Homeಕರ್ನಾಟಕಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಬಿಜೆಪಿ ಸಂಸದ ಸುಧಾಕರ್ ವಿರುದ್ಧ ಎಫ್‌ಐಆರ್

ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಬಿಜೆಪಿ ಸಂಸದ ಸುಧಾಕರ್ ವಿರುದ್ಧ ಎಫ್‌ಐಆರ್

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕ ಬಾಪೂಜಿನಗರದ ನಿವಾಸಿ ಬಾಬು ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಮೃತ ಕಾರು ಚಾಲಕ ಡೆತ್ ನೋಟ್‌ನಲ್ಲಿ ತನ್ನ ಸಾವಿಗೆ ಸಂಸದ ಡಾ. ಕೆ.ಸುಧಾಕರ್, ಅವರ ಆಪ್ತ ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಹಾಗೂ ಜಿಲ್ಲಾ ಪಂಚಾಯತಿ ಲೆಕ್ಕ ಪರಿಶೋಧಕ ಮೋಹನ್ ಕಾರಣವೆಂದು ಉಲ್ಲೇಖಿಸಿದ್ದಾರೆ. ಅದನ್ನು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

“ಮೂವರು ನನಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ” ಎಂದು ಮೃತ ಬಾಬು ಆರೋಪಿಸಿದ್ದಾರೆ.

ಬಾಬು ಅವರ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಬಾಬು ಅವರು ಬರೆದಿರುವ ಡೆತ್‌ನೋಟ್‌ನಲ್ಲಿ ಸಂಸದರ ಹೆಸರು ಉಲ್ಲೇಖಿಸಿದ್ದಾರೆ. ಆ ಡೆತ್‌ನೋಟ್‌ ಆಧರಿಸಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು. ಬಾಬು ದಲಿತ ಸಮುದಾಯಕ್ಕೆ ಸೇರಿದವರು. ಪದೇ ಪದೇ ಹಣ ಕೇಳಿದಾಗ ಒತ್ತಡಕ್ಕೆ ಒಳಗಾಗಿ ಅವರು ಸಾವಿಗೆ ಶರಣಾಗಿದ್ದಾರೆ” ಎಂದು ಸುಧಾಕರ್ ಹೇಳಿದ್ದರು. ಸಂಸದ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿದ್ದರು.

ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, “ಇದೇ ಸಾವು ಬೇರೆ ಕಡೆ ಆಗಿದ್ದರೆ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲೇ ಉಲ್ಲೇಖಿಸಿ ಅಬ್ಬರಿಸುತ್ತಿದ್ದರು. ಆದರೆ, ಈಗ ಮೌನವಾಗಿದ್ದಾರೆ. ಬಾಬು ಆತ್ಮಹತ್ಯೆ ಪ್ರಕರಣವನ್ನು ನಮ್ಮ ಸರ್ಕಾರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತದೆ. ಬಿಜೆಪಿಗರು ಯಾಕೆ ಮೌನವಾಗಿದ್ದಾರೆ. ಈ ಹಿಂದೆ ಮಾತನಾಡಿದಂತೆ, ಈಗಲೂ ಮಾತಾಡುವ ದಮ್ಮು ತಾಕತ್ತು ಅಶೋಕ್‌ ಮತ್ತು ಛಲವಾದಿ ನಾರಾಯಣ ಸ್ವಾಮಿಗೆ ಇದೆಯಾ?” ಎಂದು ಪ್ರಶ್ನಿಸಿದ್ದಾರೆ.

ಆದಾಗ್ಯೂ, ಪ್ರಕರಣ ಸಂಬಂಧ ಸುಧಾಕರ್ ಅವರನ್ನು ಆರ್. ಅಶೋಕ್‌ ಸಮರ್ಥಿಸಿಕೊಂಡಿದ್ದಾರೆ. ‘ಕಾಂಗ್ರೆಸ್ಸಿಗರು ವಿಪಕ್ಷದವರನ್ನು ಟಾರ್ಗೆಟ್ ಮಾಡಿದ್ದಾರೆ. ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಸುಧಾಕರ್‌ ಪಾತ್ರ ಇಲ್ಲದಿದ್ದರೂ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ.

ಬಿಜೆಪಿಯ ಇತರ ನಾಯಕರು ಈ ವಿಷಯದಿಂದ ಅಂತರ ಕಾಯ್ದುಕೊಂಡಂತಿದೆ. ಅಶೋಕ್ ಹೊರತು ಯಾವುದೇ ನಾಯಕರು ಸುಧಾಕರ್ ಪರ ಅಥವಾ ವಿರೋಧ ಹೇಳಿಕೆ ನೀಡಿಲ್ಲ.

ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...