದರು, ಚುನಾಯಿತರಾದ ನಾಲ್ಕು ವಾರಗಳಲ್ಲಿ ’ಮಾದಕವಸ್ತುಗಳ ಪಿಡುಗಿನ ಬೆನ್ನು ಮುರಿಯಲಾಗುವುದೆಂದು’, ಸಾರ್ವಜನಿಕ ಕಛೇರಿಗಳಲ್ಲಿ ಭ್ರಷ್ಟಾಚಾರ ಕೊನೆಗಾಣಿಸುವುದಾಗಿ ಹಾಗೂ ನಿರುದ್ಯೋಗಿ ಯುವಜನರಿಗೆ ಉದ್ಯೋಗ ಸೃಷ್ಟಿಸುವುದಾಗಿ ಪ್ರಮಾಣ ಮಾಡಿದರು.

ಈ ಭರವಸೆಗಳನ್ನು ಈಡೇರಿಸುವುದು ಕಷ್ಟವಾಗಿತ್ತು. ಎಷ್ಟು ಕಷ್ಟ ಎಂದರೆ, ವಾಸ್ತವದಲ್ಲಿ ಅದು ಅಸಾಧ್ಯವಾಗಿತ್ತು. ಆದರೂ ಕ್ಯಾಪ್ಟನ್ ಅದನ್ನು ಹೇಳಿದ್ದರಿಂದ, ಪವಿತ್ರ ಗ್ರಂಥದ ಮೇಲೆ ಆಣೆ ಮಾಡಿದ್ದರಿಂದ, ಜನರು ಅದನ್ನು ನಂಬಿದರು. ಚುನಾವಣಾ ಪ್ರಚಾರದಲ್ಲಿ ಎಲ್ಲರಿಗೂ ಸಾಲ ಮನ್ನಾ ಮಾಡುವುದಾಗಿ ಆಶ್ವಾಸನೆ ನೀಡಿದರು, ಮರಳು, ಲಿಕರ್ ಮತ್ತು ಸಾರಿಗೆ ಮಾಫಿಯಾದ ವಿರುದ್ಧ ಮಾತನಾಡಿದರು ಹಾಗೂ ತನ್ನ ಕೊನೆಯ ಅವಧಿಯ ಹೆಸರಿನಲ್ಲಿ ಮತಯಾಚಿಸಿದರು. ಪಂಜಾಬ್‌ಅನ್ನು ಮತ್ತೆ ಪ್ರಗತಿಯ ಪಥದಲ್ಲಿ ಕೊಂಡೊಯ್ಯುವ ಒಂದು ಭಾರಿ ಪರಂಪರೆಯನ್ನು ಸೃಷ್ಟಿಸಲು ತಮ್ಮನ್ನು ಅಧಿಕಾರಕ್ಕೆ ತರಬೇಕು ಎಂದು ಮತಯಾಚಿಸಿದರು.

ಹಾಗಾಗಿ, ಅಧಿಕಾರಕ್ಕೆ ಬಂದ ಮೇಲೆ ತನ್ನ ಆಶ್ವಾಸನೆಗಳನ್ನು ಪೂರ್ಣಗೊಳಿಸುತ್ತಾರೆ ಎಂದು ಜನರು ಅಪೇಕ್ಷಿಸಿದರು. ಆದರೆ ಅವರು ಅದನ್ನು ಮಾಡಲಿಲ್ಲ. ಸಾಮಾನ್ಯ ಜನರ ವಿಷಯಗಳಲ್ಲಿ ರಾಜರಿಗೆ ಅನಾಸಕ್ತಿ ಇದ್ದರೆ ಹೇಗಿರುತ್ತೋ, ಅದನ್ನು ಕ್ಯಾಪ್ಟನ್ ತಮ್ಮ ಆಳ್ವಿಕೆಯಲ್ಲಿ ತೋರಿಸಿದರು. ಕ್ಯಾಪ್ಟನ್‌ನ ವಿಫಲತೆಗಳ ಮೊದಲ ಸಂಕೇತ ಕಾಣಿಸಿಕೊಂಡಿದ್ದು ಕೃಷಿ ಸಾಲ ಮನ್ನಾದ ವಿಷಯದಲ್ಲಿ. ವಿಶ್ವವಿದ್ಯಾಲಯಗಳು
ಅಂದಾಜಿಸಿದ 73,000 ಕೋಟಿ ರೂಪಾಯಿಗಳ ಸಾಲ ಮನ್ನಾವನ್ನು ಮಾಡದೆ, ಕೋಆಪರೇಟಿವ್ ಸೊಸೈಟಿಗಳಿಂದ ಪಡೆದ ಸಾಲಗಳಿಗೆ ಮಾತ್ರ ಸೀಮಿತಗೊಳಿಸಿ, 2.5 ಎಕರೆಗಿಂತ ಹೆಚ್ಚು ಭೂಮಿಯನ್ನು ಹೊಂದದೇ ಇರುವವರಿಗಾಗಿ ಎಂದು ಹಾಗೂ 2 ಲಕ್ಷದವರಗೆ ಸಾಲದ ಮೊತ್ತ ಇರುವವರಿಗೆ ಸೀಮಿತಗೊಳಿಸಲಾಯಿತು.

ಸಾಲ ಮನ್ನಾದ ಮೊತ್ತ ಇಂದಿನ ತನಕ 4,624 ಕೋಟಿ ರೂಪಾಯಿ ಕೂಡ ದಾಟಿಲ್ಲ. ಜುಲೈ 2018ರಲ್ಲಿ ರಾಜ್ಯದ ಜನರು ಡ್ರಗ್ಸ್ ಪಿಡುಗಿನಿಂದ ಬೇಸತ್ತು, ಡ್ರಗ್ಸ್ ವಿರುದ್ಧ ಕಪ್ಪು ದಿನ ಆಚರಿಸಿದರು – ’ಮಡಿ ಅಥವಾ ಪ್ರತಿಭಟಿಸಿ’ ಎಂದು. ಮಾದಕವಸ್ತುಗಳ ಬೆನ್ನು ಮುರಿಯುವ ಭರವಸೆಯು ಪೊಲೀಸ್ ಇಲಾಖೆಯಲ್ಲಿ ದೊಡ್ಡ ಒಳಜಗಳಕ್ಕೆ ಕಾರಣವಾಯಿತು, ಅದು ಈ ಕಾನೂನುಬಾಹಿರ ದಂಧೆಯಲ್ಲಿ ಅವರೂ ಶಾಮೀಲಾಗಿದ್ದಾರೆ ಎಂಬುದನ್ನು ತೋರಿಸಿತು. ಆ ಮಾಫಿಯಾಗಳು ಮುಂದುವರೆದವು, ನಿರುದ್ಯೋಗ ಹೆಚ್ಚಿತು, ಸಾರ್ವಜನಿಕ ಕಚೇರಿಗಳಲ್ಲಿ ಭ್ರಷ್ಟಾಚಾರ ಕೊನೆಗೊಳ್ಳಲಿಲ್ಲ, ಮುಖ್ಯಮಂತ್ರಿಯ ಕಚೇರಿಯು ಕ್ಯಾಪ್ಟನ್‌ನ ಮನೆಯಿಂದಲೇ ಕಾರ್ಯನಿರ್ವಹಿಸಿತು, ನಿರುದ್ಯೋಗಿ, ಅರೆ ಉದ್ಯೋಗಿ ಶಿಕ್ಷಕರು ಮತ್ತು ರೈತರು ಬೃಹತ್ ಪ್ರತಿಭಟನೆ ಮಾಡಿದರು. ಆಗಸ್ಟ್ 2019ರಲ್ಲಿ ಕಾಂಗ್ರೆಸ್ ಶಾಸಕರು ಕ್ಯಾಪ್ಟನ್ ಅವರ ಕಾರ್ಯವೈಖರಿ ಮತ್ತು ಪ್ರದರ್ಶನದ ಬಗ್ಗೆ ಪ್ರಶ್ನೆ ಮಾಡಿದರು. ಯಾವುದೇ ಉತ್ತರಗಳು ಬರಲಿಲ್ಲ. ಇಡೀ ರಾಜ್ಯದ ಆಡಳಿತವನ್ನು ಕ್ಯಾಪ್ಟನ್ ತನ್ನ ಹಿಡಿತದಲ್ಲಿ ಇಟ್ಟುಕೊಂಡಿದ್ದರು.

ಈ ಸಮಯದಲ್ಲಿಯೇ, ಬಹುಮುಖ್ಯವಾದ ಅಧಿಕಾರ ದುರುಪಯೋಗ ಪ್ರಕರಣಗಳು, ಬೆಹಬಲ್ ಕಲಾನ್ ಮತ್ತು ಕೊಟಕಪುರದಲ್ಲಿ ನಡೆದ ಅಪ್ರಚೋದಿತ ಗುಂಡಿನ ದಾಳಿ, ಇದರ ಸಲುವಾಗಿಯೇ ಕ್ಯಾಪ್ಟನ್ ವಿಶೇಷ ಅಸೆಂಬ್ಲಿ ಸೆಷನ್‌ಅನ್ನೂ ಕರೆದಿದ್ದರು ಹಾಗೂ ಈ ಪ್ರಕರಣಗಳಲ್ಲಿ ಸಿಬಿಐ ತನಿಖೆಯ ಅನುಮತಿಯನ್ನು ಹಿಂಪಡೆದಿದ್ದರು; ಏನೂ ಆಗಲಿಲ್ಲ. ಇದೇ ಏಪ್ರಿಲ್‌ನಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಕೊಟಕಪುರ ಗುಂಡಿನ ದಾಳಿಯ ತನಿಖೆಯನ್ನು ರದ್ದುಗೊಳಿಸಿದವು. ದುರುಪಯೋಗ ಪ್ರಕರಣಗಳು ಮತ್ತು ಗುಂಡು ಹಾರಿಸಿದ್ದರ ಅನೌಪಚಾರಿಕ ಕಥನವು ಬಾದಲ್‌ಗಳ ಕಡೆಗೆ ಬೊಟ್ಟು ಮಾಡುತ್ತದೆ. ಆದರೆ ಅವರು ಮತ್ತೊಮ್ಮೆ ಅದರಿಂದ ತಪ್ಪಿಸಿಕೊಂಡಿದ್ದರು. ಇದು 2017ರಲ್ಲಿ ಕ್ಯಾಪ್ಟನ್ ಹೆಚ್ಚುವರಿ ಕ್ಷೇತ್ರ ಲಂಬಿಯಿಂದ ಸ್ಪರ್ಧಿಸಿದ್ದು ಇದಕ್ಕೆ ಹೋಲುತ್ತದೆ, ಆಗ ಮಾಜಿ ಮುಖ್ಯಮಂತ್ರಿ ಮತ್ತು ಅಕಾಲಿ ನಾಯಕ ಪ್ರಕಾಶ್ ಸಿಂಗ್ ಬಾದಲ್ ಗೆಲ್ಲಲು ಅನುಕೂಲ ಮಾಡಿಕೊಟ್ಟಿದ್ದರು. ಈ ವಿಷಯವನ್ನು ಬಗೆಹರಿಸಲು ಕಾಂಗ್ರೆಸ್ ಅಂದು ತನಿಖಾ ಪ್ಯಾನೆಲ್ ಅನ್ನು ಸೃಷ್ಟಿಸಲು ಇದು ಕಾರಣವಾಯಿತು. ಅಂತಿಮವಾಗಿ ಕ್ಯಾಪ್ಟನ್‌ನ ತಪ್ಪು ಏನಾಗಿತ್ತೆಂದರೆ: ತನ್ನ ಉತ್ತರಾಧಿಕಾರಿಯನ್ನು ಸಿದ್ಧಮಾಡುವ ಬದಲಿಗೆ, ಕ್ಯಾಪ್ಟನ್ ಜನರಿಗೆ ತಾವು ನೀಡಿದ್ದ ಭರವಸೆಗಳಿಗೆ ದ್ರೋಹ ಎಸಗಿದರು ಹಾಗೂ ಮುಖ್ಯಮಂತ್ರಿಯಾಗಿ ಇನ್ನೊಂದು ಅವಧಿಗೆ ಆಳಲು ಕಣವನ್ನು ಪ್ರವೇಶಿಸಿದರು.

PC : Varthabharathi (ನವಜೋತ್ ಸಿಧು)

ಜುಲೈ ತಿಂಗಳಲ್ಲಿ ನವಜೋತ್ ಸಿಧು ಪಂಜಾಬ್ ಪ್ರದೇಶ ಕಾಂಗ್ರೆಸ್‌ನ ಮುಖ್ಯಸ್ಥನಾದಾಗ, ಕ್ಯಾಪ್ಟನ್‌ನೊಂದಿಗೆ ನೇರಾನೇರ ಕಾಳಗಕ್ಕಿಳಿದರು. ಕಳೆದ ಕೆಲವು ದಿನಗಳ ಬೆಳವಣಿಗೆಗಳು ತೋರಿಸುವುದೇನೆಂದರೆ, ಕಾಂಗ್ರೆಸ್ ಪಕ್ಷದ ನಾಯಕರು ಸಾಮಾನ್ಯವಾಗಿ ಪಡೆಯುವುದಕ್ಕೆ ಮುನ್ನವೇ ಕ್ಯಾಪ್ಟನ್‌ಗೆ ತನ್ನ ಪಾಪಫಲ ಪಡೆದಿದ್ದರು; ಮಿಕ್ಕವರಿಗೆ ಚುನಾವಣೆಯಲ್ಲಿ ಸಿಗುತ್ತೆ, ಅದಕ್ಕಿನ್ನೂ ಐದು ತಿಂಗಳಿವೆ. ಕ್ಯಾಪ್ಟನ್‌ನ ರಾಜಿನಾಮೆಯಿಂದ ಹೊರಹೊಮ್ಮಿದ ಆಕ್ರೋಶವು ಎರಡು ಆಯಾಮಗಳನ್ನು ಸೂಚಿಸುತ್ತದೆ; ಒಂದು, ತಾನು ಭಾರಿ ಬಹುಮತದಿಂದ ಗೆದ್ದ ರಾಜ್ಯದ ಆಡಳಿತವನ್ನು ಕಾಂಗ್ರೆಸ್ ಹೇಗೆ ಹದಗೆಡಿಸಬಹುದು ಎಂಬುದರ ಬಗ್ಗೆ ಬಿಜೆಪಿಯನ್ನು ವಿರೋಧಿಸುವ ಜನರು ಆಶ್ಚರ್ಯಗೊಂಡಿದ್ದಾರೆ; ಎರಡು, ಪಂಜಾಬಿನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮಾಧ್ಯಮದ ಹೆಚ್ಚಿನವರಿಗೆ ಏನೂ ಗೊತ್ತೇ ಇಲ್ಲ ಎಂಬುದು. ಹಲವಾರು ವರ್ಷಗಳಿಂದ ಕ್ಯಾಪ್ಟನ್ ತಾನೊಬ್ಬ ರಾಷ್ಟ್ರೀಯವಾದಿ ಎಂಬುದನ್ನು ಗಟ್ಟಿಯಾಗಿ ತೋರಿಸುತ್ತ ಬಂದಿದ್ದಾರೆ – ಪಾಕಿಸ್ತಾನದ ವಿರುದ್ಧ ಮಾತನಾಡುವುದು, ಕರ್ತಾರಪುರ್ ಕಾರಿಡಾರ್ ಮೇಲೆ ಹೆಮ್ಮೆ ಕೊಚ್ಚಿಕೊಳ್ಳುವುದು, ಒಬ್ಬ ನಾಗರಿಕನನ್ನು ತನ್ನ ಜೀಪ್ ಎದುರಿಗೆ ಕಟ್ಟಿ ಎಳೆದಿದ್ದ ಆರ್ಮಿ ಮೇಜರ್‌ಗೆ ಬೆಂಬಲ ಸೂಚಿಸುವುದು, ಇತ್ಯಾದಿ. ಒಂದು ಗಡಿರಾಜ್ಯದ ಮುಖ್ಯಮಂತ್ರಿಯಾಗಿ ಈ ನಿಲುವುಗಳು ತನ್ನನ್ನು ಆರಿಸಿದ ಪಂಜಾಬ್‌ನ ಹಿತಾಸಕ್ತಿಗಳಿಗೆ ಅನುಗುಣವಾಗಿವೆಯೆ ಎಂದು ಯಾರೂ ಪ್ರಶ್ನಿಸಲಿಲ್ಲ. ಅಥವಾ ತನ್ನ ಕಡು ವಿರೋಧಿ ಬಿಜೆಪಿಯ ಅಜೆಂಡಾವನ್ನೇ ಮುಂದುವರೆಸುತ್ತಿದ್ದಾರೆಯೇ ಎಂಬ ಪ್ರಶ್ನೆಯನ್ನೂ ಯಾರೂ ಕೇಳಲಿಲ್ಲ.

ಮುಖ್ಯಮಂತ್ರಿಯ ಬದಲಾವಣೆಯ ಮುಖಾಂತರ, ಅಕಾಲಿಗಳು ಮತ್ತು ಆಮ್ ಆದ್ಮಿ ಪಾರ್ಟಿ ಇನ್ನೂ ಅಸ್ತವ್ಯಸ್ತವಾಗಿರುವ, ಪಂಜಾಬಿನ ಅಸಮಾನ ಚುನಾವಣಾ ಅಖಾಡ ಗಮನದಲ್ಲಿಟ್ಟುಕೊಂಡು ನೋಡಿದರೆ, ಫೆಬ್ರುವರಿ 2022 ಚುನಾವಣೆಗಳಲ್ಲಿ ಸೋಲನ್ನು ತಪ್ಪಿಸುವುದಕ್ಕೆ ಕಾಂಗ್ರೆಸ್ ಹೀಗೆ ನಡೆದುಕೊಂಡಿದೆ. ಈ ಬದಲಾವಣೆ ಸಣ್ಣ ಬದಲಾವಣೆಯಲ್ಲ; ಹಲವಾರು ದಶಕಗಳಲ್ಲೇ ಮೊದಲ ಬಾರಿಗೆ ಪಂಜಾಬಿನಲ್ಲಿ ಆಳುವ ಕುಟುಂಬಗಳ ಹೊರಗಿನ ಒಬ್ಬರು ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣಾ ರಾಜಕೀಯದ ಸಿಂಬಾಲಿಕ್ ಚಹರೆಗಳ ಮೌಲ್ಯವನ್ನು ನೋಡಿದರೆ, ಇದೊಂದು ಒಳ್ಳೆಯ ನಡೆ ಎನಿಸುತ್ತದೆ. ದಲಿತರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿರುವ ರಾಜ್ಯದಲ್ಲಿ, (ಪಂಜಾಬಿನಲ್ಲಿ 31.9% ದಲಿತರಿದ್ದಾರೆ), ನಿರ್ಲಕ್ಷ್ಯಕ್ಕೊಳಗಾದ ಪುವಾಡ್ ಪ್ರದೇಶದಿಂದ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿರುವುದು, ಅಕಾಲಿ- ಬಹುಜನ ಮೈತ್ರಿಯ, ಬಿಜೆಪಿ ದಲಿತರ ಓಲೈಕೆಯ, ಒಬ್ಬ ಉಪಮುಖ್ಯಮಂತ್ರಿ ಅಭ್ಯರ್ಥಿಯ ಆಮ್ ಆದ್ಮಿ ಪಾರ್ಟಿಯ ಮುನ್ನಂದಾಜು, ಇವೆಲ್ಲವುಗಳನ್ನು ಈ ನಡೆ ಮೀರಿಸಿದೆ ಹಾಗೂ ತನ್ನ ಹಳೆಯ ಮತದ ಬೇಸ್‌ಅನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದೆ. ಆದರೆ ಒಬ್ಬ ಹಿರಿಯ ಪತ್ರಕರ್ತ ಹೇಳಿದಂತೆ, ದಲಿತರು ಏಕರೂಪವಾಗಿ, ಒಂದು ವೋಟ್‌ಬ್ಯಾಂಕ್ ಆಗಿ ಮತ ಚಲಾಯಿಸುವುದಿಲ್ಲ. ಹಾಗಾಗಿ, ’ಒಂದು ಪಿಸುಗುಟ್ಟುವ ಪ್ರಚಾರ ಶಕ್ತಿಯನ್ನು ಅಳೆಯುವುದಕ್ಕೆ ಇನ್ನು ಸಮಯ ಬಾಕಿ ಇದೆ. ಏನಾಗುತ್ತೆ ಎಂದು ಯಾರಿಗೆ ಗೊತ್ತು?’

ಚನ್ನಿ ಅವರದ್ದು ಒಂದು ಕುತೂಹಲಕಾರಿಯಾದ ಆಯ್ಕೆಯಾಗಿದ್ದರೂ, ಕಾಂಗ್ರೆಸ್ ಕೆಲಸಮಯದವರೆಗೆ ಹೇಗೆ ಅಂಬಿಕಾ ಸೋನಿ ಅವರನ್ನು ಪರಿಗಣಿಸಿತ್ತು ಎಂಬುದನ್ನು ನೋಡಿದರೆ, ಪಂಜಾಬಿನ ತಳಮಟ್ಟದ ವಾಸ್ತವ ಇನ್ನೂ ಅವರಿಗೆ ಗೊತ್ತಿಲ್ಲ ಎಂಬುದು ತಿಳಿಯುತ್ತದೆ. ಈ ಸಮಯದಲ್ಲಿ, ಚನ್ನಿಯವರಿಗಿರುವ ಅಲ್ಪ ಸಮಯವನ್ನು ಪರಿಗಣಿಸಿದರೆ, ಕ್ಯಾಪ್ಟನ್‌ನ ತೋರಿಕೆಯಂತಲ್ಲದೇ, ಅವರು ವಿನಯದಿಂದ ಇದ್ದುಕೊಂಡು, ಹಾಗೂ ತಳಮಟ್ಟದಲ್ಲಿದ್ದುಕೊಂಡು ಎಷ್ಟಾಗುತ್ತೋ ಅಷ್ಟು ಕೆಲಸ ಮಾಡಿದರೆ ಒಳ್ಳೆಯದು. ಕಾಂಗ್ರೆಸ್ ಒಂದನ್ನು ನೆನಪಿಡಬೇಕು: ಒಂದು ವೇಳೆ ಚುನಾವಣೆಯಲ್ಲಿ ಗೆಲವು ಸಾಧಿಸಿದರೆ, ಚನ್ನಿಯನ್ನೇ ಮುಂದಿನ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು. ಪಂಜಾಬ್‌ಅನ್ನು, ಪುವಾಡ್‌ಅನ್ನು ಮತ್ತು ದಲಿತರನ್ನು ಅನೇಕ ವರ್ಷಗಳಿಂದ ನಿರ್ಲಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ ತನ್ನ ಉದ್ದೇಶಗಳು ಪ್ರಾಮಾಣಿಕವಾಗಿವೆ ಮತ್ತು ಗೌರವಾರ್ಹವಾಗಿವೆ ಎಂಬುದನ್ನು ಕಾಂಗ್ರೆಸ್ ಪ್ರದರ್ಶಿಸಬೇಕಿದೆ.

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ಅಮನ್‌ದೀಪ್ ಸಂಧು

ಅಮನ್‌ದೀಪ್ ಸಂಧು
ಅಮನ್‌ದೀಪ್ ಲೇಖಕರು. ’ಪಂಜಾಬ್- ಜರ್ನಿ ಥ್ರೂ ಫಾಲ್ಟ್ ಲೈನ್ಸ್’ ಎಂಬ ಪುಸ್ತಕವನ್ನು ರಚಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...