Homeಮುಖಪುಟನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನ ಸಂಜೆ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರು ತನ್ನ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದರು. ‘ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿವಾದಾತ್ಮಕ ವಿಷಯದ ಕುರಿತು ತೀರ್ಪು ನೀಡಿದ ನಂತರ ನ್ಯಾಯಮೂರ್ತಿಗಳು ಸಂಭ್ರಮಾಚರಣೆ ಮಾಡಿದ್ದು ಸರಿಯೇ ಪ್ರಶ್ನೆ ಕೇಳಿಬಂದಿದೆ.

ವಿವಾದಿತ ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಬಗ್ಗೆ ತೀರ್ಪು ಪ್ರಕಟಿಸಿದ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ತಮ್ಮ ಆತ್ಮ ಚರಿತ್ರೆ “ಜಸ್ಟೀಸ್ ಫಾರ್ ದಿ ಜಡ್ಜ್” ಎಂಬ ಪುಸ್ತಕದಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನದ ಸಂಜೆಯನ್ನು ವಿವರಿಸಿದ್ದಾರೆ. ‘ಮಹತ್ವದ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ’ ಎಂಬ ಶೀರ್ಷಿಕೆಯೊಂದಿಗೆ ಅಂದು ಪೀಠದಲ್ಲಿದ್ದ ಇತರ ನ್ಯಾಯಾಧೀಶರೊಂದಿಗೆ ಐಷಾರಾಮಿ ಹೋಟೆಲ್‌ನಲ್ಲಿ ಊಟ ಮಾಡುತ್ತಿರುವ ಮತ್ತು ಒಟ್ಟಿಗೆ ಕೈಜೋಡಿಸಿ ನಿಂತಿರುವ ಫೋಟೋಗಳು ಪುಸ್ತಕದಲ್ಲಿವೆ.

ಇದನ್ನೂ ಓದಿ:ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ಈ ಬಗ್ಗೆ ಎನ್‌ಡಿಟಿವಿ ಜೊತೆಗಿನ ಸಂದರ್ಶನದಲ್ಲಿ ‘ವಿವಾದಿತ ಅಯೋಧ್ಯೆ ತೀರ್ಪು ಸಂಭ್ರಮಾಚರಣೆಯ ವಿಷಯವೇ’ ಎಂಬ ಪ್ರಶ್ನೆಗೆ ಉತ್ತರಿಸಿರುವ ರಂಜನ್ ಗೊಗೊಯ್, ಪುಸ್ತಕದಲ್ಲಿನ ಫೋಟೋ ಶೀರ್ಷಿಕೆಯಲ್ಲಿ ಇರುವ ಪದಗಳನ್ನು ನಿರಾಕರಿಸಿ, “ಅದು ಆಚರಣೆಯಲ್ಲ, ಐದು ಜನ ನ್ಯಾಯಾಧೀಶರು ಈ ತೀರ್ಪಿಗಾಗಿ ನಾಲ್ಕು ತಿಂಗಳನ್ನು ಕಳೆದುಕೊಂಡೆವು. ಅದನ್ನು ನಾನು ಹೇಗೆ ಮರುಗಳಿಸುವುದು? ಅದಕ್ಕಾಗಿ ನಾಲ್ಕು ತಿಂಗಳ ಪ್ರಯಾಸಕರ ಕೆಲಸಗಳ ನಂತರ ಸ್ನೇಹಿತರುಗಳು ನಡೆಸಿದ ಸಭೆ. ಹೊರಗೆ ಊಟ ಮಾಡುವುದು ಅಪರಾಧವಲ್ಲ. ನಮ್ಮ ನ್ಯಾಯಾಧೀಶರುಗಳು ಸತತ ಪರಿಶ್ರಮದ ನಡುವೆ ತೆಗೆದುಕೊಂಡ ಸಣ್ಣ ವಿರಾಮ ಅದು” ಎಂದು ಹೇಳಿದ್ದಾರೆ.

ಎನ್‌ಡಿಟಿವಿಯ ಅನುಭವಿ ಪತ್ರಕರ್ತ ಶ್ರೀನಿವಾಸನ್ ಜೈನ್ ಕಠಿಣ ಪ್ರಶ್ನೆಗಳನ್ನು ನಿವೃತ್ತ ಸಿಜೆಐಗೆ ಕೇಳಿದ್ದಾರೆ. ನೀವು ಬಹಳ ಪ್ರಯಾಸಕರವಾಗಿ ಈ ತೀರ್ಪನ್ನು ನಿಭಾಯಿಸಿದ್ದೆವು, ಕೆಲಸ ಮುಗಿದಿದೆ ಎಂದು ಹೇಳಿಕೆ ನೀಡಿದ್ದೀರಿ ಎಂಬ ಪ್ರಶ್ನೆಯನ್ನು ತುಂಡರಿಸಿದ ಗೊಗೊಯ್ ನಾನು ಹಾಗೆ ಹೇಳಿಕೆ ನೀಡಿಲ್ಲ ಎಂದರು. ಅಲ್ಲದೆ ನೀವು ಏಕೆ ಕೆಲವು ವಾಕ್ಯಗಳನ್ನು ತೆಗೆದುಕೊಳ್ಳುತ್ತಿರಿ? ಆ ಸಂದರ್ಭದಲ್ಲಿ ನಾನು ನೀಡಿದ ಪೂರ್ಣ ಹೇಳಿಕೆಯನ್ನು ಗಮನಿಸಿ ಎಂದರು.

ನೀವು ನೀಡಿದ ತೀರ್ಪಿನಿಂದ ಬಹಳಷ್ಟು ಜನ ಬಹಳಷ್ಟು ಕಳೆದುಕೊಂಡ ನೋವಿನ ಪರಿಸ್ಥಿತಿಯಲ್ಲಿದ್ದರು. ಅಂದು ನೀವು ಆಚರಣೆ ಮಾಡಿ ಊಟ ಮಾಡಿದ ಫೋಟೊ ಹಾಕುವುದು ಅಸೂಕ್ಷ್ಮತೆಯಲ್ಲವೇ ಎಂಬ ಪ್ರಶ್ನೆಗೆ ಸಿಜೆಐ ಕೆಂಡಮಂಡಲವಾದರು. “ಮಿಸ್ಟರ್ ಶ್ರೀನಿವಾಸನ್ ಒಬ್ಬ ಪತ್ರಕರ್ತರಾಗಿ ನೀವು ಬಹಳಷ್ಟು ಜನರ ನೋವಿಗೆ ಕಾರಣರಾಗುತ್ತೀರಿ, ನಿಮಗದು ಗೊತ್ತೆ? ಹಾಗೆಂದು ನೀವು ಡಿನ್ನರ್‌ಗೆ ಹೋಗುವುದಿಲ್ಲವೇ? ನೀವು ಏನೂ ತಿನ್ನದೆ ಮನೆಯಲ್ಲಿಯೇ ಕುಳಿದು ದುಃಖಿಸುತ್ತೀರೆ? ನನ್ನ ಸಂದರ್ಶನ, ಸ್ಟೋರಿ ಅರ್ಧಸತ್ಯ, ಸುಳ್ಳುಗಳಿಂದ ಕೂಡಿದ್ದು ಇತರರಿಗೆ ನೋವು ನೀಡಿದೆ ಎಂದು ನೀವು ಉಳಿದೆಲ್ಲಾ ದಿನ ದುಃಖಿಸುತ್ತೀರಾ? ನಾಲ್ಕು ತಿಂಗಳ ಶ್ರಮದ ನಂತರ ಊಟ ಮಾಡಿದ್ದು ತಪ್ಪಲ್ಲ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ತೀರ್ಪಿನ ನಂತರ, ಸೆಕ್ರೆಟರಿ ಜನರಲ್ ಅವರು ಕೋರ್ಟ್‌ ನಂ 1 ರ ಹೊರಗಿನ ನ್ಯಾಯಾಧೀಶರ ಗ್ಯಾಲರಿಯ ಅಶೋಕ ಚಕ್ರದ ಕೆಳಗೆ ಫೋಟೋ ಸೆಷನ್ ಅನ್ನು ಆಯೋಜಿಸಿದರು. ಸಂಜೆ ನಾನು ತೀರ್ಪು ನೀಡಿದ ನ್ಯಾಯಮೂರ್ತಿಗಳನ್ನು ತಾಜ್‌ ಮಾನ್ಸಿಂಗ್ ಹೋಟೆಲ್‌ಗೆ ಊಟಕ್ಕೆ ಕರೆದುಕೊಂಡು ಹೋದೆ. ಅಲ್ಲಿ ಲಭ್ಯವಿರುವ ಅತ್ಯುತ್ತಮವಾದ ವೈನ್ ಬಾಟಲಿಯನ್ನು ಹಂಚಿಕೊಂಡು, ನಾವು ಚೈನೀಸ್ ಆಹಾರವನ್ನು ಸೇವಿಸಿದೆವು. ಹಿರಿಯವನಾಗಿ ನಾನೇ ಅಂದು ಬಿಲ್ಲನ್ನು ಪಾವತಿಸಿದೆ” ಎಂದು ಗೊಗೊಯ್ ಬರೆದಿದ್ದಾರೆ.

ಇದನ್ನೂ ಓದಿ:ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name God; ಸಾಕ್ಷ್ಯಚಿತ್ರ ನೋಡಿ

ರಂಜನ್‌ ಗೊಗೊಯ್ ಅವರ ಆತ್ಮಚರಿತ್ರೆಯಲ್ಲಿರುವ ಒಂದು ಪುಟದ ಚಿತ್ರ

ರಂಜನ್‌ ಗೊಗೊಯ್‌ ಸುಪ್ರೀಂಕೋರ್ಟ್‌‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಬಾಬರಿ ಮಸೀದಿ ವಿವಾದದ ತೀರ್ಪು ನೀಡಿದ ಐದು ನ್ಯಾಯಾಮೂರ್ತಿಗಳ ಸಂವಿಧಾನ ಪೀಠದಲ್ಲಿ ಗೊಗೊಯ್ ನಂತರ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎಸ್‌.ಎ. ಬೋಬ್ಡೆ, ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಇದ್ದರು.

ರಂಜನ್‌ ಗೊಗೊಯ್ ಅವರು ತಮ್ಮ ಆತ್ಮಚರಿತ್ರೆಯಲ್ಲಿ ತನ್ನ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣ, 2018 ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಪತ್ರಿಕಾಗೋಷ್ಠಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬರೆದಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...