Homeಕರ್ನಾಟಕಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ - ಪ್ರಕರಣ ಭೇದಿಸಿದ...

ಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ – ಪ್ರಕರಣ ಭೇದಿಸಿದ ಪೊಲೀಸರು

- Advertisement -
- Advertisement -

ಇತ್ತೀಚೆಗೆ ತಮ್ಮ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಬೊಮ್ಮನ ಹಳ್ಳಿ ಶಾಸಕ ಸತೀಶ್‌ ರೆಡ್ಡಿ ಕೋಮುಬಣ್ಣ ಹಚ್ಚಲು ಪ್ರಯತ್ನಿಸಿದ್ದರು. ಆದರೆ ಶುಕ್ರವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರು ಮೂವರನ್ನು ಬಂಧಿಸಿ ವಾಸ್ತವಾಂಶವನ್ನು ಬಯಲಿಗೆಳೆದಿದ್ದಾರೆ. ‘ಶಾಸಕ ಸತೀಶ್‌ ರೆಡ್ಡಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೆ ಇರುವುದರಿಂದ ಸಿಟ್ಟಾಗಿದ್ದ ಆರೋಪಿಗಳು ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಕೋಮು ಬಣ್ಣ ಹಚ್ಚುವ ಪ್ರಯತ್ನವನ್ನು ಸ್ವತಃ ಶಾಸಕ ಸತೀಶ್‌ ರೆಡ್ಡಿ ಅವರೇ ಮಾಡಿದ್ದರು. ಅಲ್ಲದೆ ಬಿಜೆಪಿ ಪರವಿರುವ ಸಂಘಪರಿವಾರದ ಕಾರ್ಯಕರ್ತರು ಬೇಗೂರು ಕೆರೆಯ ಶಿವನ ಪ್ರತಿಮೆಯ ವಿವಾದದ ಭಾಗವಾಗಿ ಅವರ ಕಾರಿಗೆ ಬೆಂಕಿ ಹಾಕಲಾಗಿದೆ ಎಂದು ಕೂಡಾ ಆರೋಪಿಸಿದ್ದರು. ಇದರ ಜೊತೆಗೆ ಹಲವು ಮಾಧ್ಯಮಗಳೂ ಕೋಮು ಬಣ್ಣ ಹಚ್ಚಿಯೆ ವರದಿ ಮಾಡಿದ್ದವು. ಆದರೆ ಕೊನೆಗೂ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಆದರೆ ಬಿಬಿಎಂಪಿ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಬಿಬಿಎಂಪಿಯ ಕೆಲಸವನ್ನು ಪ್ರಶ್ನಿಸಿದ್ದರು. ಪ್ರಕರಣವನ್ನು ಆಲಿಸಿದ್ದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ, ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು.

ಅಷ್ಟೇ ಅಲ್ಲದೆ, ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ. ಆದರೆ, ಕಾನೂನಾತ್ಮಕ ತೊಡಕು ಮತ್ತು ಪರಿಸರ ಸಮಸ್ಯೆಯನ್ನು ಸಂಘಪರಿವಾರದ ಕಾರ್ಯಕರ್ತರು ಕೋಮುದ್ವೇಷಕ್ಕೆ ಬಳಸಿಕೊಂಡಿದ್ದು, ಪ್ರಕರಣವನ್ನು ಕೋಮು ವಿವಾದವನ್ನಾಗಿ ಮಾಡಿದ್ದರು.

ಇದರ ಮದ್ಯೆ ಶಾಸಕ ಸತೀಶ್‌ ರೆಡ್ಡಿ ಅವರ ಕಾರಿಗೆ ಬೆಂಕಿ ಹಚ್ಚಿದ್ದು, ಇದನ್ನೂ ಬೇಗೂರು ಕೆರೆಯ ವಿವಾದಕ್ಕೆ ತಗಲುಹಾಕಿಕೊಂಡು ಪ್ರಕರಣವನ್ನು ಮತ್ತಷ್ಟು ಸಿಕ್ಕುಸಿಕ್ಕನ್ನಾಗಿ ಮಾಡಲಾಗಿತ್ತು. ಆದರೆ ಪೊಲೀಸರು ಪ್ರಕರಣವನ್ನು ಭೇದಿಸಿ ವಿವಾದವನ್ನು ಸ್ವಲ್ಪ ಮಟ್ಟಿಗೆ ತಣ್ಣಗಾಗಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

“ಶಾಸಕ ಸತೀಶ್ ರೆಡ್ಡಿ ಶ್ರೀಮಂತರು. ನಮ್ಮಂಥ ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ನಮ್ಮ ಸಮಸ್ಯೆಗಳನ್ನೂ ಆಲಿಸಲು ಅವರ ಬಳಿ ಸಮಯವಿಲ್ಲ. ಮನೆ ಬಳಿ ಹೋದರೂ ಅವರನ್ನು ಭೇಟಿಯಾಗಲು ಅವಕಾಶ ಸಿಗಲಿಲ್ಲ. ಇದರಿಂದ ಸಿಟ್ಟಾಗಿ, ಅವರ ಕಾರುಗಳಿಗೆ ಬೆಂಕಿ ಹಚ್ಚಿದೆವು” ಎಂದು ಆರೋಪಿಗಳು ಹೇಳಿದ್ದಾರೆಂದು ಪೊಲೀಸ್‌‌ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ಗಾರ್ವೆಬಾವಿಪಾಳ್ಯದ ನಿವಾಸಿ ಸಾಗರ್ (19), ಬೇಗೂರಿನ ಶ್ರೀಧರ್ (20) ಹಾಗೂ ನವೀನ್ ಅಲಿಯಾಸ್ ಕಾಳಪ್ಪ (22) ಬಂಧಿತರಾಗಿದ್ದು, ಆಗಸ್ಟ್‌‌ 11 ರ ಬುಧವಾರ ತಡರಾತ್ರಿ ಸತೀಶ್ ರೆಡ್ಡಿ ಅವರ ಮನೆ ಆವರಣಕ್ಕೆ ನುಗ್ಗಿದ್ದ ಆರೋಪಿಗಳು, ಅವರ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಸುಳಿವು ಪತ್ತೆ ಮಾಡಿ ಶುಕ್ರವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆಂದು ಪ್ರಜಾವಾಣಿ ವರದಿ ಹೇಳಿದೆ.

ಇದನ್ನೂ ಓದಿ: ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ವಿಡಿಯೊ ನೋಡಿ: ಬೇಗೂರು ಕೆರೆ ಉಳಿಸುವಂತೆ ಹೈಕೋರ್ಟ್ ಆದೇಶ. ಅಕ್ರಮವಾಗಿ ಶಿವ ವಿಗ್ರಹ ಅನಾವರಣಗೊಳಿಸಿದವರ ವಿರುದ್ಧ ಕ್ರಮಕ್ಕೆ ತಾಕೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯಾಂಶವನ್ನು ಬಯಲಿಗೆಳೆದ ಪೊಲೀಸರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...