Homeಕರ್ನಾಟಕಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಬಿಜೆಪಿ ಸಂಸದ ಸುಧಾಕರ್ ವಿರುದ್ಧ ಎಫ್‌ಐಆರ್

ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಬಿಜೆಪಿ ಸಂಸದ ಸುಧಾಕರ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕ ಬಾಪೂಜಿನಗರದ ನಿವಾಸಿ ಬಾಬು ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಮೃತ ಕಾರು ಚಾಲಕ ಡೆತ್ ನೋಟ್‌ನಲ್ಲಿ ತನ್ನ ಸಾವಿಗೆ ಸಂಸದ ಡಾ. ಕೆ.ಸುಧಾಕರ್, ಅವರ ಆಪ್ತ ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಹಾಗೂ ಜಿಲ್ಲಾ ಪಂಚಾಯತಿ ಲೆಕ್ಕ ಪರಿಶೋಧಕ ಮೋಹನ್ ಕಾರಣವೆಂದು ಉಲ್ಲೇಖಿಸಿದ್ದಾರೆ. ಅದನ್ನು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

“ಮೂವರು ನನಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ” ಎಂದು ಮೃತ ಬಾಬು ಆರೋಪಿಸಿದ್ದಾರೆ.

ಬಾಬು ಅವರ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಬಾಬು ಅವರು ಬರೆದಿರುವ ಡೆತ್‌ನೋಟ್‌ನಲ್ಲಿ ಸಂಸದರ ಹೆಸರು ಉಲ್ಲೇಖಿಸಿದ್ದಾರೆ. ಆ ಡೆತ್‌ನೋಟ್‌ ಆಧರಿಸಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು. ಬಾಬು ದಲಿತ ಸಮುದಾಯಕ್ಕೆ ಸೇರಿದವರು. ಪದೇ ಪದೇ ಹಣ ಕೇಳಿದಾಗ ಒತ್ತಡಕ್ಕೆ ಒಳಗಾಗಿ ಅವರು ಸಾವಿಗೆ ಶರಣಾಗಿದ್ದಾರೆ” ಎಂದು ಸುಧಾಕರ್ ಹೇಳಿದ್ದರು. ಸಂಸದ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿದ್ದರು.

ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, “ಇದೇ ಸಾವು ಬೇರೆ ಕಡೆ ಆಗಿದ್ದರೆ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲೇ ಉಲ್ಲೇಖಿಸಿ ಅಬ್ಬರಿಸುತ್ತಿದ್ದರು. ಆದರೆ, ಈಗ ಮೌನವಾಗಿದ್ದಾರೆ. ಬಾಬು ಆತ್ಮಹತ್ಯೆ ಪ್ರಕರಣವನ್ನು ನಮ್ಮ ಸರ್ಕಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತದೆ. ಬಿಜೆಪಿಗರು ಯಾಕೆ ಮೌನವಾಗಿದ್ದಾರೆ. ಈ ಹಿಂದೆ ಮಾತನಾಡಿದಂತೆ, ಈಗಲೂ ಮಾತಾಡುವ ದಮ್ಮು ತಾಕತ್ತು ಅಶೋಕ್‌ ಮತ್ತು ಛಲವಾದಿ ನಾರಾಯಣ ಸ್ವಾಮಿಗೆ ಇದೆಯಾ?” ಎಂದು ಪ್ರಶ್ನಿಸಿದ್ದಾರೆ.

ಆದಾಗ್ಯೂ, ಪ್ರಕರಣ ಸಂಬಂಧ ಸುಧಾಕರ್ ಅವರನ್ನು ಆರ್. ಅಶೋಕ್‌ ಸಮರ್ಥಿಸಿಕೊಂಡಿದ್ದಾರೆ. ‘ಕಾಂಗ್ರೆಸ್ಸಿಗರು ವಿಪಕ್ಷದವರನ್ನು ಟಾರ್ಗೆಟ್ ಮಾಡಿದ್ದಾರೆ. ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಸುಧಾಕರ್‌ ಪಾತ್ರ ಇಲ್ಲದಿದ್ದರೂ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ.

ಬಿಜೆಪಿಯ ಇತರ ನಾಯಕರು ಈ ವಿಷಯದಿಂದ ಅಂತರ ಕಾಯ್ದುಕೊಂಡಂತಿದೆ. ಅಶೋಕ್ ಹೊರತು ಯಾವುದೇ ನಾಯಕರು ಸುಧಾಕರ್ ಪರ ಅಥವಾ ವಿರೋಧ ಹೇಳಿಕೆ ನೀಡಿಲ್ಲ.

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...