Homeಮುಖಪುಟನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನ ಸಂಜೆ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರು ತನ್ನ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದರು. ‘ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿವಾದಾತ್ಮಕ ವಿಷಯದ ಕುರಿತು ತೀರ್ಪು ನೀಡಿದ ನಂತರ ನ್ಯಾಯಮೂರ್ತಿಗಳು ಸಂಭ್ರಮಾಚರಣೆ ಮಾಡಿದ್ದು ಸರಿಯೇ ಪ್ರಶ್ನೆ ಕೇಳಿಬಂದಿದೆ.

ವಿವಾದಿತ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಬಗ್ಗೆ ತೀರ್ಪು ಪ್ರಕಟಿಸಿದ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ತಮ್ಮ ಆತ್ಮ ಚರಿತ್ರೆ “ಜಸ್ಟೀಸ್ ಫಾರ್ ದಿ ಜಡ್ಜ್” ಎಂಬ ಪುಸ್ತಕದಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನದ ಸಂಜೆಯನ್ನು ವಿವರಿಸಿದ್ದಾರೆ. ‘ಮಹತ್ವದ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂಬ ಶೀರ್ಷಿಕೆಯೊಂದಿಗೆ ಅಂದು ಪೀಠದಲ್ಲಿದ್ದ ಇತರ ನ್ಯಾಯಾಧೀಶರೊಂದಿಗೆ ಐಷಾರಾಮಿ ಹೋಟೆಲ್‌ನಲ್ಲಿ ಊಟ ಮಾಡುತ್ತಿರುವ ಮತ್ತು ಒಟ್ಟಿಗೆ ಕೈಜೋಡಿಸಿ ನಿಂತಿರುವ ಫೋಟೋಗಳು ಪುಸ್ತಕದಲ್ಲಿವೆ.

ಇದನ್ನೂ ಓದಿ:ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ಈ ಬಗ್ಗೆ ಎನ್‌ಡಿಟಿವಿ ಜೊತೆಗಿನ ಸಂದರ್ಶನದಲ್ಲಿ ‘ವಿವಾದಿತ ಅಯೋಧ್ಯೆ ತೀರ್ಪು ಸಂಭ್ರಮಾಚರಣೆಯ ವಿಷಯವೇ’ ಎಂಬ ಪ್ರಶ್ನೆಗೆ ಉತ್ತರಿಸಿರುವ ರಂಜನ್ ಗೊಗೊಯ್, ಪುಸ್ತಕದಲ್ಲಿನ ಫೋಟೋ ಶೀರ್ಷಿಕೆಯಲ್ಲಿ ಇರುವ ಪದಗಳನ್ನು ನಿರಾಕರಿಸಿ, “ಅದು ಆಚರಣೆಯಲ್ಲ, ಐದು ಜನ ನ್ಯಾಯಾಧೀಶರು ಈ ತೀರ್ಪಿಗಾಗಿ ನಾಲ್ಕು ತಿಂಗಳನ್ನು ಕಳೆದುಕೊಂಡೆವು. ಅದನ್ನು ನಾನು ಹೇಗೆ ಮರುಗಳಿಸುವುದು? ಅದಕ್ಕಾಗಿ ನಾಲ್ಕು ತಿಂಗಳ ಪ್ರಯಾಸಕರ ಕೆಲಸಗಳ ನಂತರ ಸ್ನೇಹಿತರುಗಳು ನಡೆಸಿದ ಸಭೆ. ಹೊರಗೆ ಊಟ ಮಾಡುವುದು ಅಪರಾಧವಲ್ಲ. ನಮ್ಮ ನ್ಯಾಯಾಧೀಶರುಗಳು ಸತತ ಪರಿಶ್ರಮದ ನಡುವೆ ತೆಗೆದುಕೊಂಡ ಸಣ್ಣ ವಿರಾಮ ಅದು” ಎಂದು ಹೇಳಿದ್ದಾರೆ.

ಎನ್‌ಡಿಟಿವಿಯ ಅನುಭವಿ ಪತ್ರಕರ್ತ ಶ್ರೀನಿವಾಸನ್ ಜೈನ್ ಕಠಿಣ ಪ್ರಶ್ನೆಗಳನ್ನು ನಿವೃತ್ತ ಸಿಜೆಐಗೆ ಕೇಳಿದ್ದಾರೆ. ನೀವು ಬಹಳ ಪ್ರಯಾಸಕರವಾಗಿ ಈ ತೀರ್ಪನ್ನು ನಿಭಾಯಿಸಿದ್ದೆವು, ಕೆಲಸ ಮುಗಿದಿದೆ ಎಂದು ಹೇಳಿಕೆ ನೀಡಿದ್ದೀರಿ ಎಂಬ ಪ್ರಶ್ನೆಯನ್ನು ತುಂಡರಿಸಿದ ಗೊಗೊಯ್ ನಾನು ಹಾಗೆ ಹೇಳಿಕೆ ನೀಡಿಲ್ಲ ಎಂದರು. ಅಲ್ಲದೆ ನೀವು ಏಕೆ ಕೆಲವು ವಾಕ್ಯಗಳನ್ನು ತೆಗೆದುಕೊಳ್ಳುತ್ತಿರಿ? ಆ ಸಂದರ್ಭದಲ್ಲಿ ನಾನು ನೀಡಿದ ಪೂರ್ಣ ಹೇಳಿಕೆಯನ್ನು ಗಮನಿಸಿ ಎಂದರು.

ನೀವು ನೀಡಿದ ತೀರ್ಪಿನಿಂದ ಬಹಳಷ್ಟು ಜನ ಬಹಳಷ್ಟು ಕಳೆದುಕೊಂಡ ನೋವಿನ ಪರಿಸ್ಥಿತಿಯಲ್ಲಿದ್ದರು. ಅಂದು ನೀವು ಆಚರಣೆ ಮಾಡಿ ಊಟ ಮಾಡಿದ ಫೋಟೊ ಹಾಕುವುದು ಅಸೂಕ್ಷ್ಮತೆಯಲ್ಲವೇ ಎಂಬ ಪ್ರಶ್ನೆಗೆ ಸಿಜೆಐ ಕೆಂಡಮಂಡಲವಾದರು. “ಮಿಸ್ಟರ್ ಶ್ರೀನಿವಾಸನ್ ಒಬ್ಬ ಪತ್ರಕರ್ತರಾಗಿ ನೀವು ಬಹಳಷ್ಟು ಜನರ ನೋವಿಗೆ ಕಾರಣರಾಗುತ್ತೀರಿ, ನಿಮಗದು ಗೊತ್ತೆ? ಹಾಗೆಂದು ನೀವು ಡಿನ್ನರ್‌ಗೆ ಹೋಗುವುದಿಲ್ಲವೇ? ನೀವು ಏನೂ ತಿನ್ನದೆ ಮನೆಯಲ್ಲಿಯೇ ಕುಳಿದು ದುಃಖಿಸುತ್ತೀರೆ? ನನ್ನ ಸಂದರ್ಶನ, ಸ್ಟೋರಿ ಅರ್ಧಸತ್ಯ, ಸುಳ್ಳುಗಳಿಂದ ಕೂಡಿದ್ದು ಇತರರಿಗೆ ನೋವು ನೀಡಿದೆ ಎಂದು ನೀವು ಉಳಿದೆಲ್ಲಾ ದಿನ ದುಃಖಿಸುತ್ತೀರಾ? ನಾಲ್ಕು ತಿಂಗಳ ಶ್ರಮದ ನಂತರ ಊಟ ಮಾಡಿದ್ದು ತಪ್ಪಲ್ಲ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ತೀರ್ಪಿನ ನಂತರ, ಸೆಕ್ರೆಟರಿ ಜನರಲ್ ಅವರು ಕೋರ್ಟ್‌ ನಂ 1 ರ ಹೊರಗಿನ ನ್ಯಾಯಾಧೀಶರ ಗ್ಯಾಲರಿಯ ಅಶೋಕ ಚಕ್ರದ ಕೆಳಗೆ ಫೋಟೋ ಸೆಷನ್ ಅನ್ನು ಆಯೋಜಿಸಿದರು. ಸಂಜೆ ನಾನು ತೀರ್ಪು ನೀಡಿದ ನ್ಯಾಯಮೂರ್ತಿಗಳನ್ನು ತಾಜ್‌ ಮಾನ್ಸಿಂಗ್ ಹೋಟೆಲ್‌ಗೆ ಊಟಕ್ಕೆ ಕರೆದುಕೊಂಡು ಹೋದೆ. ಅಲ್ಲಿ ಲಭ್ಯವಿರುವ ಅತ್ಯುತ್ತಮವಾದ ವೈನ್ ಬಾಟಲಿಯನ್ನು ಹಂಚಿಕೊಂಡು, ನಾವು ಚೈನೀಸ್ ಆಹಾರವನ್ನು ಸೇವಿಸಿದೆವು. ಹಿರಿಯವನಾಗಿ ನಾನೇ ಅಂದು ಬಿಲ್ಲನ್ನು ಪಾವತಿಸಿದೆ” ಎಂದು ಗೊಗೊಯ್ ಬರೆದಿದ್ದಾರೆ.

ಇದನ್ನೂ ಓದಿ:ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name God; ಸಾಕ್ಷ್ಯಚಿತ್ರ ನೋಡಿ

ರಂಜನ್‌ ಗೊಗೊಯ್ ಅವರ ಆತ್ಮಚರಿತ್ರೆಯಲ್ಲಿರುವ ಒಂದು ಪುಟದ ಚಿತ್ರ

ರಂಜನ್‌ ಗೊಗೊಯ್‌ ಸುಪ್ರೀಂಕೋರ್ಟ್‌‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಬಾಬರಿ ಮಸೀದಿ ವಿವಾದದ ತೀರ್ಪು ನೀಡಿದ ಐದು ನ್ಯಾಯಾಮೂರ್ತಿಗಳ ಸಂವಿಧಾನ ಪೀಠದಲ್ಲಿ ಗೊಗೊಯ್ ನಂತರ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎಸ್‌.ಎ. ಬೋಬ್ಡೆ, ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಇದ್ದರು.

ರಂಜನ್‌ ಗೊಗೊಯ್ ಅವರು ತಮ್ಮ ಆತ್ಮಚರಿತ್ರೆಯಲ್ಲಿ ತನ್ನ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣ, 2018 ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಪತ್ರಿಕಾಗೋಷ್ಠಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬರೆದಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...