Homeಕರ್ನಾಟಕಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ - ಪ್ರಕರಣ ಭೇದಿಸಿದ...

ಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ – ಪ್ರಕರಣ ಭೇದಿಸಿದ ಪೊಲೀಸರು

- Advertisement -
- Advertisement -

ಇತ್ತೀಚೆಗೆ ತಮ್ಮ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಬೊಮ್ಮನ ಹಳ್ಳಿ ಶಾಸಕ ಸತೀಶ್‌ ರೆಡ್ಡಿ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಆದರೆ ಶುಕ್ರವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರು ಮೂವರನ್ನು ಬಂಧಿಸಿ ವಾಸ್ತವಾಂಶವನ್ನು ಬಯಲಿಗೆಳೆದಿದ್ದಾರೆ. ‘ಶಾಸಕ ಸತೀಶ್‌ ರೆಡ್ಡಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೆ ಇರುವುದರಿಂದ ಸಿಟ್ಟಾಗಿದ್ದ ಆರೋಪಿಗಳು ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಕೋಮು ಬಣ್ಣ ಹಚ್ಚುವ ಪ್ರಯತ್ನವನ್ನು ಸ್ವತಃ ಶಾಸಕ ಸತೀಶ್‌ ರೆಡ್ಡಿ ಅವರೇ ಮಾಡಿದ್ದರು. ಅಲ್ಲದೆ ಬಿಜೆಪಿ ಪರವಿರುವ ಸಂಘಪರಿವಾರದ ಕಾರ್ಯಕರ್ತರು ಬೇಗೂರು ಕೆರೆಯ ಶಿವನ ಪ್ರತಿಮೆಯ ವಿವಾದದ ಭಾಗವಾಗಿ ಅವರ ಕಾರಿಗೆ ಬೆಂಕಿ ಹಾಕಲಾಗಿದೆ ಎಂದು ಕೂಡಾ ಆರೋಪಿಸಿದ್ದರು. ಇದರ ಜೊತೆಗೆ ಹಲವು ಮಾಧ್ಯಮಗಳೂ ಕೋಮು ಬಣ್ಣ ಹಚ್ಚಿಯೆ ವರದಿ ಮಾಡಿದ್ದವು. ಆದರೆ ಕೊನೆಗೂ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಆದರೆ ಬಿಬಿಎಂಪಿ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಬಿಬಿಎಂಪಿಯ ಕೆಲಸವನ್ನು ಪ್ರಶ್ನಿಸಿದ್ದರು. ಪ್ರಕರಣವನ್ನು ಆಲಿಸಿದ್ದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ, ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು.

ಅಷ್ಟೇ ಅಲ್ಲದೆ, ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ. ಆದರೆ, ಕಾನೂನಾತ್ಮಕ ತೊಡಕು ಮತ್ತು ಪರಿಸರ ಸಮಸ್ಯೆಯನ್ನು ಸಂಘಪರಿವಾರದ ಕಾರ್ಯಕರ್ತರು ಕೋಮುದ್ವೇಷಕ್ಕೆ ಬಳಸಿಕೊಂಡಿದ್ದು, ಪ್ರಕರಣವನ್ನು ಕೋಮು ವಿವಾದವನ್ನಾಗಿ ಮಾಡಿದ್ದರು.

ಇದರ ಮದ್ಯೆ ಶಾಸಕ ಸತೀಶ್‌ ರೆಡ್ಡಿ ಅವರ ಕಾರಿಗೆ ಬೆಂಕಿ ಹಚ್ಚಿದ್ದು, ಇದನ್ನೂ ಬೇಗೂರು ಕೆರೆಯ ವಿವಾದಕ್ಕೆ ತಗಲುಹಾಕಿಕೊಂಡು ಪ್ರಕರಣವನ್ನು ಮತ್ತಷ್ಟು ಸಿಕ್ಕುಸಿಕ್ಕನ್ನಾಗಿ ಮಾಡಲಾಗಿತ್ತು. ಆದರೆ ಪೊಲೀಸರು ಪ್ರಕರಣವನ್ನು ಭೇದಿಸಿ ವಿವಾದವನ್ನು ಸ್ವಲ್ಪ ಮಟ್ಟಿಗೆ ತಣ್ಣಗಾಗಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

“ಶಾಸಕ ಸತೀಶ್ ರೆಡ್ಡಿ ಶ್ರೀಮಂತರು. ನಮ್ಮಂಥ ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ನಮ್ಮ ಸಮಸ್ಯೆಗಳನ್ನೂ ಆಲಿಸಲು ಅವರ ಬಳಿ ಸಮಯವಿಲ್ಲ. ಮನೆ ಬಳಿ ಹೋದರೂ ಅವರನ್ನು ಭೇಟಿಯಾಗಲು ಅವಕಾಶ ಸಿಗಲಿಲ್ಲ. ಇದರಿಂದ ಸಿಟ್ಟಾಗಿ, ಅವರ ಕಾರುಗಳಿಗೆ ಬೆಂಕಿ ಹಚ್ಚಿದೆವು” ಎಂದು ಆರೋಪಿಗಳು ಹೇಳಿದ್ದಾರೆಂದು ಪೊಲೀಸ್‌‌ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ಗಾರ್ವೆಬಾವಿಪಾಳ್ಯದ ನಿವಾಸಿ ಸಾಗರ್ (19), ಬೇಗೂರಿನ ಶ್ರೀಧರ್ (20) ಹಾಗೂ ನವೀನ್ ಅಲಿಯಾಸ್ ಕಾಳಪ್ಪ (22) ಬಂಧಿತರಾಗಿದ್ದು, ಆಗಸ್ಟ್‌‌ 11 ರ ಬುಧವಾರ ತಡರಾತ್ರಿ ಸತೀಶ್ ರೆಡ್ಡಿ ಅವರ ಮನೆ ಆವರಣಕ್ಕೆ ನುಗ್ಗಿದ್ದ ಆರೋಪಿಗಳು, ಅವರ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಸುಳಿವು ಪತ್ತೆ ಮಾಡಿ ಶುಕ್ರವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆಂದು ಪ್ರಜಾವಾಣಿ ವರದಿ ಹೇಳಿದೆ.

ಇದನ್ನೂ ಓದಿ: ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ವಿಡಿಯೊ ನೋಡಿ: ಬೇಗೂರು ಕೆರೆ ಉಳಿಸುವಂತೆ ಹೈಕೋರ್ಟ್ ಆದೇಶ. ಅಕ್ರಮವಾಗಿ ಶಿವ ವಿಗ್ರಹ ಅನಾವರಣಗೊಳಿಸಿದವರ ವಿರುದ್ಧ ಕ್ರಮಕ್ಕೆ ತಾಕೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯಾಂಶವನ್ನು ಬಯಲಿಗೆಳೆದ ಪೊಲೀಸರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...

ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು

ದಲಿತ ಸಮುದಾಯದ ಅಡುಗೆ ಸಹಾಯಕಿ ನೇಮಕದ ನಂತರ ಗ್ರಾಮಸ್ಥರು ಅಂಗನವಾಡಿ ಕೇಂದ್ರವನ್ನು ಬಹಿಷ್ಕರಿಸಿದ್ದ ವಿಚಾರ ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಒಡಿಶಾದ ಕೇಂದ್ರಪಾರ ಜಿಲ್ಲಾಡಳಿತದ ಅಧಿಕಾರಿಗಳ ಮನವೊಲಿಕೆ ಬಳಿಕ ಪೋಷಕರು ಅಂಗನವಾಡಿಗೆ ಮಕ್ಕಳನ್ನು...

FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ...

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...