Homeಮುಖಪುಟನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನ ಸಂಜೆ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರು ತನ್ನ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದರು. ‘ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿವಾದಾತ್ಮಕ ವಿಷಯದ ಕುರಿತು ತೀರ್ಪು ನೀಡಿದ ನಂತರ ನ್ಯಾಯಮೂರ್ತಿಗಳು ಸಂಭ್ರಮಾಚರಣೆ ಮಾಡಿದ್ದು ಸರಿಯೇ ಪ್ರಶ್ನೆ ಕೇಳಿಬಂದಿದೆ.

ವಿವಾದಿತ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಬಗ್ಗೆ ತೀರ್ಪು ಪ್ರಕಟಿಸಿದ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ತಮ್ಮ ಆತ್ಮ ಚರಿತ್ರೆ “ಜಸ್ಟೀಸ್ ಫಾರ್ ದಿ ಜಡ್ಜ್” ಎಂಬ ಪುಸ್ತಕದಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನದ ಸಂಜೆಯನ್ನು ವಿವರಿಸಿದ್ದಾರೆ. ‘ಮಹತ್ವದ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂಬ ಶೀರ್ಷಿಕೆಯೊಂದಿಗೆ ಅಂದು ಪೀಠದಲ್ಲಿದ್ದ ಇತರ ನ್ಯಾಯಾಧೀಶರೊಂದಿಗೆ ಐಷಾರಾಮಿ ಹೋಟೆಲ್‌ನಲ್ಲಿ ಊಟ ಮಾಡುತ್ತಿರುವ ಮತ್ತು ಒಟ್ಟಿಗೆ ಕೈಜೋಡಿಸಿ ನಿಂತಿರುವ ಫೋಟೋಗಳು ಪುಸ್ತಕದಲ್ಲಿವೆ.

ಇದನ್ನೂ ಓದಿ:ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ಈ ಬಗ್ಗೆ ಎನ್‌ಡಿಟಿವಿ ಜೊತೆಗಿನ ಸಂದರ್ಶನದಲ್ಲಿ ‘ವಿವಾದಿತ ಅಯೋಧ್ಯೆ ತೀರ್ಪು ಸಂಭ್ರಮಾಚರಣೆಯ ವಿಷಯವೇ’ ಎಂಬ ಪ್ರಶ್ನೆಗೆ ಉತ್ತರಿಸಿರುವ ರಂಜನ್ ಗೊಗೊಯ್, ಪುಸ್ತಕದಲ್ಲಿನ ಫೋಟೋ ಶೀರ್ಷಿಕೆಯಲ್ಲಿ ಇರುವ ಪದಗಳನ್ನು ನಿರಾಕರಿಸಿ, “ಅದು ಆಚರಣೆಯಲ್ಲ, ಐದು ಜನ ನ್ಯಾಯಾಧೀಶರು ಈ ತೀರ್ಪಿಗಾಗಿ ನಾಲ್ಕು ತಿಂಗಳನ್ನು ಕಳೆದುಕೊಂಡೆವು. ಅದನ್ನು ನಾನು ಹೇಗೆ ಮರುಗಳಿಸುವುದು? ಅದಕ್ಕಾಗಿ ನಾಲ್ಕು ತಿಂಗಳ ಪ್ರಯಾಸಕರ ಕೆಲಸಗಳ ನಂತರ ಸ್ನೇಹಿತರುಗಳು ನಡೆಸಿದ ಸಭೆ. ಹೊರಗೆ ಊಟ ಮಾಡುವುದು ಅಪರಾಧವಲ್ಲ. ನಮ್ಮ ನ್ಯಾಯಾಧೀಶರುಗಳು ಸತತ ಪರಿಶ್ರಮದ ನಡುವೆ ತೆಗೆದುಕೊಂಡ ಸಣ್ಣ ವಿರಾಮ ಅದು” ಎಂದು ಹೇಳಿದ್ದಾರೆ.

ಎನ್‌ಡಿಟಿವಿಯ ಅನುಭವಿ ಪತ್ರಕರ್ತ ಶ್ರೀನಿವಾಸನ್ ಜೈನ್ ಕಠಿಣ ಪ್ರಶ್ನೆಗಳನ್ನು ನಿವೃತ್ತ ಸಿಜೆಐಗೆ ಕೇಳಿದ್ದಾರೆ. ನೀವು ಬಹಳ ಪ್ರಯಾಸಕರವಾಗಿ ಈ ತೀರ್ಪನ್ನು ನಿಭಾಯಿಸಿದ್ದೆವು, ಕೆಲಸ ಮುಗಿದಿದೆ ಎಂದು ಹೇಳಿಕೆ ನೀಡಿದ್ದೀರಿ ಎಂಬ ಪ್ರಶ್ನೆಯನ್ನು ತುಂಡರಿಸಿದ ಗೊಗೊಯ್ ನಾನು ಹಾಗೆ ಹೇಳಿಕೆ ನೀಡಿಲ್ಲ ಎಂದರು. ಅಲ್ಲದೆ ನೀವು ಏಕೆ ಕೆಲವು ವಾಕ್ಯಗಳನ್ನು ತೆಗೆದುಕೊಳ್ಳುತ್ತಿರಿ? ಆ ಸಂದರ್ಭದಲ್ಲಿ ನಾನು ನೀಡಿದ ಪೂರ್ಣ ಹೇಳಿಕೆಯನ್ನು ಗಮನಿಸಿ ಎಂದರು.

ನೀವು ನೀಡಿದ ತೀರ್ಪಿನಿಂದ ಬಹಳಷ್ಟು ಜನ ಬಹಳಷ್ಟು ಕಳೆದುಕೊಂಡ ನೋವಿನ ಪರಿಸ್ಥಿತಿಯಲ್ಲಿದ್ದರು. ಅಂದು ನೀವು ಆಚರಣೆ ಮಾಡಿ ಊಟ ಮಾಡಿದ ಫೋಟೊ ಹಾಕುವುದು ಅಸೂಕ್ಷ್ಮತೆಯಲ್ಲವೇ ಎಂಬ ಪ್ರಶ್ನೆಗೆ ಸಿಜೆಐ ಕೆಂಡಮಂಡಲವಾದರು. “ಮಿಸ್ಟರ್ ಶ್ರೀನಿವಾಸನ್ ಒಬ್ಬ ಪತ್ರಕರ್ತರಾಗಿ ನೀವು ಬಹಳಷ್ಟು ಜನರ ನೋವಿಗೆ ಕಾರಣರಾಗುತ್ತೀರಿ, ನಿಮಗದು ಗೊತ್ತೆ? ಹಾಗೆಂದು ನೀವು ಡಿನ್ನರ್‌ಗೆ ಹೋಗುವುದಿಲ್ಲವೇ? ನೀವು ಏನೂ ತಿನ್ನದೆ ಮನೆಯಲ್ಲಿಯೇ ಕುಳಿದು ದುಃಖಿಸುತ್ತೀರೆ? ನನ್ನ ಸಂದರ್ಶನ, ಸ್ಟೋರಿ ಅರ್ಧಸತ್ಯ, ಸುಳ್ಳುಗಳಿಂದ ಕೂಡಿದ್ದು ಇತರರಿಗೆ ನೋವು ನೀಡಿದೆ ಎಂದು ನೀವು ಉಳಿದೆಲ್ಲಾ ದಿನ ದುಃಖಿಸುತ್ತೀರಾ? ನಾಲ್ಕು ತಿಂಗಳ ಶ್ರಮದ ನಂತರ ಊಟ ಮಾಡಿದ್ದು ತಪ್ಪಲ್ಲ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ತೀರ್ಪಿನ ನಂತರ, ಸೆಕ್ರೆಟರಿ ಜನರಲ್ ಅವರು ಕೋರ್ಟ್‌ ನಂ 1 ರ ಹೊರಗಿನ ನ್ಯಾಯಾಧೀಶರ ಗ್ಯಾಲರಿಯ ಅಶೋಕ ಚಕ್ರದ ಕೆಳಗೆ ಫೋಟೋ ಸೆಷನ್ ಅನ್ನು ಆಯೋಜಿಸಿದರು. ಸಂಜೆ ನಾನು ತೀರ್ಪು ನೀಡಿದ ನ್ಯಾಯಮೂರ್ತಿಗಳನ್ನು ತಾಜ್‌ ಮಾನ್ಸಿಂಗ್ ಹೋಟೆಲ್‌ಗೆ ಊಟಕ್ಕೆ ಕರೆದುಕೊಂಡು ಹೋದೆ. ಅಲ್ಲಿ ಲಭ್ಯವಿರುವ ಅತ್ಯುತ್ತಮವಾದ ವೈನ್ ಬಾಟಲಿಯನ್ನು ಹಂಚಿಕೊಂಡು, ನಾವು ಚೈನೀಸ್ ಆಹಾರವನ್ನು ಸೇವಿಸಿದೆವು. ಹಿರಿಯವನಾಗಿ ನಾನೇ ಅಂದು ಬಿಲ್ಲನ್ನು ಪಾವತಿಸಿದೆ” ಎಂದು ಗೊಗೊಯ್ ಬರೆದಿದ್ದಾರೆ.

ಇದನ್ನೂ ಓದಿ:ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name God; ಸಾಕ್ಷ್ಯಚಿತ್ರ ನೋಡಿ

ರಂಜನ್‌ ಗೊಗೊಯ್ ಅವರ ಆತ್ಮಚರಿತ್ರೆಯಲ್ಲಿರುವ ಒಂದು ಪುಟದ ಚಿತ್ರ

ರಂಜನ್‌ ಗೊಗೊಯ್‌ ಸುಪ್ರೀಂಕೋರ್ಟ್‌‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಬಾಬರಿ ಮಸೀದಿ ವಿವಾದದ ತೀರ್ಪು ನೀಡಿದ ಐದು ನ್ಯಾಯಾಮೂರ್ತಿಗಳ ಸಂವಿಧಾನ ಪೀಠದಲ್ಲಿ ಗೊಗೊಯ್ ನಂತರ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎಸ್‌.ಎ. ಬೋಬ್ಡೆ, ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಇದ್ದರು.

ರಂಜನ್‌ ಗೊಗೊಯ್ ಅವರು ತಮ್ಮ ಆತ್ಮಚರಿತ್ರೆಯಲ್ಲಿ ತನ್ನ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣ, 2018 ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಪತ್ರಿಕಾಗೋಷ್ಠಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬರೆದಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...